ಬೆಂಗಳೂರು : ಆರೋಗ್ಯ ಇಲಾಖೆಯ ಮಹತ್ವಾಕಾಂಕ್ಷಿ ʼಗೃಹ ಆರೋಗ್ಯ, ಆರೋಗ್ಯ ಸೇವೆ ಮನೆ ಬಾಗಿಲಿಗೆʼ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಮನೆ ಬಾಗಿಲಿಗೆ ಬರಲಿದೆ ‘ಗೃಹ ಆರೋಗ್ಯ, ಈ ಯೋಜನೆಯಡಿ ಗ್ರಾಮೀಣ ಪ್ರದೇಶದ 30 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಸಕ್ಕರೆ ಕಾಯಿಲೆ, ರಕ್ತದೊತ್ತಡ (ಬಿಪಿ), ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಪ್ರಾಥಮಿಕ ಹಂತದ ತಪಾಸಣೆಗಳು ಮನೆ ಬಾಗಿಲಲ್ಲಿ ದೊರೆಯಲಿವೆ.
ಮನೆ ಬಾಗಿಲಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು
ಮನೆ ಬಾಗಿಲಿನಲ್ಲೇ ಆರೋಗ್ಯ ತಪಾಸಣೆ
ರಕ್ತದೊತ್ತಡ ಸಮಸ್ಯೆ, ಮಧುಮೇಹ, ಬಾಯಿ, ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್, ನಿದ್ದೆಯಲ್ಲಿ ಉಸಿರುಗಟ್ಟುವಿಕೆ, ಮಾನಸಿಕ ಆರೋಗ್ಯದ ತಪಾಸಣೆ
ಆರೋಗ್ಯ ಕಾರ್ಯಕರ್ತರ ಒಂದು ತಂಡ ದಿನಕ್ಕೆ 15 ಮನೆಗಳ ತಪಾಸಣೆ ನಡೆಸಲಿದೆ. ಪ್ರತಿ ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರ ಭೇಟಿ ಕಡ್ಡಾಯ
ದೃಢಪಟ್ಟ ಪ್ರಕರಣಗಳಿಗೆ ಅಗತ್ಯ ಔಷಧ ವಿತರಣೆ, ಕೆಲವರಿಗೆ ಜೀವನ ಶೈಲಿ ಮಾರ್ಪಾಡಿಗೆ ಸಲಹೆ
ಆರೈಕೆಯಲ್ಲಿರುವ ರೋಗಿಗಳಿಗೆ, ಅಂಗವಿಕಲರಿಗೆ, ಹಿರಿಯ ನಾಗರಿಕರಿಗೆ ಔಷಧೋಪಚಾರ. ಉಚಿತವಾಗಿ ಮಾತ್ರೆಗಳ ವಿತರಣೆ
4 ರಿಂದ 6 ತಿಂಗಳಲ್ಲಿ ಸ್ಟ್ರೀನಿಂಗ್ ಕಾರ್ಯ ಪೂರ್ಣ. ನಂತರ ಹೆಚ್ಚಿನ ಆರೈಕೆಗಾಗಿ ಒಂದು ತಿಂಗಳ ನಂತರ ವಿಶೇಷ ಆರೋಗ್ಯ ಶಿಬಿರಗಳ ಆಯೋಜನೆ
ಎರಡನೇ ಹಂತದಲ್ಲಿ ಫಾಲೋಅಪ್ ಮತ್ತು ನಿಯಂತ್ರಣಕ್ಕೆ ಗಮನ. ಆರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳು, ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸಿಕ ಆರೋಗ್ಯ ಶಿಬಿರಗಳ ಆಯೋಜನೆ
ಅಕಾಲಿಕ ಮರಣಗಳನ್ನು ತಡೆಗಟ್ಟಲು, ಸಾಂಕ್ರಾಮಿಕವಲ್ಲದ ರೋಗಗಳ ಚಿಕಿತ್ಸೆಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಪ್ರಯೋಜನ