ಬೆಂಗಳೂರು : ವಿಶ್ವವಿಖ್ಯಾತ ನಾಡಹಬ್ಬ,ದಸರಾ ಅಂಗವಾಗಿ ಮೈಸೂರಿನಲ್ಲಿ ನಡೆಯುವ ಜಂಬೂ ಸವಾರಿ ವೀಕ್ಷಿಸಲು ಹಾಗೂ ವಿಜಯದಶಮಿಯಂದು ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 2,000 ಹೆಚ್ಚುವರಿ ಯಾಗಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ.
ಹೌದು ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನಿಂದ ಜಿಲ್ಲೆಗಳು ಅಂತ ರಾಜ್ಯದ ವಿವಿಧ ಸ್ಥಳಗಳಿಗೆ ಸಂಚಾರ ಮಾಡಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದಿನಿಂದ ಶನಿವಾರದವರಿಗೆ ಹೆಚ್ಚು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ.
ಮೆಜೆಸ್ಟಿಕ್ ನ ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ, ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕೆಎಸ್ಆರ್ಟಿಸಿ ಬಸ್ ಹೊರಡಲಿವೆ. ಜಿಲ್ಲಾ ಕೇಂದ್ರಗಳು ಅಂತರ್ ರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಬಸ್ ಬರಲಿದ್ದು, ಅಕ್ಟೋಬರ್ 13 ಮತ್ತು 14ರಂದು ವಿಶೇಷ ವಾಹನಗಳ ಕಾರ್ಯಾಚರಣೆ ನಡೆಯಲಿದೆ.