ಮೈಸೂರು : ಸಿಎಂ ಸಿದ್ದರಾಮಯ್ಯ ಮಗ ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ. ಅದಕ್ಕೆಲ್ಲ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್ ಆಗಿದ್ದು, ಬೈರತಿ ಸುರೇಶ್ ಕ್ಷೇತ್ರದಲ್ಲಿ ಆ ಪಬ್ ಇದೆ. ಆತನನ್ನು ಒಳಗಡೆ ಹಾಕಿದರೆ ಎಲ್ಲ ವಿಷಯ ಹೊರಗಡೆ ಬರುತ್ತದೆ ಎಂದು ಪರಿಷತ್ ಬಿಜೆಪಿ ಸದಸ್ಯ ಎಚ್. ವಿಶ್ವನಾಥ್ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಭೈರತಿ ಸುರೇಶ್ ವಿರುದ್ಧ ವಾಗ್ದಾಳಿ ನಡೆಸಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀವು ಎಷ್ಟೇ ಹೇಳಿದರೂ ಸಿಎಂ ಸಿದ್ದರಾಮಯ್ಯ ಭ್ರಷ್ಟ ಅಂತ ಜನ ನಿರ್ಧರಿಸಿದ್ದಾರೆ. ಮನೆ ಇಲ್ಲ ಮರಿಸ್ವಾಮಿ ಮನೆಯಲ್ಲಿ ಮಲಗ್ತೀನಿ ಎನ್ನುತ್ತೇನೆ ಅಂದರೆ ಜನ ನಂಬಲ್ಲ. ಸಿದ್ದರಾಮಯ್ಯ ಭ್ರಷ್ಟ ಅಂತ ಜನ ತೀರ್ಮಾನ ಮಾಡಿದ್ದಾರೆ. ಸಿಎಂ ಸಿದ್ದರಾಮಯ್ಯ ಮಗ ಸೊಸೆ ಹೆಸರಿನಲ್ಲಿ ಪಬ್ ಮಾಡಿದ್ದಾರೆ ಅದಕ್ಕೆಲ್ಲ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಮಾಸ್ಟರ್ ಮೈಂಡ್.
ಭೈರತಿ ಸುರೇಶ್ ಕ್ಷೇತ್ರದಲ್ಲಿ ಆ ಪಬ್ ಇದೆ ಸಿದ್ದರಾಮಯ್ಯ ನಾನು ಒಳ್ಳೆಯವನು ಅಂತ ಡಂಗೂರ ಸಾರುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಸಾಚಾತನದ ಬಗ್ಗೆ ರಾಜ್ಯದ ಜನರಿಗೆ ಗೊತ್ತಾಗಿದೆ ಸಚಿವ ಭೈರತಿ ಸುರೇಶ್ ನನ್ನು ಒಳಗೆ ಹಾಕಿದರೆ ಎಲ್ಲಾ ವಿಚಾರ ಹೊರಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಬೈರತಿ ಸುರೇಶ್ ವಿರುದ್ಧ ಎಚ್ ವಿಶ್ವನಾಥ್ ವಾಗ್ದಾಳಿ ನಡೆಸಿದರು.
ನನ್ನ ತತ್ವ ಸಿದ್ಧಾಂತ ಬಿಟ್ಟಿಲ್ಲ. ಜೆಂಡಾ ಬಿಟ್ಟರು ಅಜೆಂಡ ಬಿಟ್ಟಿಲ್ಲ. ಇತ್ತೀಚಿಗೆ ಪಕ್ಷ ರಾಜಕಾರಣ ಬದಲು ವ್ಯಕ್ತಿರಾಜಕಾರಣ ಮುನ್ನೆಲೆಗೆ ಬಂದಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನ ಸಂಪೂರ್ಣವಾಗಿ ಹಾಳು ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಏನು ಮಾಡುತ್ತಿದ್ದಾರೆ ಅನ್ನೋದು ಅರ್ಥವಾಗುತ್ತಿಲ್ಲ.ನಿನ್ನೆ ನಡೆದಿದ್ದು 500 ಕೋಟಿ ಶಿಲಾನ್ಯಾಸ ಕಾರ್ಯಕ್ರಮವೊ ಅಥವಾ ನಾನು ಸತ್ಯವಂತ ಅಂತ ಹೇಳಿಕೊಳ್ಳುವ ಕಾರ್ಯಕ್ರಮವೊ ಎಂದು ಹೆಚ್ಚು ವಿಶ್ವನಾಥ್ ಕಿಡಿ ಕಾರಿದರು.