ನವದೆಹಲಿ : ಜಾತಿ ಗಣತಿ ವರದಿ ಜಾರಿ ಮಾಡುವ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ವಿಚಾರವಾಗಿ ಅಧಿಕಾರದಿಂದ ಕೆಳಗಿಳಿಯುವ ಹೊತ್ತು ಬಂದಿದೆ.ಹಾಗಾಗಿ ಜಾತಿ ಗಣತಿ ಅಸ್ತ್ರದ ಬಗ್ಗೆ ಹೇಳುತ್ತಿದ್ದಾರೆ ಎಂದು ದೆಹಲಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಪ್ರತಿಕ್ರಿಯೆ ನೀಡಿದರು.
ನವದೆಹಲಿಯಲ್ಲಿ ಜಾತಿ ಗಣತಿ ವರದಿ ಜಾರಿ ಕುರಿತಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿಗಣತಿಗೆ ತಕರಾರು ಇಲ್ಲ.ಆದರೆ ಅದು ಜಾತಿಗಣತಿನೆ ಅಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಸಹ ಹೇಳಿದ್ದಾರೆ. ಅಧಿಕಾರದಿಂದ ಕೆಳಗಿಳಿಯುವ ಹೊತ್ತು ಬಂದಿದೆ.ಹಾಗಾಗಿ ಜಾತಿ ಗಣತಿ ಅಸ್ತ್ರದ ಬಗ್ಗೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದು ಚುನಾವಣಾ ಪೂರ್ವದಲ್ಲಿ ಮಾಡುವ ಸಮೀಕ್ಷೆ ಇದ್ದಂತೆ ಹಾಗಾಗಿ ಈ ಸಮೀಕ್ಷೆಯನ್ನು ಬಿಡುಗಡೆ ಮಾಡುವುದು ಬೇಡ ಸಿದ್ದರಾಮಯ್ಯನವರು ಮಾಡಿಸಿದ್ದ ಜಾತಿ ಸಮೀಕ್ಷೆಗೆ ಸಹಿ ಇಲ್ಲ ಚಾದರ ಸದಸ್ಯ ಕಾರ್ಯದರ್ಶಿ ಸಮೀಕ್ಷೆಗೆ ಸಹಿ ಮಾಡಿಲ್ಲ. ಯಾಕೆ ಸಹಿ ಮಾಡಿಲ್ಲ ಅನ್ನೋದು ಇದುವರೆಗೂ ಗೊತ್ತಾಗಿಲ್ಲ ಇದರ ಹಿಂದೆ ಒಂದು ಬಲವಾದ ಕಾರಣ ಇರಬೇಕಲ್ಲವಾ? ಎಂದು ಪ್ರಶ್ನಿಸಿದರು.