ಬೆಂಗಳೂರು : ರಾಜ್ಯ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ ಕ್ಷೇತ್ರದಲ್ಲಿ ತೀವ್ರ ಜಿದ್ದಾಜಿದ್ದಿ ಕುಡಿದು ಮೈತ್ರಿ ಪಕ್ಷಗಳಾದ ಬಿಜೆಪಿ ಜೆಡಿಎಸ್ ಪರವಾಗಿಲ್ಲ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಇತ್ತ ಕಾಂಗ್ರೆಸ್ ಪರವಾಗಿಶ್ವರ್ ಕಣಕ್ಕಿಳಿದಿದ್ದಾರೆ. ಈ ಕುರಿತಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ನಿಮ್ಮ ಗುರುಗೆ ಹೋಗಿ ಹೇಳಿ ಈ ಬಾರಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಗೆಲ್ಲೋದು ನಾವೇ ಎಂದು ಸವಾಲು ಹಾಕಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಜೆಡಿಎಸ್ ಬಿಜೆಪಿ ಸಮನ್ವಯ ಸಭೆಯಲ್ಲಿ ಸವಾಲು ಹಾಕಿದ ಬಿ ವೈ ವಿಜಯೇಂದ್ರ, ಯೋಗೇಶ್ವರ ಶಿಷ್ಯರಿದ್ದರೆ ಸರಿಯಾಗಿ ಕೇಳಿಸಿಕೊಳ್ಳಿ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ ನಾನು ಸವಾಲು ಹಾಕುತ್ತಿದ್ದೇನೆ ನಿಮ್ಮ ಗುರುಗೆ ಹೋಗಿ ಹೇಳಿ ಚನ್ನಪಟ್ಟಣದಲ್ಲಿ ಗೆಲ್ಲೋದು ನಾವೇ ಎಂದು ಬಿ ವೈ ವಿಜಯೇಂದ್ರ ಸವಾಲು ಹಾಕಿದರು.
ಚನ್ನಪಟ್ಟಣ ಕ್ಷೇತ್ರದ ಚುನಾವಣೆಯನ್ನು ನಾವು ಸವಾಲಾಗಿ ಸ್ವೀಕಾರ ಮಾಡಿದ್ದೇವೆ. ಶಿಗ್ಗಾಂವಿ ಕ್ಷೇತ್ರವನ್ನು ಬಿಜೆಪಿ ಈಗಾಗಲೇ ಗೆದ್ದಿರುವಂಥ ವಾತಾವರಣ ನಿರ್ಮಾಣವಾಗಿದೆ. ಸಂಡೂರಿನಲ್ಲೂ ಬಿಜೆಪಿ ಐತಿಹಾಸಿಕ ಗೆಲುವಿನ ನಿರೀಕ್ಷೆಯಲ್ಲಿದ್ದೇವೆ. ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದ್ದು, ಬಿಜೆಪಿ- ಜೆಡಿಎಸ್ ಪಕ್ಷಗಳ ಕಾರ್ಯಕರ್ತರಲ್ಲಿ ರಣೋತ್ಸಾಹ ಇದೆ. ಚನ್ನಪಟ್ಟಣದಲ್ಲಿ ಎನ್ಡಿಎ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.