ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ರೈಲುಗಳ ತಾತ್ಕಾಲಿಕ ನಿಲುಗಡೆ ಮುಂದುವರಿಕೆ ಮಾಡಲಾಗಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯಿಂದ ಮಾಹಿತಿ ನೀಡಲಾಗಿದ್ದು, ರಾಮಗಿರಿ ಮತ್ತು ಬೀರೂರು ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳಿಗೆ ಇದ್ದ ತಾತ್ಕಾಲಿಕ ನಿಲುಗಡೆಯನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ ಎಂದಿದೆ.
ರೈಲು ಸಂಖ್ಯೆ 16545/16546 ಯಶವಂತಪುರ-ಸಿಂಧನೂರು-ಯಶವಂತಪುರ ಡೈಲಿ ಎಕ್ಸ್ ಪ್ರೆಸ್ ರೈಲುಗಳಿಗೆ ರಾಮಗಿರಿ ನಿಲ್ದಾಣದಲ್ಲಿ ಇರುವ ಒಂದು ನಿಮಿಷದ ತಾತ್ಕಾಲಿಕ ನಿಲುಗಡೆಯನ್ನು ಅಕ್ಟೋಬರ್ 17 ರಿಂದ ನವೆಂಬರ್ 15, 2024 ರವರೆಗೆ ಒಂದು ತಿಂಗಳ ಕಾಲ ಮುಂದುವರಿಸಲಾಗುತ್ತಿದೆ.
ರೈಲು ಸಂಖ್ಯೆ 07377/07378 ವಿಜಯಪುರ-ಮಂಗಳೂರು-ವಿಜಯಪುರ ಡೈಲಿ ಸ್ಪೆಷಲ್ ಎಕ್ಸ್ ಪ್ರೆಸ್ ರೈಲುಗಳಿಗೆ ಬೀರೂರು ನಿಲ್ದಾಣದಲ್ಲಿ ಇರುವ ಎರಡು ನಿಮಿಷದ ತಾತ್ಕಾಲಿಕ ನಿಲುಗಡೆ ಅಕ್ಟೋಬರ್ 17 ರಿಂದ ಏಪ್ರಿಲ್ 16, 2025 ರವರೆಗೆ ಆರು ತಿಂಗಳು ಮುಂದುವರಿಸಲಾಗುತ್ತಿದೆ.
BREAKING: 2024-25ನೇ ಸಾಲಿನ 2 ವರ್ಷದ ‘BE.d ಕೋರ್ಸ್ ದಾಖಲಾತಿ’ಗೆ ಅಧಿಸೂಚನೆ ಪ್ರಕಟ | BEd Cours Admission
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ಪವಿತ್ರಾ ಗೌಡ ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ