ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಹಿಂಗಾರು ಮಳೆಯ ಆರ್ಭಟ ಶುರುವಾಗಿದ್ದು, ಮಳೆಗೆ ಸಾವಿರಾರು ಎಕರೆ ಬೆಳೆ ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ.
ಕಳೆದ 2-3 ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆಗೆ ಸುಮಾರು 36 ಸಾವಿರ ಹೆಕ್ಟೇರ್ ಪ್ರದೇಶವ್ಯಾಪ್ತಿಯ ಬೆಳೆ ಹಾನಿಗೊಳಗಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 25 ಸಾವಿರ ಹೆಕ್ಟೇರ್ ಅಡಕೆ ಬೆಳೆಗೆ ಕೊಳೆ ರೋಗ ತಗುಲಿದೆ. 3,000 ಹೆಕ್ಟೇರ್ ಪ್ರದೇಶದಲ್ಲಿನ ಈರುಳ್ಳಿ ಬೆಳೆ ಹಾನಿಯಾಗಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ 850 ಎಕರೆಗೂ ಹೆಚ್ಚು ಪ್ರದೇಶವ್ಯಾಪ್ತಿಯ ಮೆಕ್ಕೆಜೋಳ ಬೆಳೆ ಹಾನಿಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ 350 ರ್ಭತ್ತದ ಬೆಳೆ ಹಾನಿಯಾಗಿದ್ದರೆ, 900 ಹೆಗ್ಡೆ ಹೆಕ್ಟೇರ್ಗೂ ನ್ಗೂ ಅಧಿಕ ವ್ಯಾಪ್ತಿಯ ಮೆಕ್ಕೆಜೋಳ, ಈರುಳ್ಳಿ, ಮೆಣಸಿನಕಾಯಿ ಬೆಳೆಗಳು ಹಾನಿಗೊಳಗಾಗಿವೆ ಹಾವೇರಿ ಜಿಲ್ಲೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಬೆಳೆದಿದ್ದ ಈರುಳ್ಳಿ, ಕಡ್ಲೆ ಬೆಳೆ ಹಾನಿಯಾಗಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಲ್ಲಿ ಹಲವಡೆ ಕೆರೆ ಕಟ್ಟೆಗಳು ತುಂಬಿ ಕೋಡಿ ಬಿದ್ದ ಪರಿಣಾಮ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಅನೇಕ ಕಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮನೆಗಳಿಗೆ ನೀರು ನುಗ್ಗಿದ್ದು, ಶಿವಮೊಗ್ಗ, ಚಿತ್ರದುರ್ಗ ಮೊದಲಾದ ಕಡೆ ಮನೆಗಳು ಕುಸಿದಿವೆ.ಅನೇಕ ಕಡೆಗಳಲ್ಲಿ ಧಾರಾಕಾರ ಮಳೆ ಆದ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಳೆಯ ಹಿನ್ನೆಲೆಯಲ್ಲಿ ಹಲವಡೆ ಅಡಿಕೆ, ಬಾಳೆ, ತೆಂಗು, ಭತ್ತ, ಉದ್ದು, ಈರುಳ್ಳಿ, ಟೊಮೆಟೊ ಸೇರಿದಂತೆ ಅನೇಕ ಬೆಳೆಗಳು ನಾಶವಾಗಿವೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಧಾರವಾಡ, ಗದಗ ಸೇರಿ ಹಲವೆಡೆ ಭಾರಿ ಮಳೆಯಿಂದಾಗಿ ಬೆಳೆ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ.