Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

ಜೂನ್ನಲ್ಲಿ ಭಾರತದಲ್ಲಿ ಫ್ರೆಶರ್ ನೇಮಕಾತಿ ಶೇ.11ರಷ್ಟು ಏರಿಕೆ: ವರದಿ

03/07/2025 9:14 AM

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿದಾರರಿಗೆ’ ಗುಡ್ ನ್ಯೂಸ್ : 2 ತಿಂಗಳಲ್ಲಿ ಅರ್ಜಿ ವಿಲೇವಾರಿ, ಅರ್ಹರಿಗೆ `ಭೂಮಿ’ ಮಂಜೂರು!
KARNATAKA

ರಾಜ್ಯ ಸರ್ಕಾರದಿಂದ `ಬಗರ್ ಹುಕುಂ ಸಾಗುವಳಿದಾರರಿಗೆ’ ಗುಡ್ ನ್ಯೂಸ್ : 2 ತಿಂಗಳಲ್ಲಿ ಅರ್ಜಿ ವಿಲೇವಾರಿ, ಅರ್ಹರಿಗೆ `ಭೂಮಿ’ ಮಂಜೂರು!

By kannadanewsnow5706/10/2024 6:16 AM

ಬೆಂಗಳೂರು : “ಬಗರ್ ಹುಕುಂ” ಅರ್ಜಿ ವಿಲೇವಾರಿ ಕೆಲಸಗಳಿಗೆ ಸಂಬಂಧಿಸಿ ಸಕಾರಾತ್ಮಕವಾಗಿ ಕೆಲಸ ನಿರ್ವಹಿಸದ ತಹಶೀಲ್ದಾರರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದರು.

ಶನಿವಾರ ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ತಹಶೀಲ್ದಾರ್ ಹಾಗೂ ಉಪ ವಿಭಾಗಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಸಭೆ ನಡೆಸಿ ಎಚ್ಚರಿಕೆ ನೀಡಿದ ಅವರು, “ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಅಧಿಕಾರಿಗಳು ಈಗಲೂ ಮೀನಾಮೇಷ ಎಣಿಸುವುದು ಸರಿಯಲ್ಲ. ಹೀಗಾಗಿ ಎಲ್ಲಾ ತಹಶೀಲ್ದಾರರಿಗೆ ಅಕ್ಟೋಬರ್ ಹಾಗೂ ನವೆಂಬರ್ ಅಂತ್ಯದವರೆಗೆ ಎರಡು ತಿಂಗಳ ಗಡುವು ನೀಡುತ್ತಿದ್ದು, ಈ ಅವಧಿಯಲ್ಲೂ ಬಗರ್ ಹುಕುಂ ಅರ್ಜಿಗಳ ಸಮರ್ಪಕ ವಿಲೇವಾರಿ ಹಾಗೂ ಅರ್ಹ ರೈತರಿಗೆ ಭೂ ಮಂಜೂರು ಆಗದಿದ್ದರೆ, ಸಂಬಂಧಿತ ತಹಶೀಲ್ದಾರರಿಗೆ ನೋಟೀಸ್ ಜಾರಿಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

“ಅರ್ಹ ಭೂ ಹೀನರಿಗೆ ಜಮೀನು ಮಂಜೂರು ಮಾಡಬೇಕು ಎಂಬುದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ಇದೇ ಕಾರಣಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಅಕ್ರಮ ಸಕ್ರಮ ಯೋಜನೆಯ ಅಡಿ “ಬಗರ್ ಹುಕುಂ” ಅರ್ಜಿ ಆಹ್ವಾನಿಸಲಾಯಿತು. ಅಲ್ಲದೆ, ಕಳೆದ ಒಂದು ವರ್ಷದಿಂದ ಸ್ವತಃ ನಾನು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡುತ್ತಾ, ಬಗರ್ ಹುಕುಂ ಸಂಬಂಧಿತ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೂ, ಕೆಲವು ಅಧಿಕಾರಿಗಳ ಕೆಲಸ ತೃಪ್ತಿಕರವಾಗಿಲ್ಲ. ಬಡವರ ರೈತರ ಪರ ಕೆಲಸ ಮಾಡಲು ಅಸಡ್ಡೆ ತೋರುತ್ತಿದ್ದಾರೆ” ಎಂದು ಅಸಮಾಧಾನ ಹೊರಹಾಕಿದರು.

ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಮಾಡಲು ಅಧಿಕಾರಿಗಳಿಗಿರುವ ಸಮಸ್ಯೆ ಏನು? ಒಂದು ವರ್ಷದ ನಂತರವೂ ಅಧಿಕಾರಿಗಳು ಈ ಬಗ್ಗೆ ತಡ ಮಾಡುವುದರಲ್ಲಿ ಅರ್ಥವಿಲ್ಲ. ನಮೂನೆ 50, 53 ಮತ್ತು 57ರ ಅಡಿಯಲ್ಲಿ 14ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ ಅನರ್ಹ ಅರ್ಜಿಗಳೇ ಬಹುಪಾಲಿವೆ. ಹೀಗಾಗಿ ಅಧಿಕಾರಿಗಳು ತಮ್ಮ ವಿವೇಚನೆಯ ಮೇಲೆ ಅನರ್ಹ ಅರ್ಜಿಗಳನ್ನು ಅನೂರ್ಜಿತಗೊಳಿಸಿ ಅರ್ಹರಿಗೆ ಶೀಘ್ರ ಜಮೀನು ಮಂಜೂರು ಮಾಡಬೇಕು, ಅಕ್ಟೋಬರ್-ನವೆಂಬರ್ ತಿಂಗಳಲ್ಲಿ ಈ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದೇ ತಿಂಗಳ ಅಂತ್ಯದಲ್ಲಿ ಮತ್ತೊಂದು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗುವುದು” ಎಂದು ತಿಳಿಸಿದರು.

ಅರ್ಹರ ಗ್ರ್ಯಾಂಟ್ ಗೆ ವಿಳಂಬ ಬೇಡ

ಅರ್ಹ ಫಲಾನುಭವಿಗಳಿಗೆ ಭೂ ಮಂಜೂರು ಮಾಡಲು ವಿಳಂಬ ಧೋರಣೆ ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈವರೆಗೆ ಎಷ್ಟು ಜನರ ಅರ್ಜಿಗಳು ಅರ್ಹ ಎಂದು ಅಧಿಕಾರಿಗಳು ಗುರುತಿಸಿದ್ದೀರೋ ಆ ಎಲ್ಲರಿಗೂ ಮುಂದಿನ ಒಂದೆರಡು ವಾರದಲ್ಲಿ ಸಾಗುವಳಿ ಚೀಟಿ ನೀಡಿ. ಬಗರ್ ಹುಕುಂ ಕಮಿಟಿ ಸಭೆ ನಡೆಸಲು ಶಾಸಕರು ಸಮಯ ನೀಡದಿದ್ದರೆ ದಯವಿಟ್ಟು ನನಗೆ ತಿಳಿಸಿ, ನಾನು ಅವರ ಜೊತೆ ಮಾತನಾಡಿ ಸಮಯ ನಿಗದಿಗೊಳಿಸುತ್ತೇನೆ ಎಂದು ಆಶ್ವಾಸನೆ ನೀಡಿದರು.

ಇದೇ ಸಂದರ್ಭದಲ್ಲಿ, ಗುಂಡ್ಲುಪೇಟೆ ತಾಲೂಕಿನಲ್ಲಿ ಈಗಾಗಲೇ 15 ಅರ್ಹ ಫಲಾನುಭವಿಗಳನ್ನು ಗುರುತಿಸಿ ಭೂ ಮಂಜೂರು ಮಾಡಲಾಗಿದ್ದು, ತಹಶೀಲ್ದಾರರ ಕೆಲಸಕ್ಕೆ ಸಚಿವರು ಮೆಚ್ಚುಗೆ ಸೂಚಿಸಿದರು. ಅಲ್ಲದೆ, ಉಳಿದ ಅರ್ಜಿಗಳನ್ನೂ ಶೀಘ್ರ ವಿಲೇವಾರಿಗೊಳಿಸುವಂತೆ ಸೂಚಿಸಿದರು.

‘ವಿಎ’ ಗಳನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳಿಸಬೇಡಿ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಈಗಾಗಲೇ ಕೆಲಸದ ಒತ್ತಡ ಹೆಚ್ಚಾಗಿದೆ. ಹೀಗಾಗಿ ಅವರನ್ನು ಅನಗತ್ಯವಾಗಿ ಫೀಲ್ಡ್ ಗೆ ಕಳುಹಿಸಬೇಡಿ ಎಂದು ತಹಶೀಲ್ದಾರರಿಗೆ ಸಚಿವ ಕೃಷ್ಣ ಬೈರೇಗೌಡ ತಾಕೀತು ಮಾಡಿದರು.

“ಈಗಾಗಲೇ ಸಲ್ಲಿಕೆಯಾಗಿರುವ ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ಅರ್ಜಿಗಳು ಯಾವುವು? ಅನರ್ಹ ಅರ್ಜಿಗಳು ಯಾವುವು ಎಂದು ತಹಶೀಲ್ದಾರ್ ಗಳಿಗೆ ಪ್ರಾಥಮಿಕ ಪರಿಶೀಲನೆಯಲ್ಲೆ ತಿಳಿಯುತ್ತದೆ. ಹೀಗಾಗಿ ಈ ಕೆಲಸವನ್ನು ಅಧಿಕಾರಿಗಳು ಕಚೇರಿಯಲ್ಲೇ ಮುಗಿಸಿ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕೆಳಗೆ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಅವರಿಗೆ ಅನಗತ್ಯವಾಗಿ ಕೆಲಸ ನೀಡಬೇಡಿ. ಅನರ್ಹ ಅರ್ಜಿಗಳ ಪರಿಶೀಲನೆಗಾಗಿ ಅವರನ್ನು ಫೀಲ್ಡ್ ಗೆ ಕಳುಹಿಸಬೇಡಿ” ಎಂದು ತಾಕೀತು ಮಾಡಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯ ಹಾಗೂ ಕಂದಾಯ ಆಯುಕ್ತರಾದ ಸುನೀಲ್ ಕುಮಾರ್ ಅವರು ಉಪಸ್ಥಿತರಿದ್ದರು.

'land' allotted to eligible people Good news for 'Bagar Hukum cultivators' from state government: Applications disposed of in 2 months ಅರ್ಹರಿಗೆ `ಭೂಮಿ’ ಮಂಜೂರು! ರಾಜ್ಯ ಸರ್ಕಾರದಿಂದ `ಬಗರ್ ಹುಕುಂ’ ಸಾಗುವಳಿದಾರರಿಗೆ ಗುಡ್ ನ್ಯೂಸ್!
Share. Facebook Twitter LinkedIn WhatsApp Email

Related Posts

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM1 Min Read

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM2 Mins Read

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM3 Mins Read
Recent News

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

03/07/2025 9:15 AM

ಜೂನ್ನಲ್ಲಿ ಭಾರತದಲ್ಲಿ ಫ್ರೆಶರ್ ನೇಮಕಾತಿ ಶೇ.11ರಷ್ಟು ಏರಿಕೆ: ವರದಿ

03/07/2025 9:14 AM

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM

SHOCKING : `ಹೃದಯಾಘಾತ’ದಿಂದ ಕುಸಿದು ಬಿದ್ದ ವೃದ್ಧನಿಗೆ `CPR’ ನೀಡಿ ಜೀವ ಉಳಿಸಿದ ವೈದ್ಯ : ವಿಡಿಯೋ ವೈರಲ್ | WATCH VIDEO

03/07/2025 9:06 AM
State News
KARNATAKA

SHOCKING : ಕೋಲಾರದಲ್ಲಿ ಘೋರ ಘಟನೆ : ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್, ಸ್ಥಳದಲ್ಲೇ ಸಾವು.!

By kannadanewsnow5703/07/2025 9:15 AM KARNATAKA 1 Min Read

ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಗರ್ಭಿಣಿ ರುಂಡ ಕಟ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.