Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ : ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ!
KARNATAKA

BIG NEWS : ರಾಜ್ಯದಲ್ಲಿ `ಸೈಬರ್ ಅಪರಾಧ’ ತಡೆಗೆ ಮಹತ್ವದ ಕ್ರಮ : ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ!

By kannadanewsnow5706/10/2024 10:56 AM

ಧಾರವಾಡ : ಹೆಚ್ಚುತ್ತಿರುವ ಸೈಬರ್ ಅಪರಾಧಗಳ ತಡೆಗಟ್ಟಲು ಈಗಾಗಲೇ ಅಸ್ತಿತ್ವದಲ್ಲಿರುವ ಸೆನ್ ಠಾಣೆ (ಅಇಓ, ಸೈಬರ್ ಆರ್ಥಿಕ ಹಾಗೂ ನಾರ್ಕೊಟಿಕ್ಸ) ಠಾಣೆಗಳಿಗೆ ಎಸ್.ಪಿ. ರ್ಯಾಂಕನ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ಗೃಹ ಸಚಿವರಾದ ಜಿ. ಪರಮೇಶ್ವರ ಅವರು ಇಂದು ತಿಳಿಸಿದರು.

ರಾಷ್ಟ್ರೀಯ ವಿಧಿ ವಿಜ್ಞಾನ ಸಂಸ್ಥೆಯ ವಿವಿಧ ವಿಭಾಗಗಳಿಗೆ ಹಾಗೂ ಪ್ರಯೋಗಾಲಯಗಳಿಗೆ ಭೇಟಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದಿನೇ ದಿನೇ ಹೆಚ್ಚುತ್ತಿರುವ ಸೈಬರ್ ಅಪರಾಧಗಳು ಎಲ್ಲೆಡೆ ಯಾವುದೇ ಅಡೆತಡೆಗಳಿಲ್ಲದೇ ರಾಜ್ಯ, ದೇಶ, ವಿದೇಶದಾದ್ಯಂತ ನಡೆಯುತ್ತಿವೆ. ಈ ಹಿನ್ನಲೆಯಲ್ಲಿ ಆಧುನಿಕ ಅಪರಾಧ ತನಿಖೆಗಳಿಗೆ ತಕ್ಕಂತೆ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು ಯಾವುದೇ ಸೈಬರ್ ಅಪರಾಧವಾದರೆ ಹೊಸ ಕಾನೂನುಗಳನ್ವಯ ತನಿಖೆ ನಡೆಸಬೇಕಾಗುತ್ತದೆ ಎಂದರು.

ಪ್ರತಿ ಜಿಲ್ಲೆಗೊಂದರಂತೆ ರಾಜ್ಯದಲ್ಲಿ ಒಟ್ಟು 43 ಸೆನ್ ಪೊಲೀಸ್ ಠಾಣೆಗಳಿದ್ದು, ಸದ್ಯ ಡಿವೈಎಸ್ಪಿ ಅಧಿಕಾರಿಗಳು ಇರುತ್ತಾರೆ. ಮುಂದಿನ ದಿನಗಳಲ್ಲಿ ಎಸ್.ಪಿ ರ್ಯಾಂಕ್ ಅಧಿಕಾರಿಗಳನ್ನು ನೇಮಿಸಲಾಗುವುದೆಂದು ತಿಳಿಸಿದರು. ಸೆನ್ ಠಾಣೆಯ ಸಿಬ್ಬಂದಿಗಳಿಗೆ ಹಾಗೂ ಅಧಿಕಾರಿಗಳಿಗೆ ವಿಶೇಷ ರೀತಿಯ ತರಬೇತಿಗಳನ್ನು ರೂಪಿಸಲಾಗುವುದು. ಈ ಹಿನ್ನಲೆಯಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ರಾಜ್ಯದ ಪೊಲೀಸ್ ಇಲಾಖೆಗೆ ಹೆಚ್ಚು ಉಪಯೋಗವಾಗಲಿದೆ ಎಂದರು.

ದಿನೇ ದಿನೇ ಅಪರಾಧಗಳ ರೂಪರೇಷೆ ಬದಲಾಗುತ್ತಿದೆ. ತನಿಖೆಯ ಮಾರ್ಗಗಳು ಸಹ ಬದಲಾಗುತ್ತಿವೆ. ಆಧುನಿಕ ತಂತ್ರಜ್ಞಾನದ ಹಿನ್ನಲೆಯಲ್ಲಿ ಗುಪ್ತಚರ ವಿಭಾಗದಲ್ಲಿ ಪ್ರತ್ಯೇಕ ತರಬೇತಿ ನೀಡಿದಂತೆ ಸೆನ್ ಠಾಣೆ ಸಿಬ್ಬಂದಿಗಳಿಗೆ ಪ್ರತ್ಯೇಕ ತರಬೇತಿ ನೀಡಲಾಗುವುದೆಂದು ಸಚಿವರು ತಿಳಿಸಿದರು.

ಸೈಬರ್ ಕ್ರೈಂಗಳಿಗೆ ಯಾವುದೇ ಅಡೆತಡೆ ಇಲ್ಲದೇ ವಿಶ್ವವ್ಯಾಪಿಯಾಗಿವೆ. ಗುಜರಾತನಲ್ಲಿ ಸೈಬರ್ ವಿಶ್ವ ವಿದ್ಯಾಲಯ ನಿರ್ಮಿಸಲಾಗಿದ್ದು ವಿವಿಧ ದೇಶಗಳಿಂದ ಬಂದು ತರಬೇತಿ ಪಡೆಯುತ್ತಿದ್ದಾರೆ. ಇದರ ಭಾಗವಾಗಿ ಧಾರವಾಡದಲ್ಲಿ ವಿಧಿ ವಿಜ್ಞಾನ ಸಂಸ್ಥೆ ಸ್ಥಾಪಿಸಲಾಗಿದ್ದು ರಾಜ್ಯದ ಪೊಲೀಸ್ ಇಲಾಖೆಗೆ ಆಧುನಿಕ ವಿಧಿ ವಿಜ್ಞಾನವು ಅತೀ ಹೆಚ್ಚು ಮಹತ್ವ ಪಡೆದುಕೊಳ್ಳಲಿದೆಯೆಂದರು.

ಡ್ರಗ್ಸ ವಿರುದ್ಧ ಸಮರ: ರಾಜ್ಯ ಸರಕಾರವು ಡ್ರಗ್ಸ ವಿರುದ್ಧ ಸಮರ ಸಾರಿದ್ದು ಸ್ವತಃ ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಈ ಬಗ್ಗೆ ವಿಶೇಷ ಕಾರ್ಯಪಡೆ ರಚಿಸಿದ್ದಾರೆ. ಕಳೆದೊಂದು ವರ್ಷದಲ್ಲಿ 150 ಕೋಟಿ ರೂ. ಡ್ರಗ್ಸ ಬರುತ್ತಿದ್ದು ಸಾಕಷ್ಟು ಎಚ್ಚರದ ಕ್ರಮಗಳನ್ನು ವಹಿಸಲಾಗುತ್ತಿದೆ. ಈಗಾಗಲೇ ಹೈಡ್ರೊ ಗಾಂಜಾ ಎಲ್ಲೆಂದರಲ್ಲಿ ನಾಲ್ಕು ಕೋಣೆಗಳಲ್ಲಿ ಬೆಳೆಯಲಾಗುತ್ತಿದ್ದು ಇದನ್ನು ಕಂಡು ಹಿಡಿಯುವುದು ಸವಾಲಾಗಿದೆಯೆಂದರು. ಸಾಕಷ್ಟು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ 10 ಸಾವಿರ ವಿದೇಶಿಗರು ವಾಸಿಸುತ್ತಿದ್ದು ಆಫ್ರಿಕಾ ಪ್ರಜೆಗಳ ಮೇಲೆ ಹೆಚ್ಚು ನಿಗಾ ಇಡಲಾಗಿದೆ. ಕಳೆದೊಂದು ವರ್ಷದಲ್ಲಿ ಡ್ರಗ್ಸ ಧಂದೆಯಲ್ಲಿ ತೊಡಗಿದ ನೂರಾರು ವಿದ್ಯಾರ್ಥಿಗಳನ್ನು ಅವರವರ ದೇಶಕ್ಕೆ ವಾಪಸ್ ಕಳಸಲಾಗಿದೆಂದು ತಿಳಿಸಿದರು.

ನಂತರ ವಿಧಿ ವಿಜ್ಞಾನ ಸಂಸ್ಥೆಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು ಈ ವಿದ್ಯಾರ್ಥಿಗಳಿಗೆ ಬರುವ ದಿನಮಾನಗಳಲ್ಲಿ ವಿಫುಲ ಅವಕಾಶಗಳಿವೆ ಸೈಬರ್ ಫಾರೆನ್ಸಿಕ್‍ಗಳು, ಸೈಬರ್ ಕಮಾಂಡೋಗಳು, ಸೈವರ್ ಎಕ್ಸಪರ್ಟಗಳು ತಯಾರಿ ಮಾಡುವಲ್ಲಿ ವಿಧಿ ವಿಜ್ಞಾನ ಸಂಸ್ಥೆಯು ಬಹು ಮುಖ್ಯ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.

ತಂತ್ರಜ್ಞಾನಕ್ಕನುಗುಣವಾಗಿ ಅಪರಾಧ ಹಾಗೂ ಅಪರಾಧಿಗಳ ಚಟುವಟಿಕೆಗಳನ್ನು ಮೊದಲೇ ವಿಶ್ಲೇಷಿಸಲು ಸರಿಯಾದ ಉಪಕರಣಗಳ ಜೊತೆ ಪರಿಣಿತರು ಸಹ ಇರಲೇಬೇಕು. ಭಾರತೀಯ 3 ಹೊಸ ಕಾನೂನುಗಳ ಬೇಡಿಕೆಗೆ ಅನುಗುಣವಾಗಿ ಪ್ರಕರಣಗಳನ್ನು ತನಿಖೆ ಮಾಡುವಲ್ಲಿ ಅನುಕೂಲವಾಗುತ್ತದೆ. ಸೈಬರ್ ಪರಿಣಿತರರು ನೀಡುವ ವರದಿ ಹಾಗೂ ದಾಖಲೆಗಳು ಹೊಸ ಕಾನೂನಿನಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.

ಡಿಜಿಟಲ್ ವಿಧಿ ವಿಜ್ಞಾನ, ಜೌಷಧಿ ವಿಧಿ ವಿಜ್ಞಾನ, ಬಯೋಕೆಮಿಸ್ಟ್ರಿ ವಿಧಿ ವಿಜ್ಞಾನ, ಸೈಬರ್ ಸೆಕ್ಯೂರಿಟಿ ಹಾಗೂ ಪರಿಸರ ವಿಧಿ ವಿಜ್ಞಾನಗಳನ್ನು ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಕಲಿಸಲಾಗುತ್ತದೆ ಎಂದು ಸಂಸ್ಥೆಯ ನಿರ್ದೇಶಕ ಡಾ. ಮಂಜುನಾಥ ಘಾಟೆ ತಿಳಿಸಿದರು.

ಪ್ರಯೋಗಾಲಯ ಹಾಗೂ ಪ್ರಾತ್ಯಕ್ಷಿಕೆಗಳನ್ನು ಸಚಿವರು ವೀಕ್ಷಿಸಿದರು. ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್. ಕೋನರಡ್ಡಿ, ಬೆಳಗಾವಿ ವಿಭಾಗದ ಐಜಿಪಿ ವಿಕಾಸಕುಮಾರ, ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರು ಉಪಸ್ಥಿತರಿದ್ದರು.

BIG NEWS : ರಾಜ್ಯದಲ್ಲಿ `ಸೈಬರ್ ಅಪರಾಧ' ತಡೆಗೆ ಮಹತ್ವದ ಕ್ರಮ : ಪೊಲೀಸ್ ಸಿಬ್ಬಂದಿಗೆ ಅಗತ್ಯ ತರಬೇತಿ! BIG NEWS: Important steps to curb 'cyber crime' in the state: Police personnel to be trained
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.