ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಳೆಯ ಆರ್ಭಟದ ನಡುವೆ ಮತ್ತೊಂದು ಘೋರ ಘಟನೆ ನಡೆದಿದ್ದು, ಸಿಲಿಂಡರ್ ಸ್ಪೋಟಗೊಂಡು ಯುವಕನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಎಸ್ ಜಿ ಪಾಳ್ಯದಲ್ಲಿ ಸಿಲಿಂಡರ್ ಸ್ಪೋಟಗೊಂಡು ಯುವಕ ಗಾಯಗೊಂಡಿದ್ದಾನೆ. ಪವನ್ ಎಂಬ ಯುವಕ ಸಿಲಿಂಡರ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸದ್ಯ ಗಾಯಾಳು ಯುವಕ ಪವನ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.