Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರೆಜಿಲ್‌ನಲ್ಲಿ ಭೀಕರ ಸುಂಟರಗಾಳಿ : 5 ಮಂದಿ ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ | Watch video

08/11/2025 10:43 AM

ಉಕ್ರೇನ್ ವಿರುದ್ದದ ಯುದ್ಧದಲ್ಲಿ 44 ಭಾರತೀಯರು: ರಷ್ಯಾ ಸೇನೆಯ ಆಫರ್‌ಗಳಿಂದ ದೂರವಿರಿ :ಭಾರತದ ಸ್ಪಷ್ಟ ಎಚ್ಚರಿಕೆ!

08/11/2025 10:30 AM

BREAKING : ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾಗೌಡ ಜಾಮೀನು ಅರ್ಜಿ ಮತ್ತೆ ವಜಾಗೊಳಿಸಿದ ಸುಪ್ರೀಂ ಕೋರ್ಟ್

08/11/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ
KARNATAKA

ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ

By kannadanewsnow0918/10/2024 4:42 PM

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನವÀರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕಡತಗಳನ್ನು ಹೆಲಿಕಾಪ್ಟರ್‍ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು; ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇಲ್ಲವಾದರೆ ಇ.ಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಮನವಿ ಮಾಡಿದರು.

ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು..

ಭ್ರಷ್ಟಾಚಾರ ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಪಕ್ಷದ ಸರಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ; ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.

ಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲ್ಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಇ.ಡಿ. ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣ ಎಂದು ವಿವರಿಸಿದರು.

ಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿ ಕುಟುಂಬವೇ ಪಾಲ್ಗೊಂಡ ಇಂಥ ಹಗರಣವನ್ನು ಮುಚ್ಚಿ ಹಾಕುವ ಉದ್ದೇಶ ಸರಕಾರದ್ದು. ಮೊದಲು ಎಸ್‍ಐಟಿಗೆ ತನಿಖೆಯನ್ನು ಕೊಡಲಾಗಿತ್ತು. ಕೋರ್ಟ್ ಆದೇಶವಾಗಿದ್ದರೂ ಎಸ್‍ಐಟಿ ಈ ಕೇಸನ್ನು ವಾಪಸ್ ಪಡೆದಿಲ್ಲ; ಐಎಎಸ್ ಅಧಿಕಾರಿಗಳ ತಂಡ ತನಿಖೆ ಮಾಡಲಿದೆ ಎಂದು ಹೇಳಲಾಗಿತ್ತು. ಅದನ್ನೂ ವಾಪಸ್ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಲೋಕಾಯುಕ್ತ ಕೂಡ ತನ್ನ ಕೆಲಸ ಪ್ರಾರಂಭಿಸಿತ್ತು. ಆದರೆ, ಲೋಕಾಯುಕ್ತದ ಬಗ್ಗೆ ನನಗೆ ನನ್ನದೇ ಆದ ಅನುಮಾನವಿದೆ. ಇದುವರೆಗೂ ಕೂಡ ಯಾರನ್ನೂ ಕರೆದು ತನಿಖೆಗೆ ಒಳಪಡಿಸಿಯೇ ಇಲ್ಲ; ಕೋರ್ಟ್ ಆದೇಶಗಳನ್ನು ಮೀರಿ ಲೋಕಾಯುಕ್ತ ಇದರಲ್ಲಿ ಒಳಗೊಳ್ಳುತ್ತಿದೆ ಎಂದು ಅನುಮಾನ ಕಾಡುತ್ತಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

HDK ಹಸಿಸುಳ್ಳು ಹೇಳುತ್ತಿದ್ದಾರೆ: ಯಾರು ಪ್ರಶ್ನೆಗಳ ಮೂಲಕವೇ ಸಚಿವ ಈಶ್ವರ ಖಂಡ್ರೆ ತಿರುಗೇಟು

ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ವಿಚಾರ: ಈ ಮಾತು ಕೊಟ್ಟ ಡಿಸಿಎಂ ಡಿಕೆಶಿ

ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’

Share. Facebook Twitter LinkedIn WhatsApp Email

Related Posts

BREAKING :ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು : ಉಮೇಶ್ ರೆಡ್ಡಿ, ಭಯೋತ್ಪಾದಕರಿಗೆ ರಾಜಾತಿಥ್ಯ!

08/11/2025 10:12 AM1 Min Read

BREAKING : ಬಹುಕೋಟಿ ವಂಚನೆ ಪ್ರಕರಣ : ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿದ ‘ED’

08/11/2025 10:05 AM1 Min Read

BREAKING : ಹೆಜ್ಜೇನು ಕಚ್ಚಿದ ಬಳಿಕ ಗುಂಡ್ಲುಪೇಟೆಗೆ ನುಗ್ಗಿದ ಆನೆ : ದಿಕ್ಕಾಪಾಲಾಗಿ ಓಡಿದ ಜನ, ತಪ್ಪಿದ ಭಾರಿ ಅನಾಹುತ!

08/11/2025 9:43 AM1 Min Read
Recent News

ಬ್ರೆಜಿಲ್‌ನಲ್ಲಿ ಭೀಕರ ಸುಂಟರಗಾಳಿ : 5 ಮಂದಿ ಸಾವು, 130ಕ್ಕೂ ಹೆಚ್ಚು ಜನರಿಗೆ ಗಾಯ | Watch video

08/11/2025 10:43 AM

ಉಕ್ರೇನ್ ವಿರುದ್ದದ ಯುದ್ಧದಲ್ಲಿ 44 ಭಾರತೀಯರು: ರಷ್ಯಾ ಸೇನೆಯ ಆಫರ್‌ಗಳಿಂದ ದೂರವಿರಿ :ಭಾರತದ ಸ್ಪಷ್ಟ ಎಚ್ಚರಿಕೆ!

08/11/2025 10:30 AM

BREAKING : ರೇಣುಕಾ ಸ್ವಾಮಿ ಕೊಲೆ ಪ್ರಕರಣ : ಪವಿತ್ರಾಗೌಡ ಜಾಮೀನು ಅರ್ಜಿ ಮತ್ತೆ ವಜಾಗೊಳಿಸಿದ ಸುಪ್ರೀಂ ಕೋರ್ಟ್

08/11/2025 10:26 AM

Big News: ಐಸಿಸ್ ದಂಗೆಯ ನಡುವೆ ಮಾಲಿಯಲ್ಲಿ ಐವರು ಭಾರತೀಯ ಪ್ರಜೆಗಳ ಅಪಹರಣ

08/11/2025 10:22 AM
State News
KARNATAKA

BREAKING :ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು : ಉಮೇಶ್ ರೆಡ್ಡಿ, ಭಯೋತ್ಪಾದಕರಿಗೆ ರಾಜಾತಿಥ್ಯ!

By kannadanewsnow0508/11/2025 10:12 AM KARNATAKA 1 Min Read

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಲ್ಲಿ ಈ ಮೊದಲು ದರ್ಶನ್ ಗೆ…

BREAKING : ಬಹುಕೋಟಿ ವಂಚನೆ ಪ್ರಕರಣ : ಆರೋಪಿ ರೋಷನ್ ಸಲ್ಡಾನಗೆ ಸೇರಿದ ಆಸ್ತಿ ಜಪ್ತಿ ಮಾಡಿದ ‘ED’

08/11/2025 10:05 AM

BREAKING : ಹೆಜ್ಜೇನು ಕಚ್ಚಿದ ಬಳಿಕ ಗುಂಡ್ಲುಪೇಟೆಗೆ ನುಗ್ಗಿದ ಆನೆ : ದಿಕ್ಕಾಪಾಲಾಗಿ ಓಡಿದ ಜನ, ತಪ್ಪಿದ ಭಾರಿ ಅನಾಹುತ!

08/11/2025 9:43 AM

BREAKING : ಕಲ್ಬುರ್ಗಿಯಲ್ಲಿ ಬೈಕ್, ಕಾರು, ಟ್ಯಾಂಕರ್ ಮಧ್ಯ ಸರಣಿ ಅಪಘಾತ : ಸ್ಥಳದಲ್ಲೇ ನಾಲ್ವರ ದುರ್ಮರಣ!

08/11/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.