ರಾಮನಗರ : ರಾತ್ರಿಯ ವೇಳೆ ಮಫ್ತಿಯಲ್ಲಿ ಇದ್ದಂತಹ ಪಿಎಸ್ಐ ಮೇಲೆ ಪಾನಮತ್ತರಾಗಿದ್ದ ಯುವಕರು ಬಿಯರ್ ಬಾಟಲ್ ನಿಂದ ಭುಜಕ್ಕೆ ಹೊಡೆದು ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ರಾಮನಗರದ ರಾಯರದೊಡ್ಡಿಯಲ್ಲಿನ ಸುಪ್ರಿತ್ ವೈನ್ಸ್ ಬಳಿ ನಡೆದಿದೆ.
ಹೌದು ನಿನ್ನೆ ರಾತ್ರಿ ಐಜೂರು ಪೊಲೀಸ್ ಠಾಣೆ ಪ್ರಭಾರ ಪಿಎಸ್ಐ ದುರುಗಪ್ಪ ಮಫ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಈ ವೇಳೆ ರಾಯರದೊಡ್ಡಿ ನಿವಾಸಿ ಕಿರಣ್ ಕುಮಾರ್, ಪಾದರಹಳ್ಳಿ ವಾಸಿ ಶ್ರೀಕಾಂತ ಹಾಗೂ ಚೇತನ್ ಅಲಿಯಾಸ್ ಕುಂತಿ PSI ದುರುಗಪ್ಪ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದೀಗ ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣವೊಂದರ ಆರೋಪಿ ಮತ್ತು ಮಾಲು ಪತ್ತೆ ಮಾಡುವ ಸಲುವಾಗಿ ಮಫ್ತಿಯಲ್ಲಿ ಪಿಎಸ್ ಐ ದುರುಗುಪ್ಪರವರು ಪೇದೆಗಳಾದ ಚನ್ನಬಸಪ್ಪ ಮತ್ತು ಶಿವರಾಜ ಅವರೊಂದಿಗೆ ರಾಯರದೊಡ್ಡಿಗೆ ತೆರಳಿದ್ದಾರೆ.ದುರುಗುಪ್ಪ ಸುಪ್ರೀತಾ ವೈನ್ಸ್ ಮುಂಭಾಗ ಆರೋಪಿ ಮತ್ತು ಮಾಲಿನ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾಗ ಪಾನಮತ್ತರಾಗಿದ್ದ ಮೂವರು ಗಲಾಟೆ ಮಾಡಿಕೊಂಡಿದ್ದಾರೆ.
ಈ ವೇಳೆ ಪಿಎಸ್ಐ ದುರ್ಗಪ್ಪ ಅವರು ನಾನು ಪೊಲೀಸ್ ಅಧಿಕಾರಿ ಇದ್ದೇನೆ, ಏಕೆ ಗಲಾಟೆ ಮಾಡುತ್ತಿದ್ದೀರಾ ಎಂದು ಪ್ರಶ್ನೆ ಮಾಡಿದ್ದಾರೆ. ಆ ಗುಂಪಿನಲ್ಲಿದ್ದ ಓರ್ವ ತನ್ನ ಕೈಯಲ್ಲಿದ್ದ ಬಿಯರ್ ಬಾಟಲ್ನಿಂದ ದುರುಗುಪ್ಪರವರ ಬಲ ಭಜುದ ಮೇಲೆ ಹಲ್ಲೆ ಮಾಡಿದ್ದಾರೆ. ನಂತರ ಉಳಿದವರು ಹಲ್ಲೆ ಮಾಡಿದ್ದಾರೆ.ಈ ಸಂಬಂಧ ದುರುಗುಪ್ಪ ಐಜೂರು ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ.