ರಾಯಚೂರು : ದಸರಾ ಹಬ್ಬದ ಅಂಗವಾಗಿ ದುರ್ಗಾದೇವಿ ಜಾತ್ರೆಯಲ್ಲಿ ಮಾಡಿದ ಮಾಂಸದ ಊಟವನ್ನು ಸೇವಿಸಿ ಒಂದೇ ಕುಟುಂಬದ ಮೂವರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಮಾರಲದಿನ್ನಿ ತಾಂಡಾದಲ್ಲಿ ನಡೆದಿದೆ.
ದಸರಾ ಹಬ್ಬದ ಅಂಗವಾಗಿ ತಾಂಡಾದಲ್ಲಿರುವ ದುರ್ಗಾದೇವಿ ಜಾತ್ರೆಯ ಅಂಗವಾಗಿ ಮನೆಯಲ್ಲಿ ಮಾಂಸದೂಟ ಮಾಡಿದ್ದರು. ಜಾತ್ರೆಯ ಮರುದಿನ ಸಂಜೆ ಮಾಂಸದ ಅಡುಗೆ ಮಾಡಿದ್ದು, ಊಟ ಸೇವಿಸಿದ್ದರು.ನಂತರ ಇಂದು ಬೆಳಿಗ್ಗೆ ಮೇಲೆ ಏಳೋಕೆ ಆಗದೆ ಅಸ್ವಸ್ಥರಾಗಿದ್ದಾರೆ.
ಕೂಡಲೇ ಶಿವು ಸರ್ಕಾರ (40) ಸುಮಿತ್ರಾ (37) ಅಜಯ (14) ಎಂಬುವವರನ್ನು ಗ್ರಾಮಸ್ಥರ ಸಹಕಾರದಿಂದ ಲಿಂಗಸೂಗೂರಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.ಘಟನೆ ಕುರಿತಂತೆ ಮಸ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.