ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಬೆನ್ನಲ್ಲೇ ಮಳೆ ಸುರಿಯುತ್ತಿದೆ. ವರುಣನ ಸಿಂಚನದ ನಡುವೆಯೂ ಜನರು ಜಂಬೂ ಸವಾರಿಯನ್ನು ಕಣ್ ತುಂಬಿಕೊಳ್ಳುತ್ತಿದ್ದಾರೆ.
ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮೈಸೂರಲ್ಲಿ ಕಳೆಗಟ್ಟಿದೆ. ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಪೂಜೆ ನೆರವೇರಿಸಿದರು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದಂತೆ ಆಗಿದೆ.
ಸಿಎಂ ಸಿದ್ದರಾಮಯ್ಯಗೆ ಸಾತ್ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಮಹದೇವಪ್ಪ, ಶಿವರಾಜ ತಂಗಡಗಿ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗು ಕೆಲ ಶಾಸಕರು.
ಪೂಜೆ ಸಲ್ಲಿಸಿದ ಬಳಿಕ ಮಾತನಾಡಿ ನಾಡಿನ ಜನತೆಗೆ ಶುಭಾಶಯವನ್ನು ಸಿಎಂ ಸಿದ್ಧರಾಮಯ್ಯ ಕೋರಿದರು.
ಇಂದು ವೈಭವದ ಜಂಬೂಸವಾರಿ ಮೆರವಣಿಗೆ ಆರಂಭವಾಗುತ್ತಿದ್ದಂತೆ ವರುಣನ ಸಿಂಚನ ಗೈಯ್ಯುತ್ತಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ನಡುವೆ ಜಂಬೂ ಸವಾರಿ ಮೆರವಣಿಗೆ ಸಾಗುತ್ತಿದೆ.
ಜೈಲಿನಲ್ಲಿ ರಾಮಾಯಣ ನಾಟಕ: ಸೀತೆಯನ್ನು ಹುಡುಕಲು ಹೋದ ಇಬ್ಬರು ಕೈದಿಗಳು ಪರಾರಿ
ಮಹಿಳೆಯರೇ ಗಮನಿಸಿ : ಉಚಿತ ‘ಹೊಲಿಗೆ ಯಂತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ…!