ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಆರಂಭಗೊಂಡಿದೆ. ಅರಮನೆಯ ಆವರಣದಲ್ಲಿ ನಾಡಿನ ಅಧಿ ದೇವತೆ ತಾಯಿ ಚಾಮುಂಡೇಶ್ವರಿಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತಂತ ಕ್ಯಾಪ್ಟನ್ ಅಭಿಮನ್ಯು ಹೆಜ್ಜೆ ಹಾಕೋದಕ್ಕೆ ಆರಂಭಸಿದ್ದಾನೆ.
ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ ಲಗ್ನದಲ್ಲಿ ನಂದಿ ಧ್ವಜಪೂಜೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೆರವೇರಿಸಿದರು. ಆ ಬಳಿಕ ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಕ್ಷಣಗಣನೆ ಆರಂಭಗೊಂಡಿತ್ತು. ನಾಡಿನ ಅಧಿದೇವತೆಯನ್ನು ಚಿನ್ನದ ಅಂಬಾರಿಯಲ್ಲಿ ಹೊತ್ತು ಬಂದಾಗ ಸಿಎಂ ಸಿದ್ಧರಾಮಯ್ಯ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆಯನ್ನು ನೀಡಿದರು.
ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು
ದಸರಾದ ಪ್ರಮುಖ ಆಕರ್ಷಣೆ ಜಂಬೂ ಜಂಬೂಸವಾರಿ. ಈಗ ಆರಂಭಗೊಂಡಿದ್ದು, ಗಜಪಡೆಯ ಪ್ರಮುಖ ಆಕರ್ಷಕಣೆ ಕ್ಯಾಪ್ಟನ್ ಅಭಿಮನ್ಯು ಆಗಿದ್ದಾನೆ. ಸತತ 5ನೇ ಬಾರಿ ಅಂಬಾರಿಯನ್ನು ಹೊತ್ತು ಅಭಿಮನ್ಯು ಸಾಗುತ್ತಿದ್ದಾನೆ.
ಚಿನ್ನದ ಅಂಬಾರಿ ಹೊತ್ತು ನಾಡದೇವಿಯನ್ನು ಅಭಿಮನ್ಯು ಮೆರೆಸುತ್ತಿದ್ದಾನೆ. ಸತತ 5ನೇ ಬಾರಿ 750 ಕೆಜಿ ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಸಾಗುತ್ತಿದ್ದಾರೆ.
ಇನ್ನೂ ಕ್ಯಾಪ್ಟನ್ ಅಭಿಮನ್ಯುಗೆ ನಿಶಾನೆ ಆನೆಯಾಗಿ ಧನಂಜಯ ಆನೆ ಭಾಗಿಯಾಗಿದ್ದಾವೆ. ಗೋಪಿ ನೌಫತ್ ಆನೆಯಾಗಿ ಭಾಗಿಯಾಗಿದೆ. ಲಕ್ಷ್ಮಿ, ವರಲಕ್ಷ್ಮಿ ಆನೆ ಕುಮ್ಕಿ ಆನೆಗಳಾಗಿ ಭಾಗಿಯಾಗಿದ್ದಾವೆ. ಉಳಿದ ಆನೆಗಳು ಸಾಲಾನೆಗಳಾಗಿ ಭಾಗಿಯಾಗಿದ್ದಾವೆ. ಈ ಮೂಲಕ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು ಒಂಬತ್ತು ಆನೆಗಳು ಸಾಗುತ್ತಿರುವುದು ಕಾಣಬಹುದಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು