Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM

ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ 166 ಮಂದಿಯ ಕುಟುಂಬಗಳಿಗೆ ಏರ್ ಇಂಡಿಯಾ ಮಧ್ಯಂತರ ಪರಿಹಾರ | Air India plane crash

27/07/2025 9:09 AM

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು
KARNATAKA

ಜಾತಿಗಣತಿ ವರದಿ ಇಟ್ಟುಕೊಂಡು ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗಿ: HDK ಸವಾಲು

By kannadanewsnow0907/10/2024 2:31 PM

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದ್ದಾರೆ.

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!!

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಮೂಡಾ ಅಕ್ರಮದಿಂದ ರಕ್ಷಣೆ ಪಡೆಯಲು ಯತ್ನ:

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿ ಗಣತಿ ವರದಿ ಇಟ್ಟುಕೊಂಡು ಚುನಾವಣೆಗೆ ಹೋಗಿ

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು; ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು ಕೇಂದ್ರ ಸಚಿವರು ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು. ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

ಪರಿಶಿಷ್ಟ ಜಾತಿ ಸಮುದಾಯದವರಿಗೆ ಗುಡ್ ನ್ಯೂಸ್: ಚರ್ಮ ಕೈಗಾರಿಕೆಯಲ್ಲಿ ವಿವಿಧ ಯೋಜನೆಗಾಗಿ ಆನ್‌ಲೈನ್ ಅರ್ಜಿ ಆಹ್ವಾನ

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

Share. Facebook Twitter LinkedIn WhatsApp Email

Related Posts

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM2 Mins Read

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM2 Mins Read

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

27/07/2025 8:36 AM1 Min Read
Recent News

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

27/07/2025 9:14 AM

ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ 166 ಮಂದಿಯ ಕುಟುಂಬಗಳಿಗೆ ಏರ್ ಇಂಡಿಯಾ ಮಧ್ಯಂತರ ಪರಿಹಾರ | Air India plane crash

27/07/2025 9:09 AM

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM

ಆಪರೇಷನ್ ಸಿಂಧೂರ್ ಕುರಿತು NCERTಯಿಂದ ಎರಡು ವಿಶೇಷ ಮಾಡ್ಯೂಲ್ ಗಳ ಅನಾವರಣ | Operation Sindoor

27/07/2025 8:53 AM
State News
KARNATAKA

ALERT : ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ವಿಷಪೂರಿತ `ನಕಲಿ ಆಲೂಗಡ್ಡೆ’ : ಇದನ್ನು ಜಸ್ಟ್ ಹೀಗೆ ಗುರುತಿಸಿ.!

By kannadanewsnow5727/07/2025 9:14 AM KARNATAKA 2 Mins Read

ಆಲೂಗಡ್ಡೆ ಯಾವುದೇ ರೀತಿಯ ಆಹಾರದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುವ ತರಕಾರಿ. ಈ ತರಕಾರಿ ಅದರ ಭಾರೀ ಸೇವನೆಯಿಂದಾಗಿ ಯಾವಾಗಲೂ ಬೇಡಿಕೆಯಲ್ಲಿರುತ್ತದೆ. ಆದರೆ…

ALERT : ಪ್ರತಿದಿನ `ಮಾಂಸಹಾರ’ ಸೇವನೆಯಿಂದ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

27/07/2025 9:04 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ

27/07/2025 8:36 AM

BIG NEWS : `RSS’ ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು : ಸಂಸದ ಜಗದೀಶ್ ಶೆಟ್ಟರ್

27/07/2025 8:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.