ಬೆಂಗಳೂರು: ನಗರದಲ್ಲಿ ನಾಳೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಆರೇಂಜ್ ಅಲರ್ಟ್ ಕೂಡ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನಾಳೆ ಎಲ್ಲಾ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೇ ಕಾಲೇಜುಗಳಿಗೆ ರಜೆ ಇಲ್ಲ ಎಂಬುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಇಂದು ಅವರು ಆದೇಶ ಹೊರಡಿಸಿದ್ದು, ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಇಂದು ಕೂಡ ಮಳೆಯಾಗಿದೆ. ನಾಳೆ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಬೆಂಗಳೂರು ನಗರದ ಎಲ್ಲಾ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ನಾಳೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ. ಆದರೇ ನಾಳೆ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.
ಅಂದಹಾಗೆ ಬೆಂಗಳೂರಲ್ಲಿ ನಾಳೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಆರೆಂಜ್ ಅಲರ್ಟ್ ಕೂಡ ಘೋಷಿಸಿದೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಮುಂಜಾಗ್ರತಾ ಕ್ರಮವಾಗಿ ನಾಳೆ ಬೆಂಗಳೂರು ನಗರದ ಎಲ್ಲಾ ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ರಜೆಯನ್ನು ಘೋಷಿಸಿದ್ದಾರೆ.
ಬೆಂಗಳೂರಲ್ಲಿ ಭಾರೀ ಮಳೆಗೆ ‘BBMP ಕಂಟ್ರೋಲ್ ರೂಂ’ಗೆ ದೂರುಗಳ ಸರಮಾಲೆ: ಬಂದ ಕರೆಗಳು ಎಷ್ಟು ಗೊತ್ತಾ?
ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಈಗ ಜಲಪ್ರಳಯವೇ ಉಂಟಾಗಿದೆ. ಇಂತಹ ಸಮಸ್ಯೆ ನಿವಾರಿಸುವ ಸಂಬಂಧ ಬಿಬಿಎಂಪಿಯ ಕಂಟ್ರೋಲ್ ರೂಂಗೆ ಬಂದ ಕರೆಗಳು ಮಾತ್ರ ಸಾವಿರಾರು. ಅದೆಷ್ಟು ಅಂತ ಮುಂದೆ ಓದಿ.
ಈ ಬಗ್ಗೆ ಬಿಬಿಎಂಪಿಯಿಂದ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 22-10-2024ರ ಇಂದಿನ ಸಂಜೆ 3 ಗಂಟೆಯವರೆಗೆ ರಸ್ತೆಯಲ್ಲಿ ನೀರು ತುಂಬಿ ಹರಿಯುತ್ತಿರುವ ಬಗ್ಗೆ 232 ದೂರುಗಳು ಬಂದಿದ್ದರೇ, ಇವುಗಳಲ್ಲಿ 94 ದೂರು ಪರಿಹರಿಸಲಾಗಿದೆ. ಮನೆಗೆ ನೀರು ನುಗ್ಗಿದ ಬಗ್ಗೆ 1066 ದೂರುಗಳು ದಾಖಲಾಗಿದ್ದಾವೆ. ಇವುಗಳಲ್ಲಿ 477 ಪರಿಹರಿಸಲಾಗಿದೆ ಎಂದಿದೆ.
ಇನ್ನೂ ಬೆಂಗಳೂರು ವೆಸ್ಟ್ ವಲಯದಲ್ಲಿ 2, ಸೌತ್ ವಲಯಲ್ಲಿ ಒಂದು, ರಾಜರಾಜೇಶ್ವರಿ ನಗರ ವಲಯದಲ್ಲಿ ಒಂದು, ದಾಸರಹಳ್ಳಿಯಲ್ಲಿ ನಾಲ್ಕು ಸೇರಿದಂತೆ 8 ಮರಗಳು ಮುರಿದು ಬಿದ್ದಿದ್ದಾವೆ. ಇವುಗಳಲ್ಲಿ ನಾಲ್ಕನ್ನು ತೆರವುಗೊಳಿಸಲಾಗಿದೆ. ಮರದ ಕೊಂಬೆಗಳು ಮುರಿದು ಬಿದ್ದ ಬಗ್ಗೆ 22 ದೂರುಗಳು ಬಂದಿದ್ದು, 15 ಮರದ ಕೊಂಬೆಗಳನ್ನು ತೆರವುಗೊಳಿಸಲಾಗಿದೆ ಎಂದಿದೆ.
ಒಟ್ಟಾರೆಯಾಗಿ ಬೆಂಗಳೂರಲ್ಲಿ ಮಳೆಯಿಂದ ಉಂಟಾದಂತ ಅವಾಂತರ ಸಂಬಂಧ 8 ವಲಯಗಳಲ್ಲಿ 1,328 ದೂರುಗಳು ಬಂದಿದ್ದು, ಇವುಗಳಲ್ಲಿ 590 ದೂರುಗಳನ್ನು ಪರಿಹರಿಸಲಾಗಿದೆ ಎಂಬುದಾಗಿ ಬಿಬಿಎಂಪಿ ತಿಳಿಸಿದೆ.
‘ಸಚಿವ ರಾಮಲಿಂಗಾರೆಡ್ಡಿ’ ಕಾರ್ಯವೈಖರಿಯನ್ನು ಹಾಡಿ ಹೊಗಳಿದ ‘ಅರ್ಚಕರ ಸಮೂಹ’
SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral