Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

14/05/2025 10:00 AM

ಕೌಟುಂಬಿಕ ಕಲಹಗಳನ್ನು ತಪ್ಪಿಸಲು ಮನೆಯಲ್ಲಿ ಹಚ್ಚಬೇಕಾದ ದೀಪ.!

14/05/2025 9:49 AM

BREAKING : ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾದ ‘ಅಸಂಬದ್ಧ’ ಪ್ರಯತ್ನಗಳನ್ನು ತಿರಸ್ಕರಿಸಿದ ಭಾರತ

14/05/2025 9:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ED ಬಾರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ
KARNATAKA

ED ಬಾರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು: ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ

By kannadanewsnow0910/10/2024 5:26 PM

ಕಲಬುರಗಿ : ರಾಜ್ಯದ ಕಾಂಗ್ರೆಸ್ ಸರಕಾರವು ಹಗರಣಗಳಲ್ಲಿ ಕ್ಲೀನ್ ಚಿಟ್ ಪಡೆಯಲು ಎಸ್‍ಐಟಿ, ಸಿಐಡಿಯನ್ನು ನೇಮಿಸುತ್ತದೆ ಎಂದು ಬಿಜೆಪಿ ಮಾಜಿ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಆರೋಪಿಸಿದರು.

ಈ‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಇ.ಡಿ. ಬರದೆ ಇದ್ದಲ್ಲಿ ವಾಲ್ಮೀಕಿ ನಿಗಮದ ಹಗರಣ ಮುಚ್ಚಿ ಹೋಗುತ್ತಿತ್ತು. ಸಿಬಿಐಗೆ ಹೋದಾಗ, ಅದರಲ್ಲಿ ಹಣಕಾಸು ಅವ್ಯವಹಾರ (ಮನಿ ಲಾಂಡರಿಂಗ್) ಇದೆ ಎಂದು ಗೊತ್ತಾದಾಗ ಇ.ಡಿ. ತನಿಖೆ ನಡೆಯುತ್ತದೆ ಎಂದು ಸ್ಪಷ್ಟಪಡಿಸಿದರು.

187 ಕೋಟಿ ಅವ್ಯವಹಾರ ನಡೆದುದು ನಿಜ; ಆದರೆ, ಕೇವಲ 87 ಕೋಟಿ ಅವ್ಯವಹಾರ ಆಗಿದೆ ಎಂದು ಮುಖ್ಯಮಂತ್ರಿಯವರು ಅವತ್ತೇ ಹೇಳಿದ್ದರು. ಸತ್ಯ ಒಪ್ಪಿಕೊಂಡ ಮೇಲೆ ಕ್ರಮ ಆಗಿರಲಿಲ್ಲ. ಕದ್ದ ಮಾಲು ವಾಪಸ್ ಕೊಟ್ಟರೆ ಕೇಸ್ ಖುಲಾಸೆ ಆಗುತ್ತದೆಯೇ? ಇದರಲ್ಲಿ 20 ಕೋಟಿ ಹಣವನ್ನು ತುಕಾರಾಂ ಅವರ ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ್ದಾರೆ. ನಾಗೇಂದ್ರರ ವೈಯಕ್ತಿಕ ವೆಚ್ಚವಾಗಿ ಹಣ ಖರ್ಚಾದುದರ ಕುರಿತು ಇ.ಡಿ. ವರದಿಯಲ್ಲಿ ಉಲ್ಲೇಖವಿದೆ .ಈಗ ಸಿಎಂ ಏನು ಹೇಳುತ್ತಾರೆ , ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಸಂವಿಧಾನದ ಬಗ್ಗೆ ಗೌರವ ಇದ್ದರೆ ಇಷ್ಟೊತ್ತಿಗಾಗಲೇ ಅವರು ರಾಜೀನಾಮೆ ಕೊಡಬೇಕಿತ್ತು. ಮುಡಾ ಮಾದರಿಯಲ್ಲೇ ವಾಲ್ಮೀಕಿ ನಿಗಮದ ಹಗರಣದ ಸತ್ಯಾಂಶವನ್ನು ಮುಚ್ಚಿಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡುತ್ತಿದ್ದಾರೆ .

ಒಂದು ಕೋರ್ಟ್ 14 ಸೈಟ್ ಪಡೆದುದೇ ತಪ್ಪು ಎಂದಿದೆ. ಅಲ್ಲಿ ಜಮೀನೇ ಇಲ್ಲ; ನೀವು ಹೇಗೆ ಸೈಟ್ ಪಡೆದಿರಿ ಎಂದು ಇನ್ನೊಂದು ಕೋರ್ಟ್ ಹೇಳಿದೆ. ಶೇ 50- 50 ಅನುಪಾತದಲ್ಲಿ ಪಡೆಯಲು ಸಾಧ್ಯವಿಲ್ಲ; ಇದೆಲ್ಲವೂ ಬೋಗಸ್ ಎಂದಿದೆ. ಇಷ್ಟೆಲ್ಲ ಆಗಲು, ನಿಮ್ಮ ಹೆಸರಷ್ಟೇ ಸಾಕು. ನಿಮ್ಮ ಕುಟುಂಬಕ್ಕೆ ಪ್ರಭಾವ ಬಳಸಲು ನಿಮ್ಮ ಹುದ್ದೆಯೇ ಸಾಕು .ಈ ಎರಡೂ ಕೇಸ್‍ಗಳು ರಾಜ್ಯದ ಮುಖ್ಯಮಂತ್ರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ರುಜುವಾತು ಮಾಡುತ್ತವೆ ತಮ್ಮ ತಪ್ಪನ್ನು ಅರ್ಥ ಮಾಡಿಕೊಂಡು ರಾಜೀನಾಮೆ ಕೊಟ್ಟು ಹೋಗಲಿ ಎಂದು ಆಗ್ರಹಿಸಿದರು.

ಜಾರಿ ನಿರ್ದೇಶನಾಲಯವು (ಇ.ಡಿ) ನಿನ್ನೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವರದಿ ಒಪ್ಪಿಸಿದೆ. ಈ ವರದಿಯಲ್ಲಿ ವಾಲ್ಮೀಕಿ ನಿಗಮದ ಹಣಕಾಸು ಹಗರಣದಲ್ಲಿ ಬಿ.ನಾಗೇಂದ್ರ ಮಾಸ್ಟರ್ ಮೈಂಡ್ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಯಾರೋ ಅಧಿಕಾರಿಗಳು ಇದನ್ನು ಮಾಡಿದ್ದಾರೆ; ಅವರ ಮೇಲೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದರು ಎಂದು ನುಡಿದರು.

ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯನ್ನೂ ಹೊಂದಿದ್ದು ಅವರಿಗೆ ಗೊತ್ತಿಲ್ಲದೇ ಇದೆಲ್ಲ ಆಗಲು ಸಾಧ್ಯವಿಲ್ಲ ಎಂದ ಅವರು, ಇ.ಡಿ.ವರದಿಯಲ್ಲಿ 24 ಜನರ ಹೆಸರುಗಳಿವೆ; ಸತ್ಯನಾರಾಯಣ ವರ್ಮ, ಸತ್ಯನಾರಾಯಣ, ಜೆಪಿ ಪದ್ಮನಾಭ, ನಾಗೇಶ್ವರ ರಾವ್, ನೆಕ್ಕುಂಟಿ ನಾಗರಾಜ್, ವಿಜಯಕುಮಾರ್ ಗೌಡ ಮೊದಲಾದವರ ಹೆಸರುಗಳಿವೆ ಎಂದರು.

ಮುಖ್ಯಮಂತ್ರಿಗಳಿವೆ ಇವೆಲ್ಲವೂ ಗೊತ್ತಿದ್ದರೂ ಹಗರಣ ಮುಚ್ಚಿ ಹಾಕಲು ಎಸ್‍ಐಟಿಗೆ ಕೊಟ್ಟು ಅಲ್ಲಿ ನಾಗೇಂದ್ರರ ಹೆಸರು ಪ್ರಸ್ತಾಪ ಆಗದಂತೆ ನೋಡಿಕೊಂಡಿದ್ದರು ಎಂದು ಆರೋಪಿಸಿದರು.

ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿ ಬೀದಿಯಲ್ಲಿ ಇದ್ದಷ್ಟು ಜನರಿಗೆ ತೊಂದರೆ ಆಗಲಿದೆ. ಒಂದೇ ದಿನದಲ್ಲಿ ಇದನ್ನು ಬಗೆಹರಿಸಬೇಕಿತ್ತು. ಈ ಸರಕಾರ ನಡೆಸುವುದರಲ್ಲಿ ನಿಮಗೆ ಕಾಳಜಿ ಇಲ್ಲ ಎಂದು ಆಕ್ಷೇಪಿಸಿದರು. ಸಮಸ್ಯೆಯನ್ನು ಬೇಗ ಪರಿಹರಿಸಿ ಎಂದು ಒತ್ತಾಯಿಸಿದರು.

ಮೋದಿಜೀ ಅವರ ನಾಯಕತ್ವ ಈ ದೇಶಕ್ಕೆ ಮತ್ತೆ ಅವರೇ ಬೇಕೆಂದು ಜನರು ಹರಿಯಾಣ ಮತ್ತು ಜಮ್ಮು-ಕಾಶ್ಮೀರದ ಚುನಾವಣೆ ಮೂಲಕ ತೋರಿಸಿಕೊಟ್ಟಿದ್ದಾರೆ. ಇವೆರಡು ರಾಜ್ಯಗಳಲ್ಲಿ ಈಚೆಗಷ್ಟೇ ಚುನಾವಣೆ ನಡೆದಿದೆ. ಹರಿಯಾಣದ ಜಿಲೇಬಿ ಕಾಂಗ್ರೆಸ್ ತಟ್ಟೆಗೆ ಬೀಳಲಿದೆ ಎಂಬ ಆಶಾಭಾವದಲ್ಲಿದ್ದರು. ಆದರೆ, ಅಲ್ಲಿ ಸೋತದ್ದು ಮಾತ್ರವಲ್ಲದೆ ಅಧಿಕಾರ ಪಡೆಯುವ ನಿರೀಕ್ಷೆ ಇದ್ದ ಜಮ್ಮು- ಕಾಶ್ಮೀರದಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆ ಆರು ಸೀಟಿಗೆ ಇಳಿದಿದೆ ಎಂದು ವಿಶ್ಲೇಷಿಸಿದರು.

ಹೀಗೆ ಕಾಂಗ್ರೆಸ್ಸಿನ ಸ್ಥಿತಿ ಇವತ್ತು ಚಿಂತಾಜನಕವಾಗಿದೆ. ಜಮ್ಮು- ಕಾಶ್ಮೀರದಲ್ಲಿ ಶಾಂತಿಯುತ ಮತದಾನ ನಡೆದಿದೆ. ಪರಿಶಿಷ್ಟ ಜಾತಿ, ಪಂಗಡದವರಿಗೆ 77 ವರ್ಷಗಳಿಂದ ವಂಚಿತವಾಗಿದ್ದ ಮೀಸಲಾತಿ ಲಭಿಸಿ ಅಲ್ಲಿ ನೆಮ್ಮದಿ ಲಭಿಸಿದೆ ಎಂದು ವಿವರಿಸಿದರು. ಅದಕ್ಕೆ ಮೋದಿಜೀ ಅವರಿಗೆ ಧನ್ಯವಾದ ಹೇಳಬೇಕು ಎಂದು ತೇಲ್ಕೂರ ತಿಳಿಸಿದರು.

BREAKING: ಕನ್ನಡ ಚಲನಚಿತ್ರ ನಿರ್ಮಾಪಕ, ಉದಯ ಟಿವಿ ಅಧ್ಯಕ್ಷ ಸೆಲ್ವಂ ಇನ್ನಿಲ್ಲ

BREAKING : ದಸರಾ ಹಬ್ಬಕ್ಕೂ ನಟ ದರ್ಶನ್ ಗೆ ಇಲ್ಲ ಬಿಡುಗಡೆ ಭಾಗ್ಯ : ಅ.14 ರಂದು ಆದೇಶ ಕಾಯ್ದಿರಿಸಿದ ಕೋರ್ಟ್!

Share. Facebook Twitter LinkedIn WhatsApp Email

Related Posts

ಉದ್ಯೋಗವಾರ್ತೆ : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

14/05/2025 10:00 AM1 Min Read

ಕೌಟುಂಬಿಕ ಕಲಹಗಳನ್ನು ತಪ್ಪಿಸಲು ಮನೆಯಲ್ಲಿ ಹಚ್ಚಬೇಕಾದ ದೀಪ.!

14/05/2025 9:49 AM3 Mins Read

ಸಾರ್ವಜನಿಕರೇ ಗಮನಿಸಿ : ಹೀಗಿವೆ `ಕರ್ನಾಟಕದ ಸೈಬರ್ ಪೊಲೀಸ್ ಠಾಣೆ’ಗಳ ದೂರವಾಣಿ ಸಂಖ್ಯೆ.!

14/05/2025 9:32 AM1 Min Read
Recent News

ಉದ್ಯೋಗವಾರ್ತೆ : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

14/05/2025 10:00 AM

ಕೌಟುಂಬಿಕ ಕಲಹಗಳನ್ನು ತಪ್ಪಿಸಲು ಮನೆಯಲ್ಲಿ ಹಚ್ಚಬೇಕಾದ ದೀಪ.!

14/05/2025 9:49 AM

BREAKING : ಅರುಣಾಚಲ ಪ್ರದೇಶದ ಸ್ಥಳಗಳ ಮರುನಾಮಕರಣಕ್ಕೆ ಚೀನಾದ ‘ಅಸಂಬದ್ಧ’ ಪ್ರಯತ್ನಗಳನ್ನು ತಿರಸ್ಕರಿಸಿದ ಭಾರತ

14/05/2025 9:44 AM

ಸಾರ್ವಜನಿಕರೇ ಗಮನಿಸಿ : ಹೀಗಿವೆ `ಕರ್ನಾಟಕದ ಸೈಬರ್ ಪೊಲೀಸ್ ಠಾಣೆ’ಗಳ ದೂರವಾಣಿ ಸಂಖ್ಯೆ.!

14/05/2025 9:32 AM
State News
KARNATAKA

ಉದ್ಯೋಗವಾರ್ತೆ : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By kannadanewsnow5714/05/2025 10:00 AM KARNATAKA 1 Min Read

ದಾವಣಗೆರೆ : ಪ್ರಸಕ್ತ ಸಾಲಿನ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರು, ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ…

ಕೌಟುಂಬಿಕ ಕಲಹಗಳನ್ನು ತಪ್ಪಿಸಲು ಮನೆಯಲ್ಲಿ ಹಚ್ಚಬೇಕಾದ ದೀಪ.!

14/05/2025 9:49 AM

ಸಾರ್ವಜನಿಕರೇ ಗಮನಿಸಿ : ಹೀಗಿವೆ `ಕರ್ನಾಟಕದ ಸೈಬರ್ ಪೊಲೀಸ್ ಠಾಣೆ’ಗಳ ದೂರವಾಣಿ ಸಂಖ್ಯೆ.!

14/05/2025 9:32 AM

BIG NEWS : ಒಂದು ಮೊಬೈಲ್ ಸಂಖ್ಯೆಗೆ ಎಷ್ಟು `ಆಧಾರ್ ಕಾರ್ಡ್‌’ಗಳನ್ನು ಲಿಂಕ್ ಮಾಡಬಹುದು? ಇಲ್ಲಿದೆ ಮಾಹಿತಿ

14/05/2025 8:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.