Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಡಚ್ ಸರ್ಕಾರ ಪತನ: ಪ್ರಧಾನಿ ಡಿಕ್ ಸ್ಕೋಫ್ ರಾಜೀನಾಮೆ | Dutch govt collapses

04/06/2025 7:58 AM

BREAKING : ರಾಯಚೂರಲ್ಲಿ 6 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಹೋಂಗಾರ್ಡ್ ಕಮಾಂಡೆಂಟ್

04/06/2025 7:57 AM

Axiom-4 mission : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ನಿಲ್ದಾಣ ಉಡಾವಣೆ ಜೂ. 10 ಕ್ಕೆ ಮುಂದೂಡಿಕೆ

04/06/2025 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಕ್ತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಶಕ್ತಿ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0931/10/2024 4:38 PM

ಬೆಂಗಳೂರು: “ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಕೇಳಿದಾಗ, “ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ” ಎಂದು ತಿಳಿಸಿದರು.

“ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ. ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ” ಎಂದು ತಿಳಿಸಿದರು.

ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, “ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್ ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ” ಎಂದು ಸ್ಪಷ್ಟನೆ ನೀಡಿದರು.

ಅಸೂಯೆಯಿಂದ ಕುಮಾರಸ್ವಾಮಿ ಟೀಕೆ:

ರಾಜ್ಯ ಸರ್ಕಾರ ದಿವಾಳಿಯಾಗುತ್ತಿದ್ದು, ಗ್ಯಾರಂಟಿ ಯೋಜನೆಗಳಿಂದಲೇ ಸರ್ಕಾರ ಪತನವಾಗಲಿದೆ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಈ ಗ್ಯಾರಂಟಿ ಯೋಜನೆಗಳನ್ನು ಕಂಡು ಕುಮಾರಸ್ವಾಮಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. “ಕಾಂಗ್ರೆಸ್ ನವರು 5 ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದಾರೆ. ನಿಮ್ಮ ಅಧಿಕಾರ ಅವಧಿಯಲ್ಲಿ ಇಂತಹ ಒಂದು ಯೋಜನೆ ಕೊಟ್ಟಿಲ್ಲ, ಬಡವರಿಗೆ ನಿವೇಶನ ಕೊಟ್ಟಿಲ್ಲ, ಊರು ಅಭಿವೃದ್ಧಿ ಮಾಡಿಲ್ಲ. ಹೀಗಾಗಿ ಯಾಕೆ ಮತ ಕೇಳುತ್ತೀರಿ ಎಂದು ಜನ ಅವರನ್ನು ಧಿಕ್ಕರಿಸುತ್ತಿದ್ದಾರೆ. ಅದನ್ನು ಸಹಿಸಲಾಗದೆ ನನಗೆ ಈ ಅವಕಾಶ ಸಿಗಲಿಲ್ಲವಲ್ಲ ಎಂದು ಕುಮಾರಸ್ವಾಮಿ ಅಸೂಯೆಯಿಂದ ತಮ್ಮ ಕೈ ಹಿಸುಕಿಕೊಳ್ಳುತ್ತಿದ್ದಾರೆ” ಎಂದು ತಿಳಿಸಿದರು.

ಇನ್ನೂ ಎಂಟೂವರೆ ವರ್ಷ ಕಾಂಗ್ರೆಸ್ ಸರ್ಕಾರ ಆಡಳಿತ:

ಆರು ತಿಂಗಳ ಒಳಗಾಗಿ ರಾಜ್ಯಪಾಲರ ಆಡಳಿತ ಬರಲಿದೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರ ಬೀಳಿಸಲು ಷಡ್ಯಂತ್ರ ರೂಪಿಸುತ್ತಿದ್ದಾರೆ. ಆದರೆ ಅದು ಅವರ ಹಣೆಯಲ್ಲಿ ಬರೆದಿಲ್ಲ. ಈ ವಿಶೇಷವಾದ ದಿನ ನೀವು ಬರೆದಿಟ್ಟುಕೊಳ್ಳಿ, ಮುಂದಿನ ಎಂಟೂವರೆ ವರ್ಷಗಳ ಕಾಲ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರ ನಡೆಸಲಿದೆ” ಎಂದು ಸ್ಪಷ್ಟಪಡಿಸಿದರು.

ಅತ್ಯುತ್ತಮ ಸಲಹೆ ನೀಡಿದ್ದಾರೆ:

ಬೆಂಗಳೂರು ಅಭಿವೃದ್ಧಿ ಹಾಗೂ ರಸ್ತೆ ವಿಚಾರವಾಗಿ ಉದ್ಯಮಿ ಕಿರಣ್ ಮಜೂಮ್ದಾರ್ ಶಾ ಅವರ ಜತೆಗಿನ ಚರ್ಚೆ ಬಗ್ಗೆ ಕೇಳಿದಾಗ, “ನಾನು ಚರ್ಚೆ ಮಾಡಿದ್ದೇನೆ, ಅಧಿಕಾರಿಗಳಿಗೂ ಅವರ ಜತೆ ಚರ್ಚೆ ಮಾಡುವಂತೆ ತಿಳಿಸಿದ್ದೆ. ಅವರು ಅನೇಕ ಸಲಹೆ ನೀಡಿದ್ದಾರೆ. ಕೆಲವು ಸಲಹೆ ಅತ್ಯುತ್ತಮವಾಗಿದ್ದು, ಅವುಗಳನ್ನು ನಾವು ಸ್ವೀಕರಿಸುತ್ತೇವೆ. ಅವರು ತಮ್ಮದೇ ಆದ ವರದಿ ಸಿದ್ಧಪಡಿಸಿಕೊಂಡು ನೀಡಿದ್ದಾರೆ” ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ಚುನಾವಣಾ ಪ್ರಚಾರದಲ್ಲಿ ಯಾವಾಗ ಭಾಗವಹಿಸುತ್ತೀರಿ ಎಂದು ಕೇಳಿದಾಗ, “ನಾನು ಹಾಗೂ ರಾಮಲಿಂಗಾ ರೆಡ್ಡಿ ಅವರು ಈಗಾಗಲೇ 25 ಬಾರಿj ಹೋಗಿ ಬಂದಿದ್ದೇವೆ. ನಾವು ಒಂದೊಂದು ದಿನ ಮಾತ್ರ ಜಂಟಿ ಪ್ರಚಾರ ಮಾಡುತ್ತೇವೆ. ಇತರ ದಿನಗಳಲ್ಲಿ ನಮ್ಮ ನಾಯಕರು ಪ್ರಚಾರ ಮಾಡುತ್ತಾರೆ” ಎಂದು ತಿಳಿಸಿದರು.

ಬಿಜೆಪಿಗೆ ರಾಜಕೀಯ ಮಾಡಲು ಬೇರೆ ವಿಚಾರ ಇಲ್ಲ:

ಸರ್ಕಾರದ ಸ್ಪಷ್ಟನೆ ಹೊರತಾಗಿಯೂ ಬಿಜೆಪಿ ವಕ್ಫ್ ವಿಚಾರದಲ್ಲಿ ಪ್ರತಿಭಟನೆಗೆ ಮುಂದಾಗಿರುವ ಬಗ್ಗೆ ಕೇಳಿದಾಗ, “ನಮ್ಮ ಸರ್ಕಾರದ ವಿರುದ್ಧ ಟೀಕೆ ಮಾಡಲು ಬಿಜೆಪಿಯವರ ಬಳಿ ವಿಚಾರಗಳಿಲ್ಲ. ಹೀಗಾಗಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅವರ ಕಾಲದಲ್ಲೇ ಮೊದಲು ನೋಟೀಸ್ ನೀಡಲಾಗಿದೆ. ಕೋಮು ಗಲಭೆ ಸೃಷ್ಟಿಸಿ, ದೇಶ ಹಾಗೂ ರಾಜ್ಯ ಒಡೆಯಬೇಕು ಎಂಬುದು ಅವರ ಉದ್ದೇಶ” ಎಂದು ತಿಳಿಸಿದರು.

ಪ್ರಿಯಾಂಕಾ ಗಾಂಧಿ ಕೂಡ ವಯನಾಡಿಗೆ ವಲಸಿಗರು ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರಾಗಲಿ, ಅವರ ಗೌಡರ ಕುಟುಂಬದವರಾಗಲಿ ಗಾಂಧಿ ಕುಟುಂಬದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿಲ್ಲ. ಗಾಂಧಿ ಕುಟುಂಬ ದೇಶವನ್ನು ಒಂದಾಗಿ ಇಟ್ಟಿದೆ. ಆ ಕುಟುಂಬದ ಕೊಡುಗೆಯನ್ನು ಸರಿದೂಗಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಹಿಂದೆ ಇಂದಿರಾ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರು ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದರು” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ರಾಯಚೂರಲ್ಲಿ 6 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಹೋಂಗಾರ್ಡ್ ಕಮಾಂಡೆಂಟ್

04/06/2025 7:57 AM1 Min Read

BREAKING : ‘RCB’ ಅಭಿಮಾನಿಗಳಿಗೆ ಸಿಹಿಸುದ್ದಿ : ಇಂದು ಸಂಜೆ ಬೆಂಗಳೂರಲ್ಲಿ ಕೊಹ್ಲಿ ಬಾಯ್ಸ್ ನಿಂದ ‘ವಿಜಯಯಾತ್ರೆ’

04/06/2025 7:41 AM1 Min Read

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM1 Min Read
Recent News

BREAKING: ಡಚ್ ಸರ್ಕಾರ ಪತನ: ಪ್ರಧಾನಿ ಡಿಕ್ ಸ್ಕೋಫ್ ರಾಜೀನಾಮೆ | Dutch govt collapses

04/06/2025 7:58 AM

BREAKING : ರಾಯಚೂರಲ್ಲಿ 6 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಹೋಂಗಾರ್ಡ್ ಕಮಾಂಡೆಂಟ್

04/06/2025 7:57 AM

Axiom-4 mission : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ನಿಲ್ದಾಣ ಉಡಾವಣೆ ಜೂ. 10 ಕ್ಕೆ ಮುಂದೂಡಿಕೆ

04/06/2025 7:43 AM

BREAKING : ‘RCB’ ಅಭಿಮಾನಿಗಳಿಗೆ ಸಿಹಿಸುದ್ದಿ : ಇಂದು ಸಂಜೆ ಬೆಂಗಳೂರಲ್ಲಿ ಕೊಹ್ಲಿ ಬಾಯ್ಸ್ ನಿಂದ ‘ವಿಜಯಯಾತ್ರೆ’

04/06/2025 7:41 AM
State News
KARNATAKA

BREAKING : ರಾಯಚೂರಲ್ಲಿ 6 ಸಾವಿರ ಲಂಚ ಸ್ವೀಕರಿಸುವ ವೇಳೆ, ಲೋಕಾಯುಕ್ತ ಬಲೆಗೆ ಬಿದ್ದ ಹೋಂಗಾರ್ಡ್ ಕಮಾಂಡೆಂಟ್

By kannadanewsnow0504/06/2025 7:57 AM KARNATAKA 1 Min Read

ರಾಯಚೂರು : ಹೋಂ ಗಾರ್ಡ್ ಕೆಲಸಕ್ಕೆ ನಿಯೋಜಿಸಲು 6 ಸಾವಿರ ಲಂಚ ಸ್ವೀಕರಿಸುವ ಹೋಂ ಗಾರ್ಡ್ ಕಮಾಂಡೆಂಟ್ ಒಬ್ಬರು ವೇಳೆ…

BREAKING : ‘RCB’ ಅಭಿಮಾನಿಗಳಿಗೆ ಸಿಹಿಸುದ್ದಿ : ಇಂದು ಸಂಜೆ ಬೆಂಗಳೂರಲ್ಲಿ ಕೊಹ್ಲಿ ಬಾಯ್ಸ್ ನಿಂದ ‘ವಿಜಯಯಾತ್ರೆ’

04/06/2025 7:41 AM

17 ವರ್ಷ ವನವಾಸದ ಬಳಿಕ ಚೊಚ್ಚಲ ಐಪಿಎಲ್ ಟ್ರೊಫಿ ಗೆದ್ದ ‘RCB’ : ಬೆಂಗಳೂರಲ್ಲಿ ಮುಗಿಲು ಮುಟ್ಟಿದ್ದ ಸಂಭ್ರಮಾಚರಣೆ!

04/06/2025 7:22 AM

BREAKING : ಬೆಂಗಳೂರಲ್ಲಿ 2 ಬೈಕ್‌ಗಳ ಮಧ್ಯ ಭೀಕರ ಅಪಘಾತ : ಇಬ್ಬರು ಸಾವು, ಇನ್ನಿಬ್ಬರಿಗೆ ಗಂಭೀರ ಗಾಯ!

04/06/2025 7:06 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.