ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ನಡೆದಿದ್ದು, ಎರಡು ಬೈಕ್ ಮಧ್ಯ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಚೌಡಹಳ್ಳಿ ಬಳಿ ಈ ಘಟನೆ ನಡೆದಿದೆ. ಅಜೀತ್ (22) ಶಿವಯ್ಯ (49) ಮೃತರು ಎಂದು ತಿಳಿದು ಬಂದಿದೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡ್ಹಳ್ಳಿ ಎಂಬ ಘಟನೆ ನಡೆದಿದೆ. ಇನ್ನು ಅಪಘಾತದಲ್ಲಿ ಗಾಯಗೊಂಡ ಚಂದ್ರು ಎನ್ನುವ ಇನ್ನೊರ್ವ ವ್ಯಕ್ತಿಗೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರಲ್ಲಿ ದಂಪತಿಗಳ ಸಾವು
ಅದೇ ರೀತಿಯಾಗಿ ತುಮಕೂರಲ್ಲೂ ಭೀಕರ ಅಪಘಾತವಾಗಿದ್ದು, ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಬಳಿ ಈ ಘಟನೆ ನಡೆದಿದೆ. ಮೃತ ದಂಪತಿಗಳನ್ನ ಗೋಪಿ ಹಾಗೂ ಪುಷ್ಪ ಎಂದು ಗುರುತಿಸಲಾಗಿದ್ದು, ಭರಣಪುರ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಹಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ