Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಬೆಳಗಾವಿಯಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳ ಮೇಲೆ ಕಲ್ಲು ತೂರಾಟ

07/11/2025 3:42 PM

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ
KARNATAKA

ಅಧಿಕಾರ ಕಳೆದುಕೊಳ್ಳುವ ಭಯದಿಂದ ಸಿಎಂ ಜಾತಿ ಗಣತಿ ವರದಿ ಬಿಡುಗಡೆ ಪ್ರಸ್ತಾಪಿಸುತ್ತಿದ್ದಾರೆ: ಬೊಮ್ಮಾಯಿ

By kannadanewsnow0920/10/2024 2:38 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರ ಕಳೆದುಕೊಳ್ಳುವ ಭಯದಿಂದ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಹೇಳುತ್ತಿದ್ದಾರೆ. ಮೊದಲು ಅದನ್ನು ಬಹಿರಂಗ ಪಡೆಸಲಿ, ಸಾರ್ವಜನಿಕ ಚರ್ಚೆಯಾಗಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ.

ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ಕುರಿತು ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ತಮ್ಮನ್ನು ಭೇಟಿ ಮಾಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಇದು ಜಾತಿ ಗಣತಿಯಲ್ಲ. ಸಾಮಾಜಿಕ ಆರ್ಥಿಕ ಸಮೀಕ್ಷೆ, ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಕೇಂದ್ರ ಸರ್ಕಾರಕ್ಕೆ ಮಾತ್ರ ಜಾತಿ ಗಣತಿ ಮಾಡುವ ಅಧಿಕಾರವಿದೆ. ಬಿಹಾರ ಸರ್ಕಾರದ ಜಾತಿ ಗಣತಿಗೂ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಇವರು ಯಾವುದೋ ಸಮೀಕ್ಷೆ ಮಾಡಿ ಅದಕ್ಕೆ ಜಾತಿ ಗಣತಿಯ ಲೇಪನ ಮಾಡುತ್ತಿದ್ದಾರೆ ಎಂದು ಹೇಳಿದರು.

ಇನ್ನು ಈ ವರದಿ ವೈಜ್ಞಾನಿಕವಾಗಿಯೂ ಇಲ್ಲ, ಅಂಕಿ‌ ಅಂಶ ಸಮರ್ಪಕವಾಗಿಲ್ಲ. ಹಲವು ಸಮುದಾಯಗಳಿಂದ ಆಕ್ಷೇಪಣೆ ಬಂದಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ಅವರು ಸಿದ್ದಪಡಿಸಿದ್ದ ವರದಿ ಸಮರ್ಪಕವಾಗಿಲ್ಲ ಎಂದು ಅಂದಿನ ಆಯೋಗದ ಕಾರ್ಯದರ್ಶಿ ಹಾಗೂ ಸದಸ್ಯರು ಸಹಿ ಹಾಕಿರಲಿಲ್ಲ. ನಂತರ ಬಂದ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗಡೆ ಅವರು, ಯಾವುದೇ ಸಮೀಕ್ಷೆ ನಡೆಸದೇ ಹಿಂದಿನ ಆಯೋಗದ ಅಧ್ಯಕ್ಷರು ಸಿದ್ದಪಡಿಸಿದ್ದ ವರದಿಯನ್ನೇ ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಈ ವರದಿಯನ್ನು ಒಕ್ಕಲಿಗ ಸಮುದಾಯದವರು ವಿರೋಧಿಸಿದ್ದಾರೆ. ಸ್ವತ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದನ್ನು ವಿರೋಧಿಸಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭೆ ಕೂಡ ವಿರೋಧಿಸಿದೆ. ಎಲ್ಲ ಸಮುದಾಯಗಳ ಅನುಮಾನ ದೂರ‌ ಮಾಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡುತ್ತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಚರ್ಚಿಸಲಿ. ಇಷ್ಟೆಲ್ಲ ವಿರೋಧ ಇದ್ದರೂ ಜಾರಿ ಮಾಡುತ್ತೇವೆ ಅಂತಿದ್ದಾರೆ. ಮೊದಲು ವರದಿ ಬಹಿರಂಗಪಡಿಸಲಿ, ಸಾರ್ವಜನಿಕವಾಗಿ ಚರ್ಚೆ ಆಗಲಿ. ಸಿದ್ದರಾಮಯ್ಯನವರು ವರದಿಯಲ್ಲಿ ಏನಿದೆ ಅಂತ ನೋಡಿಲ್ಲ ಅಂತಿದ್ದಾರೆ, ಆದರೆ ವರದಿ ರೆಡಿ ಮಾಡಿಸಿದವರೇ ಸಿದ್ದರಾಮಯ್ಯ. ದಿವಂಗತ ವಿ.ಪಿ. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಅಧಿಕಾರ ಹೋಗುವ ಸಂದರ್ಭದಲ್ಲಿ ಮಂಡಲ್ ವರದಿ ಜಾರಿ ಮಾಡಿದ್ದರು. ಅದೇ ರೀತಿ ಇವರು ಈಗ ಜಾತಿ ಗಣತಿ ಜಾರಿ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಹೇಳಿದರು.

ಸಂವಿಧಾನಬದ್ಧ ತೀರ್ಮಾನ

ಪರಿಶಿಷ್ಟ ಜಾತಿ, ಪಂಗಡಗಳ ಮೀಸಲು ಪ್ರಮಾಣ ಹೆಚ್ಚಳ, ಎಸ್ ಸಿ ಮೀಸಲು ವರ್ಗೀಕರಣ, ಪಂಚಮಸಾಲಿ ಸಮುದಾಯದವರಿಗೆ ಪ್ರವರ್ಗ 2ಡಿಗೆ ಸೇರ್ಪಡೆ, ಮುಸ್ಲಿಮರಿಗೆ ಪ್ರತ್ಯೇಕ ಮೀಸಲು ರದ್ದು ಸೇರಿ ಎಲ್ಲವನ್ನು ನನ್ನ ಅವಧಿಯಲ್ಲಿ ಸಂವಿಧಾನಬದ್ಧವಾಗಿ ತೀರ್ಮಾನ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಕೈಗೊಂಡ ಈ ನಿರ್ಧಾರಗಳನ್ನು ಪ್ರಶ್ನಿಸಿ ಕಾಂಗ್ರೆಸ್ ನ ಕೆಲವರು ಸುಪ್ರೀಂ ಕೋರ್ಟ್ ಗೆ ಮೊರೆ ಹೋದರು.

ವಿಧಾನಸಭೆ ಚುನಾವಣೆ ಹತ್ತಿರವಾಗಿದ್ದರಿಂದ ಮುಂದಿನ ವಿಚಾರಣೆವರೆಗೆ ಜಾರಿಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದ್ದನ್ನು ಸುಪ್ರೀಂ ಕೋರ್ಟ್ ಒಪ್ಪಿದೆಯೇ ಹೊರತು ತಡೆಯಾಜ್ಞೆ ನೀಡಿಲ್ಲವೆಂದು ಬೊಮ್ಮಾಯಿ ಹೇಳಿದರು.

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ, ಎಸ್ ಸಿ ಒಳಮೀಸಲು, ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಮೀಸಲು ಕೊಡುವ ಬಗ್ಗೆ ಕಾಂಗ್ರೆಸ್‌ ಸರ್ಕಾರಕ್ಕೆ ನೈಜ ಕಾಳಜಿಯಿದ್ದರೆ ಈ ನಿಟ್ಟಿನಲ್ಲಿ ಮುಂದುವರಿಯಬೇಕು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ ಎಂಬ ತಪ್ಪು ಮಾಹಿತಿ ನೀಡಿ ವಿವಿಧ ಸಮುದಾಯಗಳಿಗೆ ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ಮಾಡಿದರು.

ಸೇಡಿಗಾಗಿ ರಾಜೀನಾಮೆ ಕೇಳುತ್ತಿದ್ದಾರೆ

ಇನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಅವರ ಸಹೋದರ ಗೋಪಾಲ್ ಜೋಷಿ ಬಂಧನವಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷದವರು ಪ್ರಲ್ಹಾದ್ ಜೋಷಿಯವರ ರಾಜೀನಾಮೆ ಕೇಳುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪ್ರಹ್ಲಾದ್ ಜೋಷಿಯವರು ಅವರ ಸೋದರ‌ನ ಜತೆ ಯಾವುದೇ ವ್ಯವಹಾರಿಕ ಹಾಗೂ ಕೌಟಿಂಬಿಕ ಸಂಬಂಧ ಇಟ್ಟುಕೊಂಡಿಲ್ಲ ನನಗೆ ಅವರ ಕುಟುಂಬದ ಬಗ್ಗೆ ಚೆನ್ನಾಗಿ ಗೊತ್ತಿದೆ. ಕಾಂಗ್ರೆಸ್ ನವರು ಸೇಡಿನ‌ ರಾಜಕೀಯ ಮಾಡುತ್ತಿದ್ದಾರೆ. ಅವರ ವಿರುದ್ದ ಯಾರು ಮಾತನಾಡುತ್ತಾರೆ ಅವರ ವಿರುದ್ದ ಸೇಡಿಗಾಗಿ ಕಾಂಗ್ರೆಸ್ ನವರು ಎಫ್ಐಆರ್ ಹಾಕಿಸುತ್ತಿದ್ದಾರೆ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

BREAKING: ಬೆಳಗಾವಿಯಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳ ಮೇಲೆ ಕಲ್ಲು ತೂರಾಟ

07/11/2025 3:42 PM1 Min Read

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM2 Mins Read

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM2 Mins Read
Recent News

BREAKING: ಬೆಳಗಾವಿಯಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳ ಮೇಲೆ ಕಲ್ಲು ತೂರಾಟ

07/11/2025 3:42 PM

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM
State News
KARNATAKA

BREAKING: ಬೆಳಗಾವಿಯಲ್ಲಿ ತೀವ್ರಗೊಂಡ ಕಬ್ಬು ಬೆಳೆಗಾರರ ಪ್ರತಿಭಟನೆ: ವಾಹನಗಳ ಮೇಲೆ ಕಲ್ಲು ತೂರಾಟ

By kannadanewsnow0907/11/2025 3:42 PM KARNATAKA 1 Min Read

ಬೆಳಗಾವಿ: ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರಿಂದ ಬೆಲೆ ನಿಗದಿ ಸಂಬಂಧ ಹೆದ್ದಾರಿ ರಸ್ತೆ ತಡೆ ನಡೆಸಿ, ಪ್ರತಿಭಟನೆಯನ್ನು ನಡೆಸಲಾಗುತ್ತಿದೆ. ಇದೀಗ ಪ್ರತಿಭಟನೆ…

ರಾಜ್ಯದಲ್ಲಿ ಇರೋದು ತೆರಿಗೆ ಭಯೋತ್ಪಾದಕ ಸರ್ಕಾರ: ಜೆಡಿಎಸ್ ಮಾಜಿ MLC ಹೆಚ್.ಎಂ ರಮೇಶ್ ಗೌಡ ಕಿಡಿ

07/11/2025 3:37 PM

ಇಂದಿನಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ, ಚಾರಣ ಬಂದ್: ಸಚಿವ ಈಶ್ವರ್ ಖಂಡ್ರೆ

07/11/2025 3:18 PM

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸೋಣ: ಸಚಿವ ದಿನೇಶ್ ಗುಂಡೂರಾವ್

07/11/2025 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.