ಕಠ್ಮಂಡು: ದೆಹಲಿ-ಕಠ್ಮಂಡು ವಿಸ್ತಾರಾ ವಿಮಾನದಲ್ಲಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ನೇಪಾಳ ಸೇನೆ ಮಂಗಳವಾರ ವಿಮಾನದ ಭದ್ರತಾ ತಪಾಸಣೆ ನಡೆಸಿದೆ.
ದೆಹಲಿಯಿಂದ ವಿಸ್ತಾರಾ ವಿಮಾನವು ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ಕೂಡಲೇ, ಎಲ್ಲಾ 157 ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಮಿಲಿಟರಿ ವಕ್ತಾರರು ತಿಳಿಸಿದ್ದಾರೆ.
ಸ್ಥಳಾಂತರಿಸಿದ ನಂತರ ಭದ್ರತಾ ಸಿಬ್ಬಂದಿ ವಿಮಾನ ಮತ್ತು ಪ್ರಯಾಣಿಕರ ಸಾಮಾನುಗಳ ಮೇಲೆ ಶೋಧ ನಡೆಸಿದರು ಎಂದು ಮಿಲಿಟರಿ ವಕ್ತಾರ ಬ್ರಿಗೇಡಿಯರ್ ಜನರಲ್ ಗೌರವ್ ಕುಮಾರ್ ಕೆಸಿ ತಿಳಿಸಿದ್ದಾರೆ.
ಬಾಂಬ್ ಬೆದರಿಕೆಯ ನಂತರ, ನೇಪಾಳ ಸೇನೆಯ ವಿಶೇಷ ತಂಡವು ಶೋಧ ಕಾರ್ಯಾಚರಣೆಯನ್ನು ನಡೆಸಿತು ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಕಂಡುಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ದೆಹಲಿಯಿಂದ ಹೊರಟ ವಿಮಾನ ಸಂಜೆ ೪.೩೦ ಕ್ಕೆ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಇಳಿಯಿತು