ಬೆಂಗಳೂರು: ನಾಗಸಂದ್ರ ಮತ್ತು ಮಾಧವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ದಿನಾಂಕ 03ನೇ ಅಕ್ಟೋಬರ್ 2024 ರಂದು ಸುರಕ್ಷತಾ ತಪಾಸಣೆ ನಡೆಸುತ್ತರುವುದರಿಂದ ಹಸಿರು ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ನಾಗಸಂದ್ರ ಮತ್ತು ಮಾಧವರ ನಿಲ್ದಾಣಗಳ ನಡುವಿನ ಹೊಸ ಮಾರ್ಗವನ್ನು ಮೆಟ್ರೋ ರೈಲ್ವೆ ಸುರಕ್ಷತ ಆಯುಕ್ತರಿಂದ ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಸುತ್ತಿರುವುದರಿಂದ, ದಿನಾಂಕ 3ನೇ ಅಕ್ಟೋಬರ್ 2024 ರಂದು ಹಸಿರು ಮಾರ್ಗದಲ್ಲಿ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಬದಲಾವಣೆಯಾಗಲಿದೆ ಎಂದಿದೆ.
ದಿನಾಂಕ 3ನೇ ಅಕ್ಟೋಬರ್ 2024 ರಂದು ನಾಗಸಂದ್ರ ಮತ್ತು ಪೀಣ್ಯ ಇಂಡಸ್ಟ್ರಿ ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ವಾಣಿಜ್ಯ ಸೇವೆ ಲಭ್ಯವಿರುವುದಿಲ್ಲ, ಈ ಅವಧಿಯಲ್ಲಿ ಪೀಣ್ಯ ಇಂಡಸ್ಟ್ರಿ ಮತ್ತು ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಎಂದಿನಂತೆ ಲಭ್ಯವಿರುತ್ತದೆ. ಬೆಳಿಗ್ಗೆ 9.00 ಗಂಟಿಗೆ ರೇಷ್ಮೆ ಸಂಸ್ಥೆಯಿಂದ ಹೊರಡುವ ಕೊನೆಯ ರೈಲು ನಾಗಸಂದ್ರ ನಿಲ್ದಾಣಕ್ಕೆ ತಲುಪಲಿದೆ ಎಂದು ಹೇಳಿದೆ.
ನೇರಳೆ ಮಾರ್ಗದ ಮೆಟ್ರೋ ರೈಲು ಕಾರ್ಯಾಚರಣೆಯಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ನಮ್ಮ ಮೆಟ್ರೋ ಪ್ರಯಾಣಿಕರು ಸದರಿ ಬದಲಾವಣೆಯನ್ನು ಗಮನಿಸಲು ಮತ್ತು ಸಹಕರಿಸಲು ಕೋರಿದೆ. ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸಿದೆ.
ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೋ ನಿಲ್ದಾಣಗಳ ನಡುವೆ ಅಕ್ಟೋಬರ್ 3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2ರ ವರೆಗೆ ʼನಮ್ಮ ಮೆಟ್ರೋʼ ರೈಲು ಸಂಚಾರ ಇರುವುದಿಲ್ಲ.
ನಾಗಸಂದ್ರ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳ ನಡುವಿನ ಹೊಸ ರೈಲು ಮಾರ್ಗದಲ್ಲಿ ರೈಲು ಸುರಕ್ಷತಾ ಆಯುಕ್ತರಿಂದ ʼಶಾಸನಬದ್ಧ ಸುರಕ್ಷತಾ ತಪಾಸಣೆʼ… pic.twitter.com/bkNrEZU21F
— DIPR Karnataka (@KarnatakaVarthe) October 2, 2024