ಬೆಂಗಳೂರು: ಇಂದು ವ್ಯಾಪಕ ಮಳೆಯ ಮುನ್ಸೂಚನೆಯ ಕಾರಣಕ್ಕೆ ನಗರದ ಶಾಲಾ, ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೇ ನಾಳೆ ಬೆಂಗಳೂರಿನ ಶಾಲಾ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಇಲ್ಲ ಎಂಬುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ನಾಳೆ ಬೆಂಗಳೂರಿನ ಶಾಲಾ, ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿಲ್ಲ. ನಾಳೆ ಶಾಲೆ, ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯಿಲ್ಲ ಎಂಬುದಾಗಿ ತಿಳಿಸಿದರು.
ನಾಳೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆಯಿಂದ ನೀಡಲಾಗಿಲ್ಲ. ಈ ಹಿನ್ನಲೆಯಲ್ಲಿ ನಾಳೆ ಬೆಂಗಳೂರು ನಗರದ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ನೀಡುತ್ತಿಲ್ಲ ಎಂಬುದಾಗಿ ಹೇಳಿದರು.
ಸಾಗರದ ‘ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜಿ’ಗೆ NAAC ಮಾನ್ಯತೆ: ಪ್ರಾಂಶುಪಾಲೆ ಡಾ.ರಾಜೇಶ್ವರಿ
ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?