ನವದೆಹಲಿ:ನಾಲ್ಕು ಕೇಂದ್ರ ಸಚಿವಾಲಯಗಳಿಗೆ ಹೊಸ ಕಾರ್ಯದರ್ಶಿಗಳು ಸೇರಿದಂತೆ ಏಳು ಕಾರ್ಯದರ್ಶಿ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಶನಿವಾರ ಅನುಮೋದನೆ ನೀಡಿದೆ
ಪಶ್ಚಿಮ ಬಂಗಾಳ ಕೇಡರ್ನ (1990 ರ ಬ್ಯಾಚ್) ಐಎಎಸ್ ಅಧಿಕಾರಿ ಸುಬ್ರತಾ ಗುಪ್ತಾ ಅವರನ್ನು ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಪ್ರಸ್ತುತ ಕಾರ್ಯದರ್ಶಿ ಅನಿತಾ ಪ್ರವೀಣ್ ಅವರು ನವೆಂಬರ್ 30 ರಂದು ನಿವೃತ್ತರಾಗಲಿದ್ದಾರೆ.
ರಾಜಸ್ಥಾನ ಕೇಡರ್ನ 1993ರ ಬ್ಯಾಚ್ನ ಐಎಎಸ್ ಅಧಿಕಾರಿ ತನ್ಮಯ್ ಕುಮಾರ್ ಅವರನ್ನು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಕಾರ್ಯದರ್ಶಿಯಾಗಿ ನೇಮಿಸಲಾಗಿದ್ದು, ಪ್ರಸ್ತುತ ಕಾರ್ಯದರ್ಶಿ ಲೀನಾ ನಂದನ್ ಅವರು ಡಿಸೆಂಬರ್ 31 ರಂದು ನಿವೃತ್ತರಾಗಲಿದ್ದಾರೆ.
ಹರಿಯಾಣ ಕೇಡರ್ನ 1993ರ ಬ್ಯಾಚ್ನ ಐಎಎಸ್ ಅಧಿಕಾರಿ ಉಮಾಶಂಕರ್ ಅವರನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. 1993ರ ಬ್ಯಾಚ್ ನ ಎಜಿಎಂಯುಟಿ (ಅರುಣಾಚಲ ಪ್ರದೇಶ-ಗೋವಾ-ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶ) ಕೇಡರ್ ನ ಐಎಎಸ್ ಅಧಿಕಾರಿ ವಿಕ್ರಮ್ ದೇವ್ ದತ್ ಅವರನ್ನು ಕಲ್ಲಿದ್ದಲು ಕಾರ್ಯದರ್ಶಿಯಾಗಿ ನೇಮಿಸಲಾಗಿದೆ