ಬೆಳಗಾವಿ : ಕಿತ್ತೂರು ಉತ್ಸವದಿಂದ ತೆರಳುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ದುಷ್ಕರ್ಮಿಗಳು ಯುವಕರ ಮೇಲೆ ಹಲ್ಲೆ ಮಾಡಿ ಯುವತಿಯರಿಗೆ ಅವಾಚ್ಯವಾಗಿ ನಿಂದಿಸಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಕಿತ್ತೂರು ಉತ್ಸವಕ್ಕೆ ಬಂದು ವಾಪಸ್ ಹೋಗುತ್ತಿದ್ದ ಯುವಕ-ಯುವತಿಯರನ್ನು ತಡೆದ ದುಷ್ಕರ್ಮಿಗಳ ಗುಂಪುವೊಂದು ಯುವಕರ ಮೇಲೆ ಹಲ್ಲೆ ಮಾಡಿ, ಯುವತಿಯರಿಗೆ ಅವಾಚ್ಯಶಬ್ದಗಳಿಂದ ನಿಂದಿಸಲಾಗಿದೆ.
ಹುಬ್ಬಳ್ಳಿಯಿಂದ ಕಿತ್ತೂರು ಉತ್ಸವಕ್ಕೆ ಆಗಮಿಸಿದ್ದ ಯುವಕ-ಯುವತಿಯರು ವಾಪಸ್ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯ ಸೇವಿಸಿ ಕೂತಿದ್ದ ಅನ್ಯಕೋಮಿನ ಯುವಕರ ಗುಂಪುವೊಂದು ಹಲ್ಲೆ ಮಾಡಿ, ಯುವತಿಯರಿಗೆ ನಿಂದಿಸಿದೆ ಎಂದು ಆರೋಪಿಸಲಾಗಿದೆ.
ಅಕ್ಟೋಬರ್ 23 ರಿಂದ 25 ರವರೆಗೆ ಮೂರು ದಿನಗಳ ಕಾಲ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಕಿತ್ತೂರು ಉತ್ಸವ ಕಾರ್ಯಕ್ರಮ ನಡೆಯುತ್ತಿದೆ.