ಧಾರವಾಡ : ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಬಾರಿ ಮಳೆ ಆಗುತ್ತಿದ್ದು, ಸಾಕಷ್ಟು ಅವಾಂತರ ಕಳಾಗಿವೆ, ಅಲ್ಲದೆ ಹಲವರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಇದೀಗ ಧಾರವಾಡದಲ್ಲಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಗಾಯಗೊಂಡಿದ್ದ ಮಹಿಳೆ ಸಾವನಪ್ಪಿದ್ದಾರೆ.
ಹೌದು ಮಳೆಯಿಂದ ಮನೆಗೋಡೆ ಕುಸಿದು ಗಾಯಗೊಂಡಿದ್ದ ಮಹಿಳೆ ಸಾವನ್ನಾಪ್ಪಿದ್ದರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹಣಸಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಅಕ್ಟೊಬರ್ 18 ರಂದು ಮನೆ ಗೋಡೆ ಕುಸಿದು ಮಹಿಳೆ ಮಂಗಳಾ ಪಾಟೀಲ್ ಗಾಯಗೊಂಡಿದ್ದರು.
ಗಾಯಗೊಂಡ ಮಹಿಳೆಯನ್ನು ಕೂಡಲೇ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಯಿತು.ಆದರೆ ಚಿಕಿತ್ಸೆ ಫಲಿಸದೆ ಮಂಗಳಾ ಪಾಟೀಲ್ ಸಾವನಪ್ಪಿದ್ದಾರೆ. ಮೃತ ಮಹಿಳೆಯ ಕುಟುಂಬಸ್ಥರಿಗೆ ನವಲಗುಂದದ ಮಾಜಿ ಶಾಸಕ ಶಂಕರ ಪಾಟೀಲ್ ಮುನೇನಕೊಪ್ಪ ಸಾಂತ್ವನ ಹೇಳಿದ್ದಾರೆ.