Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ಭಾರೀ ಮಳೆಯಿಂದ ಸಂತ್ರಸ್ತರಾದ 600 ಕುಟುಂಬಸ್ಥರ 2500 ನಿವಾಸಿಗಳು | Rain Effect in Bengaluru
KARNATAKA

ಬೆಂಗಳೂರಲ್ಲಿ ಭಾರೀ ಮಳೆಯಿಂದ ಸಂತ್ರಸ್ತರಾದ 600 ಕುಟುಂಬಸ್ಥರ 2500 ನಿವಾಸಿಗಳು | Rain Effect in Bengaluru

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವಂತ ಮಳೆಯಿಂದಾಗಿ 600 ಕುಟುಂಬಗಳ 2500 ಜನರು ಸಂತ್ರಸ್ತರಾಗಿದ್ದಾರೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿ ಇರಿಸಿ, ತಾತ್ಕಾಲಿಕ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿದೆ.

ಇಂದು ಮುಖ್ಯಮಂತ್ರಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದ್ದು, ನಗರದ ಯಲಹಂಕ, ಮಹದೇವಪುರ, ದಾಸರಹಳ್ಳಿ ವಲಯದಲ್ಲಿ ಕಳೆದ 72 ಗಂಟೆಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಕೆರೆಗಳೆಲ್ಲಾ ತುಂಬಿ ಕೋಡಿಯಲ್ಲಿ ಹೆಚ್ಚು ನೀರು ಹರಿದು ರಾಜಕಾಲುವೆಗಳಿಗೆ ಬರುತ್ತಿರುವ ಕಾರಣ, ವಿವಿಧ ಪ್ರದೇಶಗಳು ಜಲಾವೃತವಾಗಿರುತ್ತದೆ. ಚೌಡೇಶ್ವರಿ ನಗರದಲ್ಲಿ 160 ಮಿ.ಮೀ ಮಳೆಯಾಗಿದ್ದು, ಇದು ಇತಿಹಾಸದಲ್ಲಿಯೇ ಅತಿಹೆಚ್ಚು ಮಳಎಯಾಗಿರುತ್ತದೆ ಎಂದಿದೆ.

ಬೆಂಗಳೂರಲ್ಲಿ ಅಕ್ಟೋಬರ್ ತಿಂಗಳಲ್ಲಿ 245 ಮಿ.ಮೀ ಮಳೆಯಾಗಿದ್ದು, ಇದು ಅತಿ ಹೆಚ್ಚು ಮಳೆಯಾಗಿರುವ ಪೈಕಿ ನಾಲ್ಕನೇ ಮಳೆಯಾಗಿದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು ಪರಿಸ್ಥಿತಿಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ಪಾಲಿಕೆ, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಅಗ್ನಿಶಾಮಕ ದಳದ ತಂಡಗಳು 24×7 ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ.

ನಗರದಲ್ಲಿ ಮಳೆಯಿಂದಾಗಿ 1079 ಮನೆಗಳಿಗೆ ನೀರು ನುಗ್ಗಿದ್ದರೇ, 30 ಪ್ರದೇಶಗಳಲ್ಲಿ ನೀರು ನಿಂತಿವೆ. ಮಳೆಯಿಂದ 199 ಮರ ಹಾಗೂ ರೆಂಪೆ-ಕೊಂಬೆಗಳು ಮುರಿದು ಬಿದ್ದಿದ್ದಾವೆ. ಇವುಗಳನ್ನು ಪರಿಹರಿಸಲು 30 ಅರಣ್ಯ ವಿಭಾಗದ ತಂಡಗಳು, 1 ಬೆಟಾಲಿಯನ್ ಎನ್ ಡಿ ಆರ್ ಎಫ್, 3 ಎಸ್ ಡಿ ಆರ್ ಎಫ್, 5 ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಬಿಬಿಎಂಪಿಯಿಂದ 30 ತಂಡಗಳು, 16 ಬೋಟ್ ಗಳು ನೆರೆ ಸಮಸ್ಯೆ ಪರಿಹಾರದಲ್ಲಿ ತೊಡಗಿದ್ದಾವೆ ಎಂದು ತಿಳಿಸಿದೆ.

ಭಾರೀ ಮಳೆಯಿಂದಾಗಿ 600 ಕುಟುಂಬಸ್ಥರ 2500 ನಿವಾಸಿಗಳು ಸಂತ್ರಸ್ಥರಾಗಿದ್ದಾರೆ. ಅವರನ್ನು ಕೇಂದ್ರಿಯ ವಿಹಾರಕ್ಕೆ ಸ್ಥಳಾಂತರಿಸಲಾಗಿದೆ. 5 ಲೀಟರ್ ಸಾಮರ್ಥ್ಯದ 3500 ಬಾಟೆಲ್ ಗಳನ್ನು ಸಂತ್ರಸ್ತರಿಗೆ ಹಂಚಿಕೆ ಮಾಡಲಾಗತ್ತಿದೆ. 1000 ಲೀಟರ್ ಹಾಲು, 2000 ಬಿಸ್ಕೆಟ್ ಪ್ಯಾಕೇಟ್, 1000 ತಿಂಡಿ ಪ್ಯಾಕೇಟ್, 66000 ಊಟದ ಪ್ಯಾಕೆಟ್ ವಿತರಿಸಲಾಗುತ್ತಿದೆ. ಯಲಹಂಕ ವಲಯದ 4 ಪ್ರದೇಶಗಳನ್ನು ಹೊರತುಪಡಿಸಿ ಬೇರೆಡೆ ಸಮಸ್ಯೆ ಬಗೆಹರಿಸಲಾಗಿರುತ್ತದೆ ಎಂದು ಸಿಎಂ ಕಚೇರಿ ಮಾದ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

BREAKING: ‘ನಟ ದರ್ಶನ್’ಗೆ ಬೆನ್ನು ನೋವು: ಬಳ್ಳಾರಿ ಜೈಲಿನಿಂದ ‘ವಿಮ್ಸ್ ಆಸ್ಪತ್ರೆ’ಗೆ ಕರೆತಂದ ಪೊಲೀಸರು | Actor Darshan

ನಿಷೇಧಿತ ಪಟಾಕಿ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ: ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

1 Min Read

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

1 Min Read

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

3 Mins Read
Recent News

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ವಿದಾಯದ ಭಾಷಣ; ಹೇಳಿದ್ದೇನು? ಇಲ್ಲಿದೆ ಓದಿ

State News
KARNATAKA

ಶಿವಮೊಗ್ಗ: ಮೇ.30ರಂದು ಸೊರಬ ಪಟ್ಟಣ ಸೇರಿ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸೊರಬದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಮೇ 30, 2026ರ ಶನಿವಾರದಂದು…

BREAKING: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಕೋರ್ಟ್ ಬಿಗ್ ರಿಲೀಫ್: ವಿದೇಶ ಪ್ರವಾಸಕ್ಕೆ ಅನುಮತಿ

ಶನಿ ದೋಷದಿಂದ ವಿಮುಕ್ತಿಗಾಗಿ ಶನಿ ಜಯಂತಿಯನ್ನು ಹೀಗೆ ತಪ್ಪದೇ ಮಾಡಿ!

BREAKING: ಸಿಎಂ ಸ್ಥಾನಕ್ಕೆ ರಾಜೀನಾಮೆ ಬಳಿಕ ಸಿದ್ದರಾಮಯ್ಯ ವಿದಾಯದ ಭಾಷಣ; ಹೇಳಿದ್ದೇನು? ಇಲ್ಲಿದೆ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.