ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರ ದುರಂತ ಒಂದು ನಡೆದಿದ್ದು, ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಬುರ್ಗಿ ನಗರದ ಬಿದ್ದಾಪುರ್ ಕಾಲೋನಿ ರೈಲ್ವೆ ಗೇಟ್ ಬಳಿ ಈ ಒಂದು ದುರ್ಘಟನೆ ಸಂಭವಿಸಿದೆ.
ರೈಲಿಗೆ ತಲೆ ಕೊಟ್ಟು SSLC ವಿದ್ಯಾರ್ಥಿ ವೀರೇಶ ಸ್ವಾಮಿ (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಮನೆಯಿಂದ ಟ್ಯೂಷನ್ ಗೆ ಹೋಗಿ ಬರುತ್ತೇನೆ ಎಂದು ಹೇಳಿ ವೀರೇಶ್ ಸ್ವಾಮಿ ಮನೆ ಬಿಟ್ಟಿದ್ದ. ಬಳಿಕ ವಾಂತಿ ಬರುತ್ತಿದೆ ಎಂದು ಹೇಳಿ ಟ್ಯೂಷನ್ ಕ್ಲಾಸ್ನಿಂದ ವೀರೇಶ್ ಸ್ವಾಮಿ ಹೊರಗಡೆ ಬಂದಿದ್ದಾನೆ.
ಆದರೆ ಟ್ಯೂಷನ್ ನಿಂದ ಹೋದವನು ರೈಲ್ವೆ ಹಳಿಯ ಮೇಲೆ ಶವವಾಗಿ ಪತ್ತೆಯಾಗಿದ್ದಾನೆ. ವಿದ್ಯಾರ್ಥಿ ವೀರೇಶ್ ಸ್ವಾಮಿ ಆತ್ಮಹತ್ಯೆಗೆ ನಿಖರವಾದಂತಹ ಕಾರಣ ತಿಳಿದು ಬಂದಿಲ್ಲ ಎಂದು ಹೇಳಲಾಗುತ್ತಿದ್ದು, ಘಟನೆ ಕುರಿತಂತೆ ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.