ಚಾಮರಾಜನಗರ : ಚಾಮರಾಜನಗರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಬೈಕ್ ನಲ್ಲಿ ಇಬ್ಬರು ರೈತರು ಜಮೀನಿಗೆ ತೆರಳುತ್ತಿದ್ದಾಗ ಜೋತು ಬಿದ್ದಂತಹ ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ..
ಹೌದು ವಿದ್ಯುತ್ ತಂತಿ ತಗುಲಿ ಇಬ್ಬರು ರೈತರು ದುರ್ಮರಣಹೊಂದಿದ್ದು ಚಾಮರಾಜನಗರ ತಾಲೂಕಿನ ಐನಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ. ಐನಾಪುರ ಗ್ರಾಮದ ನಾಗೇಂದ್ರ ಮತ್ತು ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿರುವ ರೈತರು ಎಂದು ತಿಳಿದುಬಂದಿದೆ.ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ದುರ್ಮರಣ ಹೊಂದಿದ್ದಾರೆ.
ಬೈಕ್ ನಲ್ಲಿ ಇಬ್ಬರು ಜಮೀನಿಗೆ ತೆರಳುವಾಗ ಈ ಒಂದು ದುರಂತ ನಡೆದಿದೆ. ಚೆಸ್ಕಾಂ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಚೆಸ್ಕಾಂ ಅಧಿಕಾರಿಗಳ ವಿರುದ್ಧ ಐನಾಪುರ ಗ್ರಾಮಸ್ಥರು ಆಕ್ರೋಶ ಹೊರಹಕಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸುತ್ತಿದ್ದಾರೆ.