ಮೈಸೂರು : ಜನರು, ಚಾಮುಂಡಿದೇವಿ ಆಶೀರ್ವಾದದಿಂದ ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜನರು, ಚಾಮುಂಡಿದೇವಿ ಆಶೀರ್ವಾದದಿಂದ ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ನಾನು ರಾಜಕಾರಣದಲ್ಲಿ ಇಷ್ಟು ದಿನ ಇರುತ್ತೀರಲಿಲ್ಲ. ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನೀಡಲ್ಲ. ಜನರ ಾಶೀರ್ವಾದ ಇರುವವರಗೂ ನನ್ನನ್ನು ಏನೂ ಮಾಡೋಕೆ ಆಗಲ್ಲ ಎಂದು ಹೇಳಿದ್ದಾರೆ.
ಶಾಸಕ ಜಿ.ಟಿ.ದೇವೇಗೌಡರು ಮುಡಾ ಸದಸ್ಯರಾಗಿದ್ದಾರೆ. ಅವರಿಗೆ ಸತ್ಯ ಗೊತ್ತಿದೆ. ಹೀಗಾಗಿ ಸತ್ಯವಾಗಿ ಮಾತನಾಡಿದ್ದಾರೆ ಎಂದರು.







