ಬೆಂಗಳೂರು : ಇಂದು ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದು ಮೈತ್ರಿ ಪಕ್ಷಗಳಿಗೆ ಕೈ ಕೊಟ್ಟ ಬಿಜೆಪಿ ಮಾಜಿ ಎಂಎಲ್ಸಿ ಸಿಪಿ ಯೋಗೇಶ್ವರ್ ಇದೀಗ ಒಂದೇ ಕಾರಿನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಪಿ ಯೋಗೇಶ್ವರ್ ಅವರು ಕೆಪಿಸಿಸಿ ಕಚೇರಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿಯಾಗಿ ತಮ್ಮ ಎಂಎಲ್ಸಿ ಸ್ಥಾನಕ್ಕೆ ಸಿಪಿ ಯೋಗೇಶ್ವರ್ ರಾಜಿನಾಮೆ ನೀಡಿದರು. ಇದೀಗ ವಾಟ್ಸಾಪ್ ಮುಖಾಂತರ ಬಿಜೆಪಿಯ ಪ್ರಾಥಮಿಕ ಸದಸ್ಯ ಸ್ಥಾನಕ್ಕೂ ಕೂಡ ಸಿಪಿ ಯೋಗೇಶ್ವರ್ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಹಾಗಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಇದೀಗ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ಕಣಕ್ಕೆ ಎಳೆಯುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.