ಬೆಂಗಳೂರು : ಚನ್ನಪಟ್ಟಣ ಕ್ಷೇತ್ರಕ್ಕೆ ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಅವರು ಬಿಜೆಪಿ ಪಕ್ಷಕ್ಕೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.ಇಂದು ಬೃಹತ್ ಮೆರವಣಿಗೆ ಮೂಲಕ ಜನಪಟ್ಟಣ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.ಇತ್ತ ಎನ್ಡಿಎ ಮೈತ್ರಿ ಪಕ್ಷದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಗೆ ಚನ್ನಪಟ್ಟಣಕ್ಕೆ ಯಾವ ಅಭ್ಯರ್ಥಿ ನಿಲ್ಲಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಇದೀಗ ಸಾರಾ ಮಹೇಶ್ ಅವರು ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಸಾರಾ ಮಹೇಶ್ ಅವರು, HD ಕುಮಾರಸ್ವಾಮಿ ಕೇಂದ್ರದ ಜವಾಬ್ದಾರಿ ಹೊತ್ತಿರುವುದರಿಂದ ಪಕ್ಷದ ಸಂಘಟನೆ ಜವಾಬ್ದಾರಿ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ತೊಡಗಿಸಿಕೊಂಡಿದ್ದಾರೆ. ಆದರೆ ಪ್ರಾರಂಭದಿಂದಲೂ ನಾನು ಅಭ್ಯರ್ಥಿಯಲ್ಲ ನಾವು NDA ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ ಎಂದು ಎಲ್ಲ ಸಭೆ ಸಮಾರಂಭಗಳಲ್ಲಿ ಕುಮಾರಸ್ವಾಮಿವೂ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈಗ ನಮ್ಮೆಲ್ಲರ ಪಕ್ಷದ ಇವತ್ತಿನ ಕಾರ್ಯಕರ್ತರ, ಮುಖಂಡರ, ಒತ್ತಾಯ ಇರುವಂತದ್ದು ಕೊನೆ ಕ್ಷಣದಲ್ಲಿ ಸಿಪಿ ಯೋಗೇಶ್ವರ್ ಕಾಂಗ್ರೆಸ್ ಸೇರಿರುವುದರಿಂದ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಬೇಕು. ಅವರಿಂದ ಮಾತ್ರ ಗೆಲುವು ಸಾಧ್ಯ ಎಂದು ಹಿರಿಯ ನಾಯಕರು, ಹಾಗೂ ಕಾರ್ಯಕರ್ತರ ಒತ್ತಡ ಇದೆ. ಆದರೆ ನಿಖಿಲ್ ಕುಮಾರಸ್ವಾಮಿ ಅವರು ಇನ್ನೂ ಕೂಡ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಿ ಹೋರಾಟ ಮಾಡಬೇಕು ಅಂತಿದ್ದಾರೆ.
ನಾನು ಮೊದಲಿನಿಂದಲೂ ಕೂಡ ಟಿಕೆಟ್ ಆಕಾಂಕ್ಷಿ ಅಲ್ಲ ಅಂತ ಹೇಳಿದ್ದೇನೆ ಎಂದು ಹೇಳಿದ್ದಾರೆ. ದೇವೇಗೌಡರು ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆಸಿ ಮಾತನಾಡಿದ್ದು ಕುಮಾರಸ್ವಾಮಿ ಅವರು ಕೂಡ ನಿನ್ನೆಯಿಂದ ಚರ್ಚೆ ಮಾಡುತ್ತಿದ್ದಾರೆ. ಕಾರ್ಯಕರ್ತರು ಮುಖಂಡರು ಕೂಡ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕುಮಾರಸ್ವಾಮಿ ನೇತೃತ್ವದಲ್ಲಿ ಸದ್ಯದಲ್ಲೇ ತುರ್ತು ಸಭೆ ಕರೆದಿದ್ದಾರೆ ಎಂದು ಜೆಡಿಎಸ್ ಮುಖಂಡ ಸಾರಾ ಮಹೇಶ್ ತಿಳಿಸಿದರು.