Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM

ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ

08/04/2026 6:10 AM

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ
KARNATAKA

ಸಿ.ಟಿ.ರವಿ ಸಹಕಾರ ಯೋಗೇಶ್ವರ್ ಪರವಾಗಿದೆ: ಡಿ.ಕೆ.ಸುರೇಶ್ ಸ್ಪೋಟಕ ಹೇಳಿಕೆ

By kannadanewsnow0924/10/2024 2:50 PM

ಬೆಂಗಳೂರು : “ಸಿ.ಟಿ.ರವಿ ಅವರ ಸಹಕಾರ ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆ ನೀವು (ಮಾಧ್ಯಮದವರು) ಮಾಡಿಕೊಳ್ಳಿ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯಿಸಿದರು.

ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ.ಟಿ.ರವಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರ ಹಾಗೂ ಬಿಜೆಪಿಯ ಬಗ್ಗೆ ನಾನು ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ವಿಶ್ಲೇಷಣೆಯನ್ನು ತೀವ್ರವಾಗಿ ಮಾಡಬಹುದು ಆದರೆ ಮಾಡುವುದಿಲ್ಲ.” ಎಂದರು.

ಬಿಜೆಪಿಯ ಕೆಲ ನಾಯಕರಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ ಎಂಬ ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ನಾನು ಸಿ.ಟಿ.ರವಿಯವರ ಹೇಳಿಕೆಗೆ ಮಾತ್ರ ಉತ್ತರ ನೀಡುತ್ತಿದ್ದು, ಮಿಕ್ಕ ಚರ್ಚೆ, ವಿಶ್ಲೇಷಣೆಯನ್ನು ನೀವು ಮಾಡಿ. ಮಾಧ್ಯಮದವರು ಹೆಚ್ಚು ವ್ಯಾಖ್ಯಾನ ಮಾಡುವುದರಿಂದ ಇದರ ಸಾಧಕ- ಬಾಧಕಗಳು ಹಾಗೂ ಕಳೆದ ಒಂದು ವಾರಗಳಿಂದ ನಡೆದ ವಿದ್ಯಮಾನಗಳನ್ನು ರಾಜ್ಯದ ಜನರಿಗೆ ನೀವು ತಿಳಿಸಬೇಕು” ಎಂದರು.

ನಿಖಿಲ್ ಅಥವಾ ಅನಸೂಯಾ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಬೇಕು ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ “ಅದು ಆಯಾಯ ಪಕ್ಷದ ತೀರ್ಮಾನ” ಎಂದರು.

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಪ್ರಬಲ ವ್ಯಕ್ತಿಯನ್ನೇ ಕಾಂಗ್ರೆಸ್ ಗೆ ಕರೆತರಲಾಗುತ್ತದೆ ಎನ್ನುವ ಸುದ್ದಿಯ ಬಗ್ಗೆ ಕೇಳಿದಾಗ “ಕಾದು ನೋಡೋಣ” ಎಂದಷ್ಟೇ ಉತ್ತರಿಸಿದರು.

ಚನ್ನಪಟ್ಟಣದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ

ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಅವರಿಗೆ ಟಿಕೆಟ್ ನೀಡಲು ಶಿವಕುಮಾರ್ ಅವರು ಹಿಂದೇಟು ಹಾಕಿದರು ಎನ್ನುವ ಬಗ್ಗೆ ಕೇಳಿದಾಗ “ನಾನು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ತಕ್ಷಣ ಇನ್ನೊಂದು ಚುನಾವಣೆಗೆ ನಿಂತರೆ, ಜನರಿಗೆ ಒಳ್ಳೆಯ ಸಂದೇಶ ನೀಡಿದಂತೆ ಆಗುವುದಿಲ್ಲ. ಹೀಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೈಕಮಾಂಡ್ ಗೆ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಅನೇಕ ಕಾರ್ಯಕರ್ತರು ನಾನೇ ನಿಲ್ಲಬೇಕು ಎಂದು ಹೇಳಿದರು. ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದರು.

ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು

ಯೋಗೇಶ್ವರ್ ಅವರು ಪಕ್ಷದಲ್ಲಿ ಮೂರು ವರ್ಷ ದುಡಿದ ನಂತರ ಟಿಕೆಟ್ ನೀಡಿ ಎನ್ನುವ ಕಾರ್ಯಕರ್ತರ ಹೇಳಿಕೆಗಳ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ನಾವುಗಳು, ಮುಖಂಡರು, ಕಾರ್ಯಕರ್ತರಾದಿಯಾಗಿ ಎಲ್ಲರೂ ಪಕ್ಷ ತೆಗೆದುಕೊಂಡಿರುವ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ. ನಾಮಪತ್ರ ಸಲ್ಲಿಕೆಯಾದ ನಂತರ ಎಲ್ಲರ ಬಳಿಯೂ ನಾನೇ ಖುದ್ದಾಗಿ ಮಾತನಾಡುತ್ತೇನೆ” ಎಂದರು.

ಆಕಾಂಕ್ಷಿಗಳ ಪಟ್ಟಿ ದೆಹಲಿಗೆ

ಶಿಗ್ಗಾಂವಿಯಲ್ಲಿ ಮುಸ್ಲಿಂ ಅಭ್ಯರ್ಥಿ ಹೊರತಾಗಿ ಬೇರೆಯವರನ್ನು ಘೋಷಣೆ ಮಾಡಲಾಗುತ್ತದೆಯೇ ಎಂದು ಕೇಳಿದಾಗ, “ಇದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸ್ಕ್ರೀನಿಂಗ್ ಕಮಿಟಿಯವರು ಈಗಾಗಲೇ ನಾಲ್ಕರಿಂದ ಐದು ಜನ ಆಕಾಂಕ್ಷಿಗಳ ಹೆಸರನ್ನು ದೆಹಲಿಗೆ ಕಳಿಸಿರಬಹುದು. ಮಾಜಿ ಮುಖ್ಯಮಂತ್ರಿ ಕ್ಷೇತ್ರವಾಗಿರುವುದರಿಂದ, ಗೆಲ್ಲುವಂತಹ ಪ್ರಭಾವಿ ವ್ಯಕ್ತಿಗೆ ಟಿಕೆಟ್ ನೀಡಬಹುದು” ಎಂದರು.

ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎನ್ನುವ ಸಚಿವ ಜಮೀರ್ ಅವರ ಬಹಿರಂಗ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರತಿ ಬಾರಿಯೂ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುತ್ತಿದೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಉಸ್ತುವಾರಿಯನ್ನು ಜಮೀರ್ ಅವರಿಗೆ ಹೈಕಮಾಂಡ್ ನೀಡಿರುವುದರಿಂದ ಹಾಗೂ ಅವರು ಸಹ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾರಣಕ್ಕೆ ಈ ರೀತಿಯ ಬೇಡಿಕೆ ಇಡುವುದು ಸಹಜ” ಎಂದರು.

ಒಮ್ಮತದ ಅಭ್ಯರ್ಥಿ ಘೋಷಣೆ

ಶಿಗ್ಗಾಂವಿಯಲ್ಲಿ ಟಿಕೆಟ್ ಹಂಚಿಕೆ ಗೊಂದಲದ ಬಗ್ಗೆ ಕೇಳಿದಾಗ “ಈ ಹಿಂದಿನ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳು ಹಾಗೂ ಬೇರೆಯವರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲಾ ಸಮಾಜದವರ ಬಳಿ ಮಾತನಾಡಿ ಒಮ್ಮತದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕು ಎನ್ನುವ ತೀರ್ಮಾನಕ್ಕೆ ಹೈಕಮಾಂಡ್ ಬಂದಿದೆ” ಎಂದರು.

ಮುಸ್ಲಿಮರಿಗೆ ಪ್ರತಿ ಬಾರಿಯೂ ಟಿಕೆಟ್ ನೀಡುತ್ತಿರುವುದರಿಂದ ಸೋಲಾಗುತ್ತಿದೆ. ಈ ಬಾರಿ ಹಿಂದುಗಳಿಗೆ ಟಿಕೆಟ್ ನೀಡಿ ಎನ್ನುವ ಕೂಗಿನ ಬಗ್ಗೆ ಕೇಳಿದಾಗ “ಇದರ ಬಗ್ಗೆ ತಿಳಿದಿಲ್ಲ” ಎಂದರು.

ಇಂದು ಮಧ್ಯಾಹ್ನ 3.30ಕ್ಕೆ ಚನ್ನಪಟ್ಟಣ ಉಪ ಚುನಾವಣೆಗೆ HDK, BSY ಜಂಟಿ ಸುದ್ದಿಗೋಷ್ಠಿಯಲ್ಲಿ ಅಭ್ಯರ್ಥಿ ಘೋಷಣೆ

BIG UPDATE: ಬೆಂಗಳೂರಲ್ಲಿ ವಾಲಿದ ಮತ್ತೊಂದು ನಿರ್ಮಾಣ ಹಂತದ ಕಟ್ಟಡ: ತೆರವಿಗೆ ಬಿಬಿಎಂಪಿ ಸೂಚನೆ

Share. Facebook Twitter LinkedIn WhatsApp Email

Related Posts

BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM1 Min Read

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM3 Mins Read

ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟಿಸ್

08/04/2026 6:02 AM1 Min Read
Recent News
BREAKING NEWS

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

08/04/2026 6:13 AM

ಮೆಹುಲ್ ಚೋಕ್ಸಿಗೆ ಭಾರಿ ಹಿನ್ನಡೆ: ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಸಮ್ಮತಿ

08/04/2026 6:10 AM

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM

ಫ್ರಾನ್ಸ್‌ನಲ್ಲಿ ಭೀಕರ ರೈಲು ಅಪಘಾತ: ಸೇನಾ ಟ್ರಕ್‌ಗೆ ಡಿಕ್ಕಿ ಹೊಡೆದ ಹೈ-ಸ್ಪೀಡ್ ಟ್ರೈನ್; ಚಾಲಕ ಸಾವು, 16 ಪ್ರಯಾಣಿಕರಿಗೆ ಗಾಯ!

08/04/2026 6:08 AM
State News
BREAKING NEWS KARNATAKA

BREAKING : ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕೇರಳದ ಯುವತಿ ನಾಪತ್ತೆ : ಚಂದ್ರದ್ರೋಣ ಪರ್ವತ ಶ್ರೇಣಿಲಿ ಯುವತಿ ಕಣ್ಮರೆ.!

By kannadanewsnow5708/04/2026 6:13 AM KARNATAKA 1 Min Read

ಚಿಕ್ಕಮಗಳೂರು: ಕೊಡಗಿನ ತಡಿಯಂಡಮೋಲ್ ಬೆಟ್ಟದಲ್ಲಿ ಚಾರಣಕ್ಕೆ ಹೋಗಿದ್ದ ಕೇರಳದ ಶರಣ್ಯ ಎಂಬುವವರು ನಾಪತ್ತೆಯಾಗಿ ಸಿಕ್ಕ ಬೆನ್ನಲ್ಲೇ, ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೊಬ್ಬ…

BIG NEWS: ಚಿತ್ರದುರ್ಗದ ಚಿಕ್ಕಜಾಜೂರು ‘PSI ನೇತ್ರಾವತಿ’ ಸಿಬ್ಬಂದಿಗೆ ‘ಬಿಸಿಲ ಶಿಕ್ಷೆ’ ನೀಡಿದ್ದೇಕೆ? ಅಸಲಿ ಸತ್ಯ, ಕಾರಣ ಇಲ್ಲಿದೆ ಓದಿ!

08/04/2026 6:10 AM

ಉಪ ಚುನಾವಣೆ ವೇಳೆ ಗ್ಯಾರಂಟಿಗೆ ಹಣ ಬಿಡುಗಡೆ: ರಾಜ್ಯ ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ ನೋಟಿಸ್

08/04/2026 6:02 AM

BIG NEWS : `ಡಾಕ್ಟರೇಟ್’ ನೀಡುವ ವಿಚಾರದಲ್ಲಿ ವಿವಿಗಳು ಸ್ವತಂತ್ರ : ಹೈಕೋರ್ಟ್ ಮಹತ್ವದ ತೀರ್ಪು

08/04/2026 5:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.