Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ’ ಭೇಟಿ ಮಾಡಿದ ‘ದಕ್ಷಿಣ ಭಾರತದ ಪತ್ರಕರ್ತ’ರ ನಿಯೋಗ

07/09/2025 9:44 PM

ರಾಜ್ಯಾದ್ಯಂತ ಸೆ.22 ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ-2025 : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

07/09/2025 9:36 PM

ದಕ್ಷಿಣ ಕೊರಿಯಾ ಮಣಿಸಿ ಭಾರತ ತಂಡ ಮಹಿಳಾ ಏಷ್ಯಾ ಕಪ್ 2025ನಲ್ಲಿ ಭರ್ಜರಿ ಗೆಲುವು: ವಿಶ್ವ ಕಪ್ ಗೆ ಸ್ಥಾನ | Hockey Asia Cup

07/09/2025 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್
KARNATAKA

ನಮ್ಮ ಪಕ್ಷದ ನಾಯಕರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿ.ಕೆ. ಸುರೇಶ್

By kannadanewsnow0907/10/2024 3:54 PM

ಬೆಂಗಳೂರು : “ನಮ್ಮ ಪಕ್ಷದ ನಾಯಕರನ್ನು ನಾವು ಭೇಟಿ ಮಾಡುವುದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಪಕ್ಷದ ನಾಯಕರು ಗೌಪ್ಯ ವಾಗಿ ಸಭೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ನಮ್ಮ ಪಕ್ಷದ ನಾಯಕರು, ನಮ್ಮದೇ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದೇವೆ. ಒಂದು ವೇಳೆ ನಾವು ಯಡಿಯೂರಪ್ಪ ಅಥವಾ ಕುಮಾರಸ್ವಾಮಿ ಅವರನ್ನು ಗೌಪ್ಯವಾಗಿ ಭೇಟಿ ಮಾಡಿ ಸಭೆ ನಡೆಸಿದರೆ ಆಗ ವಿಶೇಷ ಅರ್ಥ ಕಲ್ಪಿಸಬಹುದು. ನಾವು ಪಕ್ಷ, ಸಂಘಟನೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಿದ್ದೇವೆ. ಈ ಭೇಟಿಯನ್ನು ಅನುಮಾನದಿಂದ ನೋಡುವುದು ಸರಿಯಲ್ಲ” ಎಂದು ತಿಳಿಸಿದರು.

ಕನಕಪುರ- ರಾಮನಗರ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ

ಈ ಭೇಟಿಯಲ್ಲಿ ರಾಜಕೀಯ ಚರ್ಚೆ ಆಗಿಲ್ಲವೇ ಎಂದು ಕೇಳಿದಾಗ, “ಈ ಭೇಟಿಯಲ್ಲಿ ರಾಜಕೀಯ ಇಲ್ಲ. ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಪ್ರಭಾವಿ ಸಚಿವರು. ಕನಕಪುರ ವಿಧಾನ ಸಭಾ ಕ್ಷೇತ್ರದ ಕೆಲವು ಅಭಿವೃದ್ಧಿ ಯೋಜನೆಗಳ ಮಂಜೂರಾತಿ ಬಗ್ಗೆ ಅವರ ಜತೆ ಚರ್ಚೆ ಮಾಡಲಾಯಿತು. ಅವರು ನಮ್ಮ ಮನವಿಗೆ ಒಪ್ಪಿದ್ದು, ಮುಖ್ಯಮಂತ್ರಿಗಳು ಅನುದಾನ ಬಿಡುಗಡೆ ಮಾಡಿದ ತಕ್ಷಣ ಮಂಜೂರಾತಿ ನೀಡುವುದಾಗಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಇದೇ ವೇಳೆ ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಇದಕ್ಕೂ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ” ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರು ಖರ್ಗೆ ಅವರನ್ನು ಭೇಟಿ ಮಾಡಿರುವ ಬಗ್ಗೆ ಕೇಳಿದಾಗ, “ಖರ್ಗೆ ಅವರು ನಮ್ಮ ರಾಷ್ಟ್ರೀಯ ಅಧ್ಯಕ್ಷರು. ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿ ಮಾಡಿ, ಪಕ್ಷದ ಸಂಘಟನೆ ಹಾಗೂ ವಿದ್ಯಮಾನಗಳ ಬಗ್ಗೆ ಚರ್ಚೆ ಮಾಡುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ

ನಾಯಕತ್ವದ ಬದಲಾವಣೆ ಚರ್ಚೆ ನಡೆಯಿತೆ ಎಂದು ಕೇಳಿದಾಗ, “ನಾಯಕತ್ವ ಬದಲಾವಣೆಯ ಪ್ರಶ್ನೆ ಹಾಗೂ ಚರ್ಚೆ ಎರಡೂ ಇಲ್ಲ. ಈ ಅವಧಿ ಅಂತಿಮವಾಗುವವರೆಗೂ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಇದನ್ನು ಈ ಹಿಂದೆಯೂ ಬಹಳಷ್ಟು ಬಾರಿ ಸ್ಪಷ್ಟಪಡಿಸಿದ್ದೇನೆ. ಮುಡಾ ಪ್ರಕರಣ ನ್ಯಾಯಾಲಯದಲ್ಲಿದ್ದು, ನ್ಯಾಯಾಲಯ ತನಿಖೆ ಆಗಬೇಕು ಎಂದು ಹೇಳಿದ್ದು, ತನಿಖೆ ನಡೆಯಲಿದೆ. ತನಿಖೆ ನಡೆಯುತ್ತಿದೆ. ತನಿಖಾ ವರದಿ ಬರುವ ತನಕ ಏಕೆ ಕಾಯುತ್ತಿಲ್ಲ? ತನಿಖೆಗೆ ಮುಕ್ತವಾದ ಸಹಕಾರ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರೂ ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸಿಎಂ ಹಾಗೂ ಸರ್ಕಾರ ದೋಷಮುಕ್ತವಾಗಲಿದ್ದಾರೆ” ಎಂದು ತಿಳಿಸಿದರು.

ನಿಷ್ಪಕ್ಷಪಾತ ತನಿಖೆಗೆ ಸಿಎಂ ರಾಜಿನಾಮೆ ನೀಡಬೇಕು ಎಂಬ ವಿಜಯೇಂದ್ರ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ವೈಯಕ್ತಿಕ ಅಭಿಪ್ರಾಯ” ಎಂದರು.

ಇಡಿ ಏಕಾಏಕಿ ಬಂಧಿಸಲು ಆಗುವುದಿಲ್ಲ

ಪ್ರಕರಣದಲ್ಲಿ ಇಡಿ ಪ್ರವೇಶ ಮಾಡಿದ್ದು ಒಂದು ವೇಳೆ ಬಂಧನವಾದರೆ ಪರ್ಯಾಯ ನಾಯಕರು ಯಾರು ಎಂಬ ಪ್ರಶ್ನೆಗೆ, “ನಾಳೆ ಬೆಳಗ್ಗೆ ಇಡಿ ಬಂದು ಬಂಧನ ಮಾಡಲು ಸಾಧ್ಯವಿಲ್ಲ. ಇಡಿಗೆ ತನ್ನದೇ ಆದ ಸಾಕ್ಷ್ಯಾಧಾರಗಳು ಸಿಗಬೇಕು, ಆರೋಪ ಸಾಬೀತಾಗಬೇಕು. ಇಡಿ ಪ್ರಕರಣ ದಾಖಲಿಸಿದ ಮಾತ್ರಕ್ಕೆ ಬಂಧಿಸಲು ಸಾಧ್ಯವಿಲ್ಲ. ಈ ಪ್ರಕರಣದಲ್ಲಿ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ನಡೆದಿಲ್ಲ. ಇನ್ನು ಈ ನಿವೇಶನಗಳನ್ನು ವಾಪಸ್ ನೀಡಲಾಗಿದೆ. ಇದರಲ್ಲಿ ಲಾಭದ ವಿಚಾರ ಇಲ್ಲ. ಶೂನ್ಯ ಹಣಕಾಸಿನ ವರ್ಗಾವಣೆ. ಇಲ್ಲಿ ಏನಾದರೂ ಲೋಪಗಳು ನಡೆದಿದ್ದರೆ ಅದನ್ನು ಲೋಕಾಯುಕ್ತ ತನಿಖಾ ಸಂಸ್ಥೆ ತನಿಖೆ ಮಾಡಲಿದೆ. ಇಡಿಯವರು ಹಣಕಾಸಿನ ವ್ಯವಹಾರಗಳ ಪ್ರಕರಣ ಮಾತ್ರ ತನಿಖೆ ಮಾಡಬೇಕು” ಎಂದು ತಿಳಿಸಿದರು.

ನಾವು ಈ ಸರ್ಕಾರ ಬೀಳಿಸಲ್ಲ, ಸರ್ಕಾರ ತಾನಾಗಿಯೇ ಬೀಳುತ್ತದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರು ಮೇಧಾವಿ, ತತ್ವಜ್ಞಾನಿಗಳು. ಅವರು ಬೆಳಗ್ಗೆ ಒಂದು, ರಾತ್ರಿ ಇನ್ನೊಂದು ಹೇಳುತ್ತಾರೆ. ಅವರನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ” ಎಂದು ತಿಳಿಸಿದರು.

ಚನ್ನಪಟ್ಟಣದ ಅನುದಾನದ ಬಗ್ಗೆ ಚರ್ಚೆಗೆ ಬರಲಿ:

ನಾನು ತಂದ ಅನುದಾನಕ್ಕೆ ಕಾಂಗ್ರೆಸ್ ನವರು ಬೋರ್ಡ್ ಹಾಕಿಕೊಳ್ಳುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಯಾರು ಎಷ್ಟು ಅನುದಾನ ತಂದಿದ್ದಾರೆ ಎಂದು ಚರ್ಚೆಗೆ ಬರಲಿ. ನಾನು ಚರ್ಚೆಗೆ ಸಿದ್ಧ. ಅವರಿಗೆ ಅನುಮಾನ ಇದ್ದರೆ, ಅವರು ಎಷ್ಟು ಅನುದಾನ ತಂದಿದ್ದಾರೆ, ಶಿವಕುಮಾರ ಅವರ ನೇತೃತ್ವದಲ್ಲಿ ನಾವು ಎಷ್ಟು ಅನುದಾನ ತಂದಿದ್ದೇವೆ ಎಂದು ಚರ್ಚೆ ಮಾಡೋಣ” ಎಂದು ತಿಳಿಸಿದರು.

ಚುನಾವಣೆ ಸಮಯದಲ್ಲಿ ಬಂದು ಟಾಟಾ ಬೈ ಬೈ ಮಾಡುತ್ತಾರೆ ಎಂಬ ಹೇಳಿಕೆಗೆ, “ಅದು ಕುಮಾರಸ್ವಾಮಿ ಅವರ ಚಟ” ಎಂದರು.

ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ: ಶ್ರೀ ನಂಜಾವಧೂತ ಸ್ವಾಮೀಜಿ

BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್

Share. Facebook Twitter LinkedIn WhatsApp Email

Related Posts

‘ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ’ ಭೇಟಿ ಮಾಡಿದ ‘ದಕ್ಷಿಣ ಭಾರತದ ಪತ್ರಕರ್ತ’ರ ನಿಯೋಗ

07/09/2025 9:44 PM1 Min Read

ರಾಜ್ಯಾದ್ಯಂತ ಸೆ.22 ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ-2025 : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

07/09/2025 9:36 PM2 Mins Read

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM1 Min Read
Recent News

‘ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ’ ಭೇಟಿ ಮಾಡಿದ ‘ದಕ್ಷಿಣ ಭಾರತದ ಪತ್ರಕರ್ತ’ರ ನಿಯೋಗ

07/09/2025 9:44 PM

ರಾಜ್ಯಾದ್ಯಂತ ಸೆ.22 ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ-2025 : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

07/09/2025 9:36 PM

ದಕ್ಷಿಣ ಕೊರಿಯಾ ಮಣಿಸಿ ಭಾರತ ತಂಡ ಮಹಿಳಾ ಏಷ್ಯಾ ಕಪ್ 2025ನಲ್ಲಿ ಭರ್ಜರಿ ಗೆಲುವು: ವಿಶ್ವ ಕಪ್ ಗೆ ಸ್ಥಾನ | Hockey Asia Cup

07/09/2025 9:30 PM

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM
State News
KARNATAKA

‘ಇಸ್ರೇಲ್ ವಿದೇಶಾಂಗ ಕಾರ್ಯದರ್ಶಿ’ ಭೇಟಿ ಮಾಡಿದ ‘ದಕ್ಷಿಣ ಭಾರತದ ಪತ್ರಕರ್ತ’ರ ನಿಯೋಗ

By kannadanewsnow0907/09/2025 9:44 PM KARNATAKA 1 Min Read

ಇಸ್ರೇಲ್: ಇಸ್ರೇಲ್ ಪ್ರವಾಸದಲ್ಲಿರುವ ದಕ್ಷಿಣ ಭಾರತ ಪತ್ರಕರ್ತರ ನಿಯೋಗ ಇಸ್ರೇಲ್ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ಈಡನ್‌ಬಾರ್ ಟಾಲ್‌ ಅವರ ಜೊತೆಗೆ‌‌…

ರಾಜ್ಯಾದ್ಯಂತ ಸೆ.22 ರಿಂದ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ-2025 : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

07/09/2025 9:36 PM

ಸಾಗರದ ಆ ಘಟನೆ ವೀಡಿಯೋ ವೈರಲ್ ಮಾಡಿದ್ರೆ ಕಾನೂನು ಕ್ರಮ: ಶಿವಮೊಗ್ಗ SP ಎಚ್ಚರಿಕೆ

07/09/2025 9:18 PM

ನಿಮ್ಮ ಮೊಬೈಲ್ ನಲ್ಲೇ `ಚಂದ್ರಗ್ರಹಣ’ ಲೈವ್ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ

07/09/2025 8:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.