Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ

25/10/2025 3:14 PM

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM

ನಮಗೆ RSS ಮಾತ್ರ ಶತ್ರುವಲ್ಲ, ಅಸಮಾನತೆಯ ವ್ಯವಸ್ಥೆ ಶತ್ರು: ನಟ ಚೇತನ್ ಅಹಿಂಸಾ

25/10/2025 3:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಎಲ್ಲಿಗೆ ಪಯಣ ಯಾವುದೋ ದಾರಿ: ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದರು ಡಾ.ಮಂಜುನಾಥ್!
FILM

ಎಲ್ಲಿಗೆ ಪಯಣ ಯಾವುದೋ ದಾರಿ: ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆಗೊಳಿಸಿದರು ಡಾ.ಮಂಜುನಾಥ್!

By kannadanewsnow0721/10/2024 8:40 AM
Dr. Manjunath releases lyrical video song Where to go somewhere!

ಕೆಎನ್‌ಎನ್‌ಡಿಜಿಟಲ್ ಡೆಸ್ಕ್‌: ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ `ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರ ಇದೇ ಅಕ್ಟೋಬರ್ 25ರಂದು ಬಿಡುಗಡೆಗೊಳ್ಳಲಿದೆ. ಇತ್ತೀಚೆಗಷ್ಟೇ ಈ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿತ್ತು. ಅದಕ್ಕೆ ಭರಪೂರ ಮೆಚ್ಚುಗೆ ಮೂಡಿಕೊಳ್ಳುತ್ತಲೇ, ಸಂಸದ, ಖ್ಯಾತ ವೈದ್ಯ ಡಾ.ಮಂಜುನಾಥ್ ಈ ಚಿತ್ರದ `ನೀನಿರು ಸಾಕು’ ಎಂಬ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಬಿಡುಗಡೆಗೊಳಿಸಿದ್ದಾರೆ. ನಟ, ನಿರ್ದೇಶಕ ಕಾಶಿನಾಥ್ ಅವರನ್ನು ನೆನೆಸಿಕೊಳ್ಳುತ್ತಲೇ, ಅವರ ಪುತ್ರ ಅಭಿಮನ್ಯು ಕಾಶೀನಾಥ್ ರಿಗೆ ಶುಭ ಕೋರಿದ್ದಾರೆ.

ಅಂತ್ಯಂತ ಸಂತಸದಿಂದ ಈ ಲಿರಿಕಲ್ ವೀಡಿಯೋ ಸಾಂಗ್ ಅನ್ನು ಡಾಕ್ಟರ್ ಮಂಜುನಾಥ್ ಬಿಡುಗಡೆಗೊಳಿಸಿದ್ದಾರೆ. `ಕಾಶೀನಾಥ್ ಅವರು ನಟನಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗ ಹಾಗೂ ಸಿನಿಮಾ ಪ್ರೇಮಿಗಳಿಗೆಲ್ಲ ಚಿರಪರಿಚಿತರು. ವಿಶಿಷ್ಟ ಪ್ರತಿಭೆಯಿಂದಲೇ ಪ್ರಸಿದ್ಧಿ ಪಡೆದವರು. ಅವರ ಪುತ್ರ ಅಭಿಮನ್ಯು ಕಾಶಿನಾಥ್ ನಾಯಕನಾಗಿ ನಟಿಸಿರುವ ಎಲ್ಲಿಗೆ ಪಯಣ ಯಾವುದೋ ದಾರಿ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಈ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಲ್ಲಿ ನೋಡುವ ಮೂಲಕ ಬೆಂಬಲಿಸಬೇಕಿದೆ. ಕಾಶೀನಾಥ್ ಎಂಬ ಹೆಸರೇ ಒಂದು ಬ್ರ್ಯಾಂಡ್ ಇದ್ದಂತೆ. ಅವರ ಮಗ ಅಭಿಮನ್ಯು ಕೂಡಾ ಅದೇ ಎತ್ತರಕ್ಕೇರಲಿ’ ಎಂದು ಹಾರೈಸುತ್ತಾ, ಡಾ.ಮಂಜುನಾಥ್ ಅವರು ಒಂದಿಡೀ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಅರೆ ಏನಿದು ಕರೆದಂತಿದೆ ಮರೆಯಿಂದ ನೀ ನನ್ನನೇ… ಅಂತ ಶುರುವಾಗುವ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಒದಗಿಸಿದ್ದಾರೆ. ವಾಸುಕಿ ವೈಭವ್ ಹಾಗೂ ಶ್ರೀಲಕ್ಷ್ಮಿ ಬೆಳ್ಮಣ್ಣು ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಮೆಲೋಡಿಯಸ್ ಸಾಂಗಿಗೆ ಪ್ರಣವ್ ರಾವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ವಿಶೇಷವೆಂದರೆ, ಕಿಚ್ಚಾ ಸುದೀಪ್ ಈ ಸಿನಿಮಾಕ್ಕಾಗಿ ಒಂದು ಹಾಡನ್ನು ಹಾಡಿದ್ದಾರೆ. ಕಿರಣ್ ಎಸ್ ಸೂರ್ಯ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸೂಕ್ಷ್ಮ ಕಥಾನಕವನ್ನೊಳಗೊಂಡಿದೆ. ಈಗಾಗಲೇ ಲಾಂಚ್ ಆಗಿರುವ ಟೀಸರ್ ಮತ್ತು ಟ್ರೈಲರ್ ಮೂಲಕ ಒಟ್ಟಾರೆ ಚಿತ್ರದ ಝಲಕ್ಕುಗಳು ಪ್ರೇಕ್ಷಕರ ಮುಂದೆ ಅನಾವರಣಗೊಂಡಿವೆ.

ಸುದರ್ಶನ್ ಆರ್ಟ್ಸ್ ಬ್ಯಾನರಿನಡಿಯಲ್ಲಿ ಜತಿನ್ ಪಟೇಲ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಅಭಿಮನ್ಯು ಕಾಶಿನಾಥ್, ಸ್ಫೂರ್ತಿ ಉಡಿಮನೆ ನಾಯಕ ನಾಯಕಿಯರಾಗಿ ನಟಿಸಿದ್ದಾರೆ. ವಿಜಯಶ್ರೀ ಕಲ್ಬುರ್ಗಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಲರಾಜ್ವಾಡಿ, ಶೋಭನ್, ಪ್ರದೀಪ್, ರಮೇಶ್ ನಾಯಕ್, ರಿನಿ ಮುಂತಾದವರ ತಾರಾಗಣವಿದೆ. ಸತ್ಯ ರಾಮ್ ಛಾಯಾಗ್ರಹಣ, ಗಣೇಶ್ ನಿರ್ಚಲ್ ಸಂಕಲನ, ಪ್ರಮೋದ್ ಮರವಂತೆ, ಕಿರಣ್ ಎಸ್ ಸೂರ್ಯ ಸಾಹಿತ್ಯ, ಜೀವನ್ ನೃತ್ಯ ನಿರ್ದೇಶನ, ಚಂದ್ರು ಸಾಹಸ ನಿರ್ದೇಶನ, ಪ್ರಣವ್ ರಾವ್ ಸಂಗೀತ ನಿರ್ದೇಶನದೊಂದಿಗೆ ಈ ಚಿತ್ರ ಮೂಡಿ ಬಂದಿದೆ.

 

 

Neeniru Saaku Lyrical | Ellige Payana Yavudo Daari |AbhhimanyuuKashinath |Pramod| |PranavRao|Kiren S
Share. Facebook Twitter LinkedIn WhatsApp Email

Related Posts

ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ದಸರಾ ಬಳಿಕ ಪಿಎಂ ಕಿಸಾನ್ 21ನೇ ಕಂತು ಬಿಡುಗಡೆ?

23/09/2025 4:03 PM2 Mins Read

ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ

28/08/2025 4:23 PM1 Min Read

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಆಂಕರ್ ಅನುಶ್ರೀ ಮೊದಲ ರಿಯಾಕ್ಷನ್

28/08/2025 2:38 PM1 Min Read
Recent News

“PoKಯಲ್ಲಿ ಜನರ ಮೇಲಿನ ದಬ್ಬಾಳಿಕೆ ನಿಲ್ಲಿಸಿ” : ವಿಶ್ವಸಂಸ್ಥೆಯಲ್ಲಿ ಪಾಕ್ ವಿರುದ್ಧ ಭಾರತ ವಾಗ್ದಾಳಿ, ಖಡಕ್ ಎಚ್ಚರಿಕೆ

25/10/2025 3:14 PM

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

25/10/2025 3:05 PM

ನಮಗೆ RSS ಮಾತ್ರ ಶತ್ರುವಲ್ಲ, ಅಸಮಾನತೆಯ ವ್ಯವಸ್ಥೆ ಶತ್ರು: ನಟ ಚೇತನ್ ಅಹಿಂಸಾ

25/10/2025 3:02 PM

BREAKING : ನ.2ರಂದು ನಡೆಯುವ ‘KSET’ ಪರೀಕ್ಷೆಗೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡಿ |KSET Hall Ticket

25/10/2025 2:58 PM
State News
KARNATAKA

ಸಮಾಜಮುಖಿಯಾಗಿ ಸೇವೆ ಸಲ್ಲಿಸಿ: ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿ ಮಾತು

By kannadanewsnow0925/10/2025 3:05 PM KARNATAKA 1 Min Read

ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ನಮಗೆ RSS ಮಾತ್ರ ಶತ್ರುವಲ್ಲ, ಅಸಮಾನತೆಯ ವ್ಯವಸ್ಥೆ ಶತ್ರು: ನಟ ಚೇತನ್ ಅಹಿಂಸಾ

25/10/2025 3:02 PM

BREAKING : ನ.2ರಂದು ನಡೆಯುವ ‘KSET’ ಪರೀಕ್ಷೆಗೆ ‘ಹಾಲ್ ಟಿಕೆಟ್’ ಬಿಡುಗಡೆ ; ಈ ರೀತಿ ಡೌನ್ಲೋಡ್ ಮಾಡಿ |KSET Hall Ticket

25/10/2025 2:58 PM
parappana agrahara

BIG NEWS: ಬೆಂಗಳೂರಿನ ‘ಪರಪ್ಪನ ಅಗ್ರಹಾರ ಜೈಲಿ’ನಲ್ಲಿ ಕೈದಿಗಳಿಗೆ ಮುಂದುವರೆದ ‘ರಾಜಾತಿಥ್ಯ’

25/10/2025 2:56 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.