ಚಿತ್ರದುರ್ಗ : ಕಾಂಗ್ರೆಸ್ ಸರ್ಕಾರ ಐದು ವರ್ಷ ಇರಲ್ಲ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿಕೆಗೆ ಬಿಕೆ ಹರಿಪ್ರಸಾದ್ ತಿರುಗೇಟು ನೀಡಿದ್ದು, ಬಿಲ್ಲ ರಂಗ ಜೊತೆ ಎಚ್ ಡಿ ಕುಮಾರಸ್ವಾಮಿ ಸೇರಿದ್ದಾರೆ ಎಂದು ಬಿಜೆಪಿ ಜೆಡಿಎಸ್ ಮೈತ್ರಿ ಕುರಿತು ವ್ಯಂಗ್ಯವಾಡಿದರು.
ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಜೊತೆ ಈಗ ಜೆಡಿಎಸ್ ಪಕ್ಷ ಸೇರಿಕೊಂಡಿದೆ. ಕಮಲದ ಬದಲು ಬೇರೆ ಹೆಸರಲ್ಲಿ ಆಪರೇಷನ್ ಮಾಡ್ತಾರ ನೋಡಬೇಕು. ಕಾಂಗ್ರೆಸ್ ಪಕ್ಷ ಅಷ್ಟೊಂದು ದುರ್ಬಲ ಆಗಿಲ್ಲ. ಬಿಜೆಪಿ ಜೆಡಿಎಸ್ ಪಕ್ಷ ಹಗಲು ಗನಸು ಕಾಣುವುದರಲ್ಲಿ ತಪ್ಪೇನಿಲ್ಲ ಎಂದು ಚಿತ್ರದುರ್ಗದಲ್ಲಿ ಕಾಂಗ್ರೆಸ್ ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದರು.
ಮುಡಾ ಕಚೇರಿಯಿಂದ ಇಡಿ ದಾಖಲೆ ತೆಗೆದುಕೊಂಡ ಹೋದ ವಿಚಾರವಾಗಿ ಇಡಿ ಅಧಿಕಾರಿಗಳು ನ್ಯೂಸ್ ಪೇಪರ್ ತೆಗೆದುಕೊಂಡು ಹೋಗಿರುತ್ತಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು 2 ಬ್ಯಾಗ್ ನಷ್ಟು ಇರಲ್ಲ. ರಾಜಕೀಯ ಲಾಭವನ್ನು ಪಡೆಯಲು ಎರಡು ಬ್ಯಾಗ್ ಪ್ರದರ್ಶನ ಮಾಡಿದ್ದಾರೆ.ಬಿಜೆಪಿ ವಿವಿಧ ಪ್ರಕರಣಗಳಲ್ಲಿ ದೋಚಿದಂತೆ ತೋರಿಕೆಗಾಗಿ ಪ್ರದರ್ಶನ ಮಾಡಿದ್ದಾರ. ಇಡಿ ಒಂದು ಸಂಘಟನೆಯ ನಿಯಂತ್ರಣದಲ್ಲಿದೆ. ಸಮಯ ಬರಲಿ ಹೇಳುತ್ತೇನೆ ಎಂದರು.
ಮುಡಾ ಸೈಟ್ ಹಂಚಿಕೆ ವಿಚಾರ 25 ವರ್ಷದ ಹಿಂದಿನ ಪ್ರಕರಣ.ಇದನ್ನು ಬಿಜೆಪಿ ಮುಡಾ ಮೂಲಕ ರಾಜಕೀಯ ದ್ವೇಷಕ್ಕೆ ಬಳಸುತ್ತಿದೆ. ಚುನಾವಣಾ ಬಾಂಡ್, ಪಿಎಂ ಕೇರ್, ನೋಟ್ ಬ್ಯಾನ್ ಹಗರಣ ನಡೆಸಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಸರ್ಕಾರ ಹೆಸರು ಬದಲಾವಣೆ ಮಾಡಿಕೊಳ್ಳಲಿ. ಬಿಜೆಪಿಯ ಬದಲು ಭ್ರಷ್ಟಾಚಾರ ಜನತಾ ಪಾರ್ಟಿ ಎಂದು ಹೆಸರು ಬದಲಿಸಿಕೊಳ್ಳಲಿ ಎಂದು ಕಾಂಗ್ರೆಸ್ ಎಂಎಲ್ಸಿ ಬಿಕೆಹಾರಿ ಪ್ರಸಾದ್ ತಿಳಿಸಿದರು.