ಬೆಂಗಳೂರು : ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ 1924 ಡಿಸೆಂಬರ್ 24 ರಂದು, ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ನಡೆದಿತ್ತು. ಇದೀಗ ಮುಂಬರುವ ಡಿಸೆಂಬರ್ 24ಕ್ಕೆ ನೂರು ವರ್ಷ ಪೂರೈಸುವ ಹಿನ್ನೆಲೆಯಲ್ಲಿ ಡಿಸೆಂಬರ್ 24 ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಆಚರಿಸಲಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಬೆಂಗಳೂರಿನಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಸಾಧನೆ ಮಾಡಿದಂತಹ ಸಾಧಕರಿಗೆ ಗಾಂಧಿಜಿ ಸೇವಾ ಪ್ರಶಸ್ತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೆಳಗಾವಿಯಲ್ಲಿ 1924ರ ಡಿಸೆಂಬರ್ 24ರಂದು ಕಾಂಗ್ರೆಸ್ ಅಧಿವೇಶ ನಡೆಯಿತು. ಇದರ ಶತಮಾನೋತ್ಸವ ಆಚರಣೆ ಮಾಡುತ್ತಿದ್ದೇವೆ. ಮೊದಲ ಶತಮಾನೋತ್ಸವ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತದೆ. ಸಚಿವ ಹೆಚ್.ಕೆ ಪಾಟೀಲ್ ಅವರು ಇದಕ್ಕೆ ಅಧ್ಯಕ್ಷರಾಗಿರುತ್ತಾರೆ. ಮಹಾತ್ಮ ಗಾಂಧಿಜಿಯವರು ಶಾಂತಿಯುತವಾಗಿ, ಸತ್ಯಗ್ರಹದಿಂದ ಬ್ರಿಟಿಷರನ್ನು ದೇಶದಿಂದ ಓಡಿಸಿ ಸ್ವಾತಂತ್ರ್ಯ ತಂದುಕೊಟ್ಟರು ಎಂದು ಹೇಳಿದರು.