ಕೊಪ್ಪಳ : ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದ ದಲಿತ ಮೇಲಿನ ದೌರ್ಜನ್ಯ ಪ್ರಕರಣ ಸಂಬಂಧ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಮಂದಿಗೆ ಜೀವಾವಧಿ ಶಿಕ್ಷೆಯನ್ನು ನೀಡಿ ಕೋರ್ಟ್ ಆದೇಶಿಸಿದೆ. ಈ ನಡುವೆ ಅನಾರೋಗ್ಯದಿಂದ ಅಪರಾಧಿಯೊಬ್ಬ ಸಾವನ್ನಪ್ಪಿದ್ದಾನೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅಪರಾಧಿ ರಾಮಣ್ಣ ಭೋವಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ನಿನ್ನೆ ಕೋರ್ಟ್ ಗೆ ಕರೆದುಕೊಂಡು ಬಂದ ವೇಳೆ ಅಸ್ವಸ್ಥನಾಗಿದ್ದ ರಾಮಣ್ಣ ಭೋವಿಯನ್ನು ಕೋರ್ಟ್ ಆವರಣದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಕೋರ್ಟ್ ಶಿಕ್ಷೆ ಪ್ರಕಟವಾದ ಬೆನ್ನಲ್ಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾಮಣ್ಣ ಭೋವಿಗೆ ಕೋರ್ಟ್ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದು, ಮರಕುಂಬಿ ಗ್ರಾಮ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದಂತ 101 ಆರೋಪಿಗಳಲ್ಲಿ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶಿಸಿದ್ದಾರೆ. ಮೂವರು ಆರೋಪಿಗಳಇಗೆ ಐದು ವರ್ಷ ಕಠಿಣ ಶಿಕ್ಷೆಯನ್ನು ತಲಾ 2 ಸಾವಿರ ದಂಡವನ್ನು ವಿಧಿಸಿದ್ದಾರೆ. ಇನ್ನೂ ಜೀವಾವಧಿ ಶಿಕ್ಷೆಗೆ ಒಳಗಾದಂತ 98 ಅಪರಾಧಿಗಳಿಗೆ ತಲಾ 5 ಸಾವಿರ ದಂಡವನ್ನು ವಿಧಿಸಿದ್ದಾರೆ.