ಮೈಸೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಇಡಿ ಅಧಿಕಾರಗಳು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರು, ನನ್ನ ಭಾಮೈದ ತಂಗಿಗೆ ಅರಿಶಿನ ಕುಂಕುಮಕ್ಕೆ ಕೊಟ್ಟ ಜಮೀನನ್ನು ವಿವಾದ ಮಾಡಿದರು. ಅದಕ್ಕೇ ನಿವೇಶನವನ್ನೇ ವಾಪಸ್ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮೈಸೂರು ಜಿಲ್ಲೆಯ ಸ್ವ ಕ್ಷೇತ್ರ ವರುಣಾದಲ್ಲಿ ಸುಮಾರು 501 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅವರು, ಸಿದ್ದರಾಮಯ್ಯ 42 ವರ್ಷದ ರಾಜಕಾರಣದಲ್ಲಿ ಎಂದೂ ಬಡವರಿಗೆ ಅನ್ಯಾಯ ಮಾಡಿಲ್ಲ. ಒಂದು ರೂಪಾಯಿ ಲಂಚ ಪಡೆದಿಲ್ಲ. ನನ್ನ ಮೇಲಿನ ಸುಳ್ಳು ಆರೋಪವನ್ನು ಸಹಿಸುತ್ತೀರ? ಎಂದು ಪ್ರಶ್ನಿಸಿದರು.
ಕುಮಾರಸ್ವಾಮಿ, ಯಡಿಯೂರಪ್ಪ, ಜೋಶಿ, ವಿಜಯೇಂದ್ರ ಮೊದಲಾದವರಿಗೆ ನನ್ನನ್ನು ಕಂಡರೆ ಹೊಟ್ಟೆ ಉರಿ. ಮೂರು ವರ್ಷದಿಂದ ಮೈಸೂರಿನ ಕುವೆಂಪು ರಸ್ತೆಯಲ್ಲಿ ಮನೆ ಕಟ್ಟಿಸುತ್ತಿದ್ದೇನೆ. ಒಬ್ಬ ಮುಖ್ಯಮಂತ್ರಿ ಮೇಲೆ ಗೂಬೆ ಕೂರಿಸುವ ಕೆಲಸ ಆಗುತ್ತಿದೆ. ಕಾಯಾ ವಾಚ ಮನಸಾ ಪ್ರಾಮಾಣಿಕವಾಗಿ ರಾಜಕಾರಣದಲ್ಲಿ ಇದ್ದೇನೆ. ನನಗೆ ಜಾತಿ- ಧರ್ಮದ ಹಂಗಿಲ್ಲ. ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡಲಿದ್ದೇನೆ ಎಂದರು.