ಕಲಬುರ್ಗಿ : ದಂಪತಿಗಳ ನಡುವೆ ಮಕ್ಕಳು ನೋವು ಅನುಭವಿಸುತ್ತಿದ್ದು, ಕ್ಷುಲ್ಲಕ ಕಾರಣಕ್ಕೆ ತಾಯಿಯೊಬ್ಬಳು ತನ್ನ ಮೂರು ಮಕ್ಕಳಿಗೆ ವಿಷ ಉಣಿಸುವುದಲ್ಲದೆ ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದಿದೆ.
ಹೌದು ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿ ಪೀರ್ ತಾಂಡಾದ ಗೀತಾಬಾಯಿ ಸಂತೋಷ ರಾಠೋಡ್ (30) ಎಂಬವರು ಈ ಕೃತ್ಯ ಎಸಗಿದ ಮಹಿಳೆ. ಮಕ್ಕಳಾದ ಚೈತನ್ಯ (4) ಧನುಷ್ (3) ಮತ್ತು ಲಕ್ಷ್ಮೀ (ಒಂದೂವರೆ ತಿಂಗಳ ಮಗು)ಗೆ ವಿಷ ಕುಡಿಸಿದ ಗೀತಾಬಾಯಿ ಸಹ ವಿಷ ಸೇವನೆ ಮಾಡಿದ್ದು, ಸದ್ಯ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ರಾತ್ರಿ ಕ್ಷುಲ್ಲಕ ಕಾರಣಕ್ಕೆ ಗೀತಾ ಬಾಯಿ ಪತಿ ಸಂತೋಷ್ ನೊಂದಿಗೆ ಗಲಾಟೆ ಮಾಡಿದ್ದಾಳೆ, ಇದರಿಂದ ಇದೇ ಕಾರಣಕ್ಕೆ ಗೀತಾಬಾಯಿ ತನ್ನ ಮೂರೂ ಮಕ್ಕಳಿಗೆ ಕ್ರಿಮಿನಾಶಕವನ್ನು ತಂಪು ಪಾನೀಯಕ್ಕೆ ಬೆರೆಸಿ ಮಕ್ಕಳಿಗೆ ಕುಡಿಸಿ ಬಳಿಕ ತಾನು ಕುಡಿದಿದ್ದಾಳೆ. ಸ್ವಲ್ಪ ಸಮಯದ ನಂತರ ಮಕ್ಕಳ ಚಿರಾಟ ಕೇಳಿ ಅಕ್ಕಪಕ್ಕದವರು ಕೂಡಲೇ ತಾಯಿ ಹಾಗೂ ಮಕ್ಕಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.