Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM

ಶಿಕ್ಷಕ ಆಕಾಂಕ್ಷಿಗಳೇ ಗಮನಿಸಿ ; 2026ರ ‘CTET’ ನೋಂದಣಿ ಆರಂಭ ; ಡಿಸೆಂಬರ್ 18ರೊಳಗೆ ಅರ್ಜಿ ಸಲ್ಲಿಸಿ!

27/11/2025 5:54 PM

10,000 ರೂಪಾಯಿ ಹೂಡಿಕೆ ಮಾಡಿ, 19 ಕೋಟಿ ಮಾಲೀಕನಾದ ; ಈ 10 ಷೇರುಗಳು ಆತನನ್ನ ಶ್ರೀಮಂತನಾಗಿ ಮಾಡಿದವು!

27/11/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ-ಧರ್ಮ‌ ಬದಿಗಿಟ್ಟು, ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!
KARNATAKA

ಜಾತಿ-ಧರ್ಮ‌ ಬದಿಗಿಟ್ಟು, ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!

By kannadanewsnow5726/10/2024 6:25 AM

ಬೆಳಗಾವಿ : ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಹಾಗೂ ಸಮಾನತೆ ದೊರೆತಾಗ ಮಾತ್ರ ಜಾತಿ ವ್ಯವಸ್ಥೆ ವಿನಾಶಗೊಳಿಸುವುದು ಸಾಧ್ಯ. ಜಾತಿ ವ್ಯವಸ್ಥೆ ವಿರುದ್ಧ 12 ನೇ ಶತಮಾನದಲ್ಲಿಯೇ ಕ್ರಾಂತಿ ಆರಂಭಿಸಿದ್ದರೂ ಇದುವರೆಗೆ ಸಾಮಾಜಿಕ ಸಮಾನತೆ ಸಾಧ್ಯವಾಗುತ್ತಿಲ್ಲ. ಆದ್ದರಿಂದ ನಮ್ಮ ಸರಕಾರವು ಸಾಮಾಜಿಕ ಸಮಾನತೆಯ ತತ್ವದ ಆಧಾರದ ಮೇಲೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು.

ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಿತ್ತೂರಿನ ಕೋಟೆ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ ಕಿತ್ತೂರು ಉತ್ಸವ ಮತ್ತು ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷಾಚರಣೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು. ಬಲಿಷ್ಠ ಬ್ರಿಟೀಷರ ವಿರುದ್ಧ ಹೋರಾಟದ‌ ಕಹಳೆ ಮೊಳಗಿಸಿದ ಚನ್ನಮ್ಮನ ಬಗ್ಗೆ ಯುವಪೀಳಿಗೆಗೆ ತಿಳಿಸಿಕೊಡಲು ಕ್ರಮ ಕೈಗೊಳ್ಳಲಾಗಿದೆ.

ರಾಯಣ್ಣ ಮತ್ತು ಬಾಳಪ್ಪನವರು ಚನ್ನಮ್ಮನ ಹೋರಾಟದಲ್ಲಿ ಜತೆಗಿದ್ದವರು. ದೇಶಪ್ರೇಮ ಬೆಳೆಸಲು ಇವರ ಹೋರಾಟ ಸ್ಫೂರ್ತಿಯಾಗಿದೆ. ಜಾತಿಧರ್ಮ ಬದಿಗಿಟ್ಟು ಪ್ರತಿಯೊಬ್ಬರು ಪರಸ್ಪರ ಪ್ರೀತಿಸುವ ಮೂಲಕ ದೇಶಪ್ರೇಮವನ್ನು ಪ್ರದರ್ಶಿಸಬೇಕು ಕಿತ್ತೂರು ಸಂಸ್ಥಾನದ ಚನ್ನಮ್ಮ ಕಪ್ಪ ಕಾಣಿಕೆ ಏಕೆ ಕೊಡಬೇಕು ಎಂದು ಪ್ರಶ್ನಿಸುವುದರ ಜತೆಗೆ ದತ್ತು ಮಕ್ಕಳಗೆ ಹಕ್ಕಿಲ್ಲ ಎಂಬ ಕಾಯ್ದೆ ವಿರುದ್ಧ ಮೊಟ್ಟಮೊದಲ‌ ಬಾರಿಗೆ ಯುದ್ಧ ಸಾರಿ ಜಯಗಳಿಸಿರುವುದು ಹೆಮ್ಮೆಯ‌ ವಿಷಯ. ವಿಜಯೋತ್ಸವದ 200 ವರ್ಷಾಚರಣೆ ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ಆಚರಿಸಲು ಶಾಸಕ ಬಾಬಾಸಾಹೇಬ್ ಪಾಟೀಲರ ಒತ್ತಾಯದ ಮೇರೆಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಚನ್ನಮ್ಮನವರ ಜಯಂತ್ಯೋತ್ಸವವನ್ನು ಸರಕಾರದ ವತಿಯಿಂದ ಆಚರಿಸಲು ಆದೇಶ ಮಾಡಿದ್ದು ನಮ್ಮ ಸರಕಾರ; ಅದು ಸಿದ್ದರಾಮಯ್ಯನವರ ಸರಕಾರ ಎಂದರು.

ಚನ್ನಮ್ಮನವರನ್ನು ವೈಭವೀಕರಿಸಲು ಜಯಂತ್ಯೋತ್ಸವ ಮಾಡುತ್ತಿಲ್ಲ; ಚನ್ನಮ್ಮನ ಐತಿಹಾಸಿಕ ಹೋರಾಟ ಜನರಿಗೆ ತಿಳಿಸಲು ಆಚರಿಸಲಾಗುತ್ತಿದೆ. ಅದೇ ರೀತಿ ಕಿತ್ತೂರು ವಿಜಯೋತ್ಸವದ 200 ನೇ ವರ್ಷಾಚರಣೆಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗಿದೆ. ಹುಟ್ಟುವಾಗ ವಿಶ್ವಮಾನವ ಬೆಳಿತಾ‌ ಬೆಳಿತಾ ಅಲ್ಪಮಾನವರಾಗುತ್ತಾರೆ. ನಾವು ಬೆಳಿತಾ ಬೆಳಿತಾ ವಿಶ್ವಮಾನವರಾಗಬೇಕಿದೆ ಎಂದು ಕುವೆಂಪು ಹೇಳಿದ್ದಾರೆ. ಅದೇ ರೀತಿ ನಾವು ವಿಶ್ವಮಾನವರಾಗಬೇಕಿದೆ.

ಅನೇಕರ ತ್ಯಾಗ ಬಲಿದಾನಗಳಿಂದ ನಾವು ಗಳಿಸಿರುವ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಸಮ ಸಮಾಜ ನಿರ್ಮಿಸಬೇಕಿದೆ. ಬಸವಣ್ಣನವರ ಆಶಯದಂತೆ ಜಾತಿ, ಮೌಢ್ಯ, ಕಂದಾಚಾರಗಳನ್ನು ತಿರಸ್ಕರಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆ ನೀಡಿದರು.

CM Siddaramaiah calls to keep caste-religion aside and develop patriotism! ಜಾತಿ-ಧರ್ಮ‌ ಬದಿಗಿಟ್ಟು ದೇಶಪ್ರೇಮ ಬೆಳೆಸಲು ಸಿಎಂ ಸಿದ್ದರಾಮಯ್ಯ ಕರೆ!
Share. Facebook Twitter LinkedIn WhatsApp Email

Related Posts

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM2 Mins Read

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM2 Mins Read

BREAKING: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೀರಿನ ಬಾಕಿ, ಅಸಲು ಏಕಕಾಲದಲ್ಲಿ ಪಾವತಿಸಿದರೆ ‘ಬಡ್ಡಿ ಮನ್ನಾ’

27/11/2025 5:06 PM1 Min Read
Recent News

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

27/11/2025 5:55 PM

ಶಿಕ್ಷಕ ಆಕಾಂಕ್ಷಿಗಳೇ ಗಮನಿಸಿ ; 2026ರ ‘CTET’ ನೋಂದಣಿ ಆರಂಭ ; ಡಿಸೆಂಬರ್ 18ರೊಳಗೆ ಅರ್ಜಿ ಸಲ್ಲಿಸಿ!

27/11/2025 5:54 PM

10,000 ರೂಪಾಯಿ ಹೂಡಿಕೆ ಮಾಡಿ, 19 ಕೋಟಿ ಮಾಲೀಕನಾದ ; ಈ 10 ಷೇರುಗಳು ಆತನನ್ನ ಶ್ರೀಮಂತನಾಗಿ ಮಾಡಿದವು!

27/11/2025 5:39 PM

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM
State News
KARNATAKA

ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಇಲ್ಲಿದೆ | Karnataka Cabinet Meeting

By kannadanewsnow0927/11/2025 5:55 PM KARNATAKA 2 Mins Read

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ನೀರಿನ ಬಾಕಿ,…

ಪಾಕಿಸ್ತಾನದೊಂದಿಗೆ ಸಂಪರ್ಕ ಹೊಂದಿದ್ದ ನಕಲಿ IAS ಅಧಿಕಾರಿ ಮಹಾರಾಷ್ಟ್ರದಲ್ಲಿ ಬಂಧನ

27/11/2025 5:33 PM

BREAKING: ಬೆಂಗಳೂರು ಜನತೆಗೆ ಗುಡ್ ನ್ಯೂಸ್: ನೀರಿನ ಬಾಕಿ, ಅಸಲು ಏಕಕಾಲದಲ್ಲಿ ಪಾವತಿಸಿದರೆ ‘ಬಡ್ಡಿ ಮನ್ನಾ’

27/11/2025 5:06 PM

ನುಡಿದಂತೆ ನಡೆದ ರಾಮಲಿಂಗಾರೆಡ್ಡಿ: NWKRTC 1000 ಚಾಲನಾ ಹುದ್ದೆ ಭರ್ತಿಗೆ ಸಂಪುಟದ ಅನುಮೋದನೆ ಪಡೆದ ಸಚಿವರು

27/11/2025 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.