ಬೆಂಗಳೂರು : ಮೂರೂ ಕ್ಷೇತ್ರಗಳ ಉಪಚುನಾವಣೆ ನಮಗೆ ಬಹಳ ಮಹತ್ವದ್ದಾಗಿದೆ. ಮೂರೂ ಕ್ಷೇತ್ರಗಳಲ್ಲೂ ಗೆಲ್ಲಲು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಿ ಪ್ರತಿಯೊಬ್ಬರೂ ವಹಿಸಿಕೊಂಡ ಜವಾಬ್ದಾರಿ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಕಾವೇರಿ ನಿವಾಸದಲ್ಲಿ ಇಂದು ನಡೆದ ಮಹತ್ವದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸಚಿವರಿಗೆ ಸೂಚನೆ ನೀಡಿದ್ದಾರೆ.
ಬಿಜೆಪಿ ವಿರುದ್ಧ ಹಲವು ಚರ್ಚೆಗಳನ್ನು ಚರ್ಚಿಸಿರುವ ಸಿಎಂ ಸಿದ್ದರಾಮಯ್ಯ ಮೂರೂ ಕ್ಷೇತ್ರಗಳು ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಸಂಪೂರ್ಣ ಶ್ರಮ ಹಾಕಿ ವಿಧಾನಸಭೆ ಚುನಾವಣೆ ಉಪಚುನಾವಣೆ ನಿರ್ವಹಿಸಬೇಕು. ವಿಪಕ್ಷದವರ ಚಾಲೆಂಜ್ ಗಳಿಗೆ ಪ್ರತ್ಯುತ್ತರ ನೀಡಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯಿಂದ ಹಿಡಿದು ಎಲ್ಲರೂ ಹೇಳಿದರು. ಉಪಚುನಾವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಿಗ್ಗೆ ಮಧ್ಯಾಹ್ನ ಸಂಜೆ ರಾತ್ರಿ ಹೇಳುತ್ತಾರೆ. ಇದಕ್ಕೆ ಸರಿಯಾಗಿ ಕೌಂಟರ್ ಕೊಡಬೇಕು. ಉಪಚುನಾವಣೆ ಮುಗಿಯುವವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪ್ರಮಾಣ ಇನ್ನೂ ಹೆಚ್ಚಾಗಲಿದೆ. ಹಾಗಾಗಿ ಎಚ್ಚರವಾಗಿರಬೇಕು ಎಂದು ತಿಳಿಸಿದರು.
ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿಗರ 2A ಮೀಸಲಾತಿ ಕುರಿತು ಅಪಪ್ರಚಾರ ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಎಲ್ಲ ವಿಚಾರಗಳ ಬಗ್ಗೆಯೂ ಸರ್ಕಾರದ ನಿಲುವು ಸ್ಪಷ್ಟವಾಗಿದ್ದು, ಆಯಾ ಸಮುದಾಯದ ಮುಖಂಡರು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ಇದನ್ನು ಸಮರ್ಥವಾಗಿ ಎದುರಿಸಬೇಕೆಂದು ಸಚಿವರಿಗೆ ಸಿಎಂ ಸಲಹೆ ನೀಡಿದ್ದಾರೆ.