ಬೆಂಗಳೂರು : ಮೈಸೂರಿನ ಮುಡಾ ಕಚೇರಿಯ ಮೇಲೆ ED ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಸುಮಾರು 20 ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಈ ವಿಚಾರವಾಗಿ ಮಾಜಿ ಸಂಸದ ಡಿಕೆ ಸುರೇಶ್ ರವರು ಪ್ರತಿಕ್ರಿಯೆ ನೀಡಿದ್ದು ಇದೊಂದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಒಂದು ದಾಳಿ ರಾಜಕೀಯ ಪ್ರೇರಿತವಾಗಿದೆ. ವಿರೋಧಪಕ್ಷಗಳ ಮೇಲೆ ಪ್ರಯೋಗ ಮಾಡುವುದು ಹೊಸದೇನಲ್ಲ. ಹತ್ತು ಹದಿನೈದು ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಸಾಮಾನ್ಯ. ಮುಡಾ ಕೇಸ್ನಲ್ಲಿ ಯಾವುದೇ ಹಣಕಾಸು ಮಹಿವಾಟು ನಡೆದಿಲ್ಲ. ಈ ಪ್ರಕರಣದಲ್ಲಿ ಏನೂ ಇಲ್ಲ ಅನ್ನೋದು ಅವರಿಗೆ ಗೊತ್ತಾಗುತ್ತದೆ ಎಂದು ತಿಳಿಸಿದರು.
ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ ಸತ್ಯಂ ಶಿವರಾ ಬರಬೇಕು ಹಾಗಾಗಿ ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಯಾವುದೇ ಸತ್ಯಾಂಶ ಇಲ್ಲ ಈ ಕುರಿತು ಕೊನೆಗೆ ಅವರಿಗೂ ಅರ್ಥವಾಗುತ್ತದೆ ಎಂದು ಅವರು ತಿಳಿಸಿದರು. ಇಂದು ಮುಡಾ ಕಚೇರಿ ಮೇಲೆ ಸುಮಾರು 20 ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.