ಉಡುಪಿ : ರಾಜ್ಯದಲ್ಲಿ ಘನ ಘೋರವಾದಂತಹ ಘಟನೆ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿದ್ದರಿಂದ ಸುಮಾರು ಒಂದು ಸಾವಿರಕ್ಕೂ ಅಧಿಕ ಜನರು ವಾಂತಿ ಭೇಧಿಯಿಂದ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಹೌದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪಂದ ಗ್ರಾಮ ಪಂಚಾಯತದಲ್ಲಿ ಈ ಒಂದು ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ 6ನೇ ಮತ್ತು 7ನೇ ವಾರ್ಡ್ನಲ್ಲಿ ಕುಡಿಯುವ ನೀರು ಸಂಪೂರ್ಣವಾಗಿ ಕಲುಷಿತಗೊಂಡಿದೆ.
ಕಲುಷಿತ ನೀರು ಸೇವಿಸಿ ಕರ್ಕಿಹಳ್ಳಿ ಹಾಗೂ ಮೆಡಿಕಲ್ ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಕಾಫಿನಾಡಿಯಲ್ಲಿರುವ ಟ್ಯಾಂಕಿನಿಂದ ಈ ಒಂದು ಕಲುಷಿತ ನೀರು ಪೂರೈಕೆ ಆಗಿದೆ ಎಂದು ಹೇಳಲಾಗುತ್ತಿದ್ದು, ಕರ್ಕಿಕಳ್ಳಿಯಲ್ಲಿ ಸುಮಾರು 500 ಜನ ಮೆಡಿಕಲ್ ನಲ್ಲಿ 600 ಜನ ಅಸ್ವಸ್ಥರಾಗಿದ್ದಾರೆ.
ವಾರ್ಡ್ನ ಪ್ರತಿ ಮನೆಯಲ್ಲಿ ಮೂರಕ್ಕೂ ಅಧಿಕ ಜನರಿಗೆ ವಾಂತಿ ಭೇದಿ ಆಗಿದ್ದು, 80 ವರ್ಷದ ವೃದ್ಧನ ಸ್ಥಿತಿ ಗಂಭೀರವಾಗಿದೆ. ತಕ್ಷಣ ವೃದ್ಧನನ್ನು ಕುಂದಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳು ಸ್ಥಳೀಯರು ಆಗ್ರಹಿಸಿದ್ದಾರೆ.