ರಾಮನಗರ : ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಇಂದು ಬೃಹತ್ ಮೆರವಣಿಗೆಯೊಂದಿಗೆ ಚನ್ನಪಟ್ಟಣ ತಾಲೂಕು ಕಚೇರಿಗೆ ನಾಮಪತ್ರ ಸಲ್ಲಿಸಲು ತೆರಳಿದ್ದಾ. ಈ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾತನಾಡಿದ್ದು, ಬಿಜೆಪಿಯವರ ಭ್ರಷ್ಟಾಚಾರದ ಹಿಸ್ಟರಿ ತೆಗೆದರೆ ಅವರಿಗೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರಕ್ಕೂ ಬರಕ್ಕಾಗಲ್ಲ ಎಂದು ವಾಗ್ದಾಳಿ ನಡೆಸಿದರು.
ಸಿ ಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆಗೂ ಮುಂಚೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣದಲ್ಲಿ ಅಜೆಂಡಾ ಶುರು ಮಾಡಿದೆ ಬಿಜೆಪಿ ಮತ್ತು ಜೆಡಿಎಸ್ ನವರು. ಯೋಗೇಶ್ವರ್ ಅವರನ್ನು ನಾವು ಗೆದ್ದೇ ಗೆಲ್ಲಿಸುತ್ತೇವೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದರು ಎಂದು ಅವರು ತಿಳಿಸಿದರು.
ಆದರೆ ಅವರನ್ನ MLC ಸ್ಥಾನಕ್ಕೆ ರಾಜೀನಾಮೆ ಕೊಡಕ್ಕೆ ಕಳಿಸಿದ್ದು ಯಾರು? ಈ ಬಗ್ಗೆ ತನಿಖೆ ಮಾಡಿ. ನಾನು ಅವರನ್ನು ಸಂಪರ್ಕಿಸಿ ಇಲ್ಲ ಅವರು ನಿನ್ನೆನೇ ನಮ್ಮ ಮನೆಗೆ ಬಂದು ಭೇಟಿಯಾಗಿ ಚರ್ಚೆ ಮಾಡಿದ್ದು. ಹಾಗಾಗಿ ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದ್ದು ಯಾರು ಎಂದು ತನಿಖೆ ಮಾಡಿಸಿ ಎಂದು ಮಾಧ್ಯಮಗಳಿಗೆ ಉತ್ತರಿಸಿದರು.