Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲೇ ಮೊದಲು: ಬೆಂಗಳೂರಲ್ಲಿ ‘ಪ್ರತಿಷ್ಠಿತ ಮಾಲ್‍’ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ‘ಪರೀಕ್ಷಾ ಕೇಂದ್ರ’ ಸ್ಥಾಪನೆ
KARNATAKA

ದೇಶದಲ್ಲೇ ಮೊದಲು: ಬೆಂಗಳೂರಲ್ಲಿ ‘ಪ್ರತಿಷ್ಠಿತ ಮಾಲ್‍’ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ‘ಪರೀಕ್ಷಾ ಕೇಂದ್ರ’ ಸ್ಥಾಪನೆ

By kannadanewsnow0925/10/2024 7:42 PM

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಪ್ರತಿಷ್ಠಿತ ಮಾಲ್‍ಗಳಲ್ಲಿ ‘ಆಹಾರ ಪದಾರ್ಥಗಳ ಕಲಬೆರಕೆ’ ಪತ್ತೆಗೆ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗಿದೆ. ತರಕಾರಿ, ಆಹಾರ ಧಾನ್ಯಗಳಿರುವ ಸೂಪರ್ ಮಾರ್ಕೇಟ್ ಗಳಲ್ಲೂ ಗುಣಮಟ್ಟ ಪರೀಕ್ಷೆಗೆ ರ‌್ಯಾಪಿಡ್ ಟೆಸ್ಟಿಂಗ್ ಕಿಟ್ ಅಳವಡಿಕೆ ಮಾಡಲಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ವಿಚಾರದಲ್ಲಿ ಇನ್ಮುಂದೆ ಸಾರ್ವಜನಿಕರೇ ಫುಡ್ ಕೋರ್ಟ್ ಗಳಲ್ಲಿ ಆಹಾರ ತಪಾಸಣೆ ನಡೆಸಿಕೊಳ್ಳಬಹುದು. ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಇಂದು ಆಹಾರ ತಪಾಸಣಾ ರ‌್ಯಾಪಿಟ್ ಟೆಸ್ಟಿಂಗ್ ಕಿಟ್ಸ್ ಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಪರೀಕ್ಷಾ ವಿಧಾನವನ್ನ ಪರಿಶೀಲಿಸಿದ ಸಚಿವರು, ಆಹಾರ ಪದಾರ್ಥಗಳ ಟೆಸ್ಟಿಂಗ್ ಗೆ ಮುಂದಾಗುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ಒದಗಿಸುವ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಸಚಿವರು, ಸಾರ್ವಜನಿಕರು ತ್ವರಿತಗತಿಯಲ್ಲಿ ಆಹಾರ ಪದಾರ್ಥಗಳ ಗುಣಮಟ್ಟವನ್ನ ಪರೀಕ್ಷಿಸಿಕೊಳ್ಳಬಹುದಾಗಿದೆ. ಆರಂಭಿಕ ಹಂತದಲ್ಲಿ ಬೆಂಗಳೂರಿನ 10 ಮಾಲ್ ಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಆಹಾರ ಪದಾರ್ಥಗಳ ಕಲಬೆರಕೆ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರಗಳನ್ನ ಸ್ಥಾಪಿಸಲಾಗಿದೆ. ಸಾರ್ವಜನಿಕರು ಈ ಮಾಲ್‍ಗಳಲ್ಲಿ ಪ್ರತಿ ದಿನ ಬಳಸುವ ಆಹಾರ ಪದಾರ್ಥಗಳಾದ ಬೇಳೆ ಕಾಳುಗಳು, ಸಕ್ಕರೆ, ಅಡುಗೆ ಎಣ್ಣೆ ಟೀ-ಪುಡಿ, ಉಪ್ಪು, ಹಾಲು ಮತ್ತು ಹಾಲಿನ ಉತ್ಪನ್ನಗಳಾದ ತುಪ್ಪ, ಪನೀರ್, ಬೆಣ್ಣೆ, ತರಕಾರಿಗಳು, ಧನಿಯಾಪುಡಿ, ಕುಡಿಯುವ ನೀರು ಇತ್ಯಾದಿ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ತ್ವರಿತ ಪರೀಕ್ಷೆಗಳಿಂದ ಖಚಿತಪಡಿಸಿಕೊಳ್ಳಬಹುದು ಎಂದರು.

ಅಲ್ಲದೇ ಬೆಂಗಳೂರಿನ ತರಕಾರಿ ಮತ್ತು ಆಹಾರ ಧಾನ್ಯಗಳನ್ನ ಮಾರಾಟ ಮಾಡುವ ಮೋರ್, ರಿಲಾಯನ್ಸ್ ಫ್ರೆಸ್ ಸೇರಿದಂತೆ ಸೂಪರ್ ಮಾರ್ಕೆಟ್ ಗಳಲ್ಲೂ ಫುಡ್ ಟೆಸ್ಟಿಂಗ್ ಕಿಟ್ ಗಳನ್ನ ಅಳವಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇದರಿಂದ ಹಣ್ಣು, ತರಕಾರಿಗಳು ಹಾಗೂ ಆಹಾರ ಧಾನ್ಯಗಳ ಗುಣಮಟ್ಟವನ್ನ ಪರಿಕ್ಷಿಸಿಕೊಳ್ಳಲು ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಆಹಾರ ಗುಣಮಟ್ಟದ ವಿಚಾರದಲ್ಲಿ ಇತ್ತಿಚೆಗೆ ಹಲವು ಬಿಗಿ ಕ್ರಮಗಳನ್ನ ಕೈಗೊಳ್ಳುತ್ತಿರುವುದು ಆಹಾರ ತಯಾರಕರಿಗೆ ತೊಂದರೆ ಕೊಡುವ ಉದ್ದೇಶದಿಂದಲ್ಲ. ಬದಲಿಗೆ ನಮ್ಮ ಜನರಲ್ಲಿ ಅರಿವು ಮೂಡಿಸುವುದೇ ನಮ್ಮ ಮುಖ್ಯ ಉದ್ದೇಶವಾಗಿದೆ.‌ ಶುದ್ಧವಾದ ಆಹಾರ ಸೇವನೆಯಿಂದ ಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಹೀಗಾಗಿ ಆಹಾರ ಕಲಬೆರಕೆಯ ನಿರ್ಮೂಲನೆಗಾಗಿ ಕೈ ಜೋಡಿಸುವಂತೆ ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ತಿರುಪತಿ ಲಡ್ಡುವಿನ ಪ್ರಕರಣದ ಹಿನ್ನೆಲೆಯಲ್ಲಿ ತುಪ್ಪದ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಅನುಮಾನಗಳು ತಲೆದೂರಿದ್ದವು. ದನ ಮಾಂಸದ ಕೊಬ್ನಿನಾಂಶ ಬಳಸುತ್ತಿದ್ದಾರೆ ಎಂಬುದು ಸಾರ್ವಜನಿಕರಲ್ಲಿ ಆತಂಕ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಪತಂಜಲಿ ಸೇರಿದಂತೆ 230 ಬಗೆಯ ತುಪ್ಪಗಳನ್ನ ಪರೀಕ್ಷಿಸಲಾಗಿದ್ದು, ಯಾವುದೇ ತುಪ್ಪವು ಅನ್ ಸೇಫ್ ಎಂದು ಪತ್ತೆಯಾಗಿಲ್ಲ. ಅಲ್ಲದೇ ದನ ಮಾಂಸದ ಕೊಬ್ಬಿನಾಂಶ ತುಪ್ಪಗಳಲ್ಲಿ ಪತ್ತೆಯಾಗಿಲ್ಲ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಇದೇ ವೇಳೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಬೆಂಗಳೂರಿನ ಯಾವ ಮಾಲ್ ಗಳಲ್ಲಿದೆ ರ‌್ಯಾಪಿಡ್ ಫುಡ್ ಟೆಸ್ಟಿಂಗ್ ಕಿಟ್ಸ್

ವೈಷ್ಣವಿ ಸಫೈರ್ ಸೆಂಟರ್ ತುಮಕೂರು ರಸ್ತೆ, ಎಲಿಮೆಂಟ್ಸ್ ಮಾಲ್ ಥಣಿಸಂದ್ರ, ಫೀನಿಕ್ಸ್ ಮಾಲ್ ಆಫ್ ಏಷ್ಯಾ ಬಳ್ಳಾರಿ ರಸ್ತೆ, ಮೀನಾಕ್ಷಿ ಮಾಲ್ ಬನ್ನೇರುಘಟ್ಟ ರಸ್ತೆ, ಶೋಭಾ ಮಾಲ್ ಚರ್ಚ್ ಸ್ಟ್ರೀಟ್, ಸೆಂಟ್ರಲ್ ಮಾಲ್ ಬೆಳ್ಳಂದೂರು, ಗೋಪಾಲನ್ ಸಿಗ್ನೇಚರ್ ಮಾಲ್ ಬೆನ್ನಿಗಾನಹಳ್ಳಿ, ನೆಕ್ಸಸ್ ಫೋರಂ ಮಾಲ್ ಕೋರಮಂಗಲ, ಭಾರತೀಯ ಮಾಲ್ ಆಫ್ ಬೆಂಗಳೂರು ಥಣಿಸಂದ್ರ ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿಟಿ ವಲ್ರ್ಡ್ ಮಾಲ್ ಗಳಲ್ಲಿ ಕಾರ್ಯಕ್ರಮ ಪ್ರಾರಂಭಿಸಲಾಗಿದೆ.

ಉದ್ಯೋಗವಕಾಶ ಮತ್ತು ವೇತನ ವೃದ್ಧಿಯಲ್ಲಿ ದೇಶದಲ್ಲೇ ಬೆಂಗಳೂರು ನಂ.1

JOB ALERT: ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ 4,115 ನೇಮಕಾತಿಗೆ ಗ್ರೀನ್ ಸಿಗ್ನಲ್ | Karnataka Police Recruitment 2024

Share. Facebook Twitter LinkedIn WhatsApp Email

Related Posts

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM1 Min Read

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM1 Min Read

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM2 Mins Read
Recent News

BREAKING : ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಮತ್ತೆ ದಾಳಿ : 50ಕ್ಕೂ ಹೆಚ್ಚು ಡ್ರೋನ್ ಧ್ವಂಸಗೊಳಿಸಿದ ಭಾರತ | Watch Video

10/05/2025 9:23 PM

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

10/05/2025 9:02 PM

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ತನ್ನ ವಾಯುಪ್ರದೇಶ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಪಾಕಿಸ್ತಾನ ಘೋಷಣೆ | India-Pakistan ceasefire

10/05/2025 8:04 PM
State News
KARNATAKA

BREAKING : ಕದನ ವಿರಾಮ ಘೋಷಣೆಯಾದರು, ಭಯೋತ್ಪಾದನೆ ಮೂಲೋತ್ಪಾಟನೆಗೆ ಕ್ರಮ : CM ಸಿದ್ದರಾಮಯ್ಯ

By kannadanewsnow0510/05/2025 9:02 PM KARNATAKA 1 Min Read

ಬೆಂಗಳೂರು : ಪಹಲ್ಗಾಂ ಉಗ್ರರ ದಾಳಿಗೆ ಭಾರತ ಪ್ರತಿಕಾರ ತೀರಿಸಿಕೊಂಡಿದ್ದು, ಇದೀಗ ಇಂದು ಸಂಜೆ 5 ಗಂಟೆಗೆ ಭಾರತ ಮತ್ತು…

BIG NEWS : ಮೇ 12 ರಂದು ‘ಬುದ್ಧ ಪೂರ್ಣಿಮ’ ಹಿನ್ನೆಲೆ, ಮಾಂಸ ಮಾರಾಟ ನಿಷೇಧಿಸಿ ‘BBMP’ ಆದೇಶ

10/05/2025 8:26 PM

BREAKING: ಆಪರೇಷನ್ ಸಿಂಧೂರ್: ಎಲ್ಲಾ ಜಿಲ್ಲೆಗಳಲ್ಲಿ ಸಹಾಯ ಕೇಂದ್ರ ತೆರೆದು, ಸಹಾಯವಾಣಿ ಆರಂಭಿಸಿ- ಸಿಎಂ ಸಿದ್ಧರಾಮಯ್ಯ

10/05/2025 5:44 PM

BREAKING : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ‘ಮಾಕ್ ಡ್ರಿಲ್’ ನಡೆಸಿ : ಅಧಿಕಾರಿಗಳಿಗೆ CM ಸಿದ್ದರಾಮಯ್ಯ ಸೂಚನೆ

10/05/2025 5:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.