ಉಡುಪಿ : ತನ್ನ ಸ್ವಾರ್ಥಕ್ಕೆ ತಾಳಿ ಕಟ್ಟಿದ ಗಂಡನನ್ನೇ ಪ್ರಿಯಕರನೊಂದಿಗೆ ಸೇರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಉಡುಪಿಯ ಕಾರ್ಕಳ ತಾಲೂಕಿನಲ್ಲಿ ನಡೆದಿದೆ. ಆದರೆ ಇದೀಗ ಈ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದು, ಸ್ಲೋ ಪಾಯ್ಸನ್ ನೀಡಿ ಕೊಲೆ ಮಾಡಿದ್ದಾಗಿ ಪೋಲೀಸರ ವಿಚಾರಣೆಯ ವೇಳೆ ಬಹಿರಂಗವಾಗಿದೆ.
ಹೌದು ಪ್ರಿಯಕರನ ಜೊತೆ ಸೇರಿ ಪತಿಗೆ ಸ್ಲೋ ಪಾಯಿಸನ್ ನೀಡಿ ಪತ್ನಿ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ. ಬಾಲಕೃಷ್ಣ(44) ಹತ್ಯೆಗೊಳಗಾದ ಗಂಡ. ಸದ್ಯ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾವಿಗೂ ಮುನ್ನ ಕಳೆದ 25 ದಿನದಿಂದ ಜ್ವರ, ವಾಂತಿಯಿಂದ ಬಾಲಕೃಷ್ಣ ಬಳಲುತ್ತಿದ್ದರು. ಕೆಎಂಸಿ, ನಿಮ್ಹಾನ್ಸ್ ಹಾಗೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದ ಹಿನ್ನೆಲೆ ಬಾಲಕೃಷ್ಣನನ್ನು ಮನೆಗೆ ಕರೆತರಲಾಗಿತ್ತು. ಅಕ್ಟೋಬರ್ 20ರ ತಡರಾತ್ರಿ ಮೃತಪಟ್ಟಿದ್ದಾರೆ.
ಬಾಲಕೃಷ್ಣ ಅನಾರೋಗ್ಯ ಬಗ್ಗೆ ಮನೆಯವರಿಗೆ ಸಂಶಯ ಮೂಡಿತ್ತು. ಹೀಗಾಗಿ ಮೃತ ಬಾಲಕೃಷ್ಣ ಸಹೋದರ ರಾಮಕೃಷ್ಣರಿಂದ ದೂರು ದಾಖಲಿಸಿದ್ದರು. ಇದಾಗಿ ಮರಣೋತ್ತರ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದ್ದ ದಿನ ತನ್ನ ಸಹೋದರನ ಬಳಿ ಪ್ರತಿಮಾ ನಡೆದ ಘಟನೆಯನ್ನು ಬಿಚ್ಚಿಟ್ಟಿದ್ದಾಳೆ. ಪ್ರಿಯಕರ ದಿಲೀಪ್ ಜೊತೆ ಸೇರಿ ಒಂದುವರೆ ತಿಂಗಳಿಂದ ಸ್ಲೋ ಪಾಯಿಸನ್ ನೀಡಿದ್ದು, ಉಸಿರುಗಟ್ಟಿಸಿ ಸಾಯಿಸಿದ್ದನ್ನು ಒಪ್ಪಿಕೊಂಡಿದ್ದಾಳೆ.