Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

20/06/2025 1:30 PM

SHOCKING : ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

20/06/2025 1:26 PM

Operation Sindhu: ಇಸ್ರೇಲ್ನಿಂದ ಸಿಕ್ಕಿಬಿದ್ದ ನಾಗರಿಕರನ್ನು ಸ್ಥಳಾಂತರಿಸಲು ಅವಕಾಶ ನೀಡಿದ ಕೇಂದ್ರಕ್ಕೆ ಇಂಡಿಗೋ ಧನ್ಯವಾದ

20/06/2025 1:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾವನೆಗಳ ಮೇಲೆ ಆಟವಾಡುವುದೇ ವಿರೋಧ ಪಕ್ಷದ ನಾಯಕರ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ
KARNATAKA

ಭಾವನೆಗಳ ಮೇಲೆ ಆಟವಾಡುವುದೇ ವಿರೋಧ ಪಕ್ಷದ ನಾಯಕರ ಕೆಲಸ: ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆ

By kannadanewsnow0901/11/2024 2:49 PM

ಬೆಂಗಳೂರು: ನಾವು ಜಾರಿಗೆ ತಂದಿರುವ ಜನಪರ ಗ್ಯಾರಂಟಿ ಯೋಜನೆಗಳನ್ನು ವಿರೋಧ ಪಕ್ಷದವರಿಂದ ಮಾಡಲು ಆಗಲಿಲ್ಲ.ಅಕ್ಕ-ತಂಗಿ, ತಂದೆ-ಮಗ, ಅಪ್ಪ-ಮಕ್ಕಳ ನಡುವೆ ಜಗಳ ತಂದಿಟ್ಟು, ಭಾವನೆಗಳ ಮೇಲೆ ಆಟವಾಡುವುದೇ ಅವುಗಳ ಕೆಲಸ. ಹೀಗೆ ಮಾಡಿ ಎಷ್ಟೋ ಮನೆಗಳನ್ನು ಒಡೆದು ಹಾಕಿವೆ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು.

ಕಂಠೀರವ ಸ್ಟೇಡಿಯಂ ಬಳಿ ಮಾಧ್ಯಮಗಳಿಗೆ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.

ಮಲ್ಲಿಕಾರ್ಜುನ ಖರ್ಗೆ ಅವರು ಗ್ಯಾರಂಟಿ ವಿಚಾರವಾಗಿ ಗುರವಾರ ಪ್ರಸ್ತಾಪಿಸಿದ ಮಾತುಗಳ ಬಗ್ಗೆ ಕೇಳಿದಾಗ, “ವಿರೋಧ ಪಕ್ಷದವರಿಗೆ ರಾಜಕೀಯ ಹೊರತಾಗಿ ಯಾವ ವಿಚಾರಗಳೂ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಗಳು ಸಂಸಾರಗಳನ್ನು ಹಾಳು ಮಾಡುತ್ತವೇ ಎಂದು ಹೇಳಿದ್ದರು. ಆದರೆ ಅವರು ಹೇಳಿದಂತೆ ಆಗಲಿಲ್ಲ. ನಮ್ಮ ಕೆಲಸಗಳನ್ನು ನೋಡಿ, ಹೊಟ್ಟೆಕಿಚ್ಚು ಪಡುತ್ತಿದ್ದಾರೆ” ಎಂದರು.

ಹಿರಿಯರ ಬುದ್ಧಿ ಮಾತು ಕೇಳಬೇಕು

“ಮಲ್ಲಿಕಾರ್ಜುನ ಖರ್ಗೆಯವರು ಹಿರಿಯರು. ಅವರು ಬುದ್ಧಿಮಾತು ಹೇಳಿದರೆ ನಾವು ಕೇಳಬೇಕು. ನಾನು ಶಕ್ತಿ ಯೋಜನೆ ವಿಚಾರವಾಗಿ ಹೇಳಿರುವ ಮಾತುಗಳನ್ನು ಮತ್ತೊಮ್ಮೆ ಎಲ್ಲರು ಕೇಳಿಸಿಕೊಂಡು ನೋಡಿ” ಎಂದರು.

ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ

“ಶಕ್ತಿ ಯೋಜನೆ ಕುರಿತು ಶೇ. 5-10 ರಷ್ಟು ಮಹಿಳೆಯರ ಅಭಿಪ್ರಾಯಗಳನ್ನು ನಾನು ಹೇಳಿದನೇ ಹೊರತು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಒಂದಷ್ಟು ಜನ ಮಹಿಳೆಯರು ಟಿಕೆಟ್ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರೂ ಬಸ್ ನಿರ್ವಾಹಕರು ಹಣ ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಇದರ ಬಗ್ಗೆ ಯೋಚನೆ ಮಾಡಬೇಕು ಎಂದು ಹೇಳಿದ್ದೆ ಅಷ್ಟೇ” ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಮತ್ತು ಪಕ್ಷ ಅಚ್ಚುಕಟ್ಟಾಗಿ ನಡೆಯುತ್ತಿದೆ

ಮಲ್ಲಿಕಾರ್ಜುನ ಖರ್ಗೆ ಅವರು ಒಗ್ಗಟ್ಟಾಗಿ ಇರಿ ಎನ್ನುವ ಸಂದೇಶ ಕೊಟ್ಟಿದ್ದು ಯಾವ ಕಾರಣಕ್ಕೆ ಎಂದು ಕೇಳಿದಾಗ, “ಅವರು ವಿವಿಧ ಸಂದರ್ಭಗಳನ್ನು ವಿವರಿಸಿ ಕಾರ್ಯಕರ್ತರಿಗೆ ಸಂದೇಶ ನೀಡಿದ್ದಾರೆ. ನಾನು ಅಧ್ಯಕ್ಷನಾದ ಹಾಗೂ ಡಿಸಿಎಂ ಆದ ನಂತರ ಪಕ್ಷ ಹಾಗೂ ಸರ್ಕಾರದಲ್ಲಿ ಯಾವುದಾದರೂ ಅಹಿತಕರ ಘಟನೆಗಳು ನಡೆದಿವೆಯೇ? ನಾವುಗಳು ಅಚ್ಚುಕಟ್ಟಾಗಿ ಸರ್ಕಾರ ಹಾಗೂ ಪಕ್ಷವನ್ನು ನಡೆಸಿಕೊಂಡು ಹೋಗುತ್ತಿದ್ದೇವೆ” ಎಂದರು.

ಒಂದಷ್ಟು ನಾಯಕರು ದೆಹಲಿಗೆ ಬಂದು ಭೇಟಿ ಮಾಡುತ್ತಿರುವ ಬಗ್ಗೆ ಖರ್ಗೆ ಅವರು ಪ್ರಸ್ತಾಪಿಸಿದ ಬಗ್ಗೆ ಕೇಳಿದಾಗ, “ಯಾರೂ ದೆಹಲಿಗೆ ತೆರಳಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಯಾವುದೇ ವಿಚಾರದಲ್ಲೂ ಮಧ್ಯಪ್ರವೇಶ ಮಾಡಿಲ್ಲ. ಇದುವರೆಗೂ ಇಂತಹ ಘಟನೆ ನಡೆದಿಲ್ಲ. ಅವರು ಹಿರಿಯರಾಗಿ ಸಲಹೆ ನೀಡಿದ್ದಾರೆ. ರಾಷ್ಟ್ರ ರಾಜಕಾರಣದ ವಿಚಾರವನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ್ದಾರೆ. ಮೀಸಲಾತಿ ವಿಚಾರವಾಗಿ ಒಂದೊಂದು ರಾಜ್ಯ ಒಂದೊಂದು ನೀತಿ ಅಳವಡಿಸಿಕೊಂಡಿವೆ. ಸ್ಥಳೀಯವಾಗಿ ನಿಮ್ಮ ನೀತಿಯನ್ನು ನೀವು ನಿರೂಪಿಸಿಕೊಳ್ಳಿ. ಅದರಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮಾರ್ಮಿಕವಾಗಿ ಅವರು ಹೇಳಿದ್ದಾರೆ” ಎಂದರು.

ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿ

ಮಹಾರಾಷ್ಟ್ರದಲ್ಲಿಯೂ ಕರ್ನಾಟಕ ಮಾದರಿ ಗ್ಯಾರಂಟಿ ಯೋಜನೆಗಳ ಜಾರಿ ಬಗ್ಗೆ ಕೇಳಿದಾಗ, “ಕರ್ನಾಟಕ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳು, ದೇಶದ ಎಲ್ಲಾ ರಾಜ್ಯಗಳಿಗೂ ಮಾದರಿಯಾಗಿವೆ. ಬಿಜೆಪಿ ಹಾಗೂ ಇತರೇ ಪಕ್ಷಗಳ ಆಡಳಿತವಿರುವ ರಾಜ್ಯಗಳು ಸಹ ನಮ್ಮದೇ ಯೋಜನೆಗಳನ್ನು ಅನುಕರಿಸಿವೆ. ಇದು ನಮಗೆ ಹೆಮ್ಮೆ ಹಾಗೂ ಗರಿಮೆಯ ವಿಚಾರ” ಎಂದು ಹೇಳಿದರು.

ಯತ್ನಾಳ್ ಮಾನಸಿಕ ಅಸ್ವಸ್ಥ

ವಕ್ಫ್ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರಧಾನಿಗೆ ಪತ್ರ ಬರೆದಿರುವ ವಿಚಾರ ಕೇಳಿದಾಗ, “ಮಾನಸಿಕವಾಗಿ ಅಸ್ವಸ್ಥರಾಗಿರುವ, ಹುಚ್ಚಾಸ್ಪತ್ರೆ ಸೇರಬೇಕಿರುವ ವ್ಯಕ್ತಿಗಳ ಹೇಳಿಕೆಗಳ ಬಗ್ಗೆ ನಾನು ಪ್ರತಿಕ್ರಿಯಿಸುವುದಿಲ್ಲ” ಎಂದರು.

ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ

“ಕರ್ನಾಟಕ ಏಕೀಕರಣಗೊಂಡು 69 ವರ್ಷ ಹಾಗೂ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದೇವೆ. ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ಅಂತಾರಾಷ್ಟ್ರೀಯ ಮಟ್ಟದ ನೃತ್ಯ ಹಾಗೂ ಇತರ ಕಾರ್ಯಕ್ರಮ ನೀಡಿದ್ದಾರೆ. ಈ ಎಲ್ಲಾ ಮಕ್ಕಳಿಗೆ ಪ್ರಮಾಣ ಪತ್ರ ನೀಡಬೇಕು ಎಂದು ಸಚಿವರು ಹಾಗೂ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕನ್ನಡ ನಾಡಿಗಾಗಿ ಶಾಲಾ ಮಕ್ಕಳು ಶ್ರಮಪಟ್ಟು ಕಾರ್ಯಕ್ರಮ ಮಾಡಿರುತ್ತಾರೆ” ಎಂದು ತಿಳಿಸಿದರು.

ಶೇ.70 ರಷ್ಟು ಸಂಸ್ಥೆಗಳಿಂದ ಆಚರಣೆ

“ಈ ಬಾರಿ ರಾಜ್ಯೋತ್ಸವ ಕಾರ್ಯಕ್ರಮ ಮಾಡುವಂತೆ ಎಲ್ಲಾ ಖಾಸಗಿ ಸಂಸ್ಥೆಗಳು ಹಾಗೂ ವಿದ್ಯಾ ಸಂಸ್ಥೆಗಳಿಗೆ ಸೂಚನೆ ನೀಡಲಾಗಿತ್ತು. ಶೇಕಡಾ 70 ರಷ್ಟು ಸಂಸ್ಥೆಗಳು ಈ ಕಾರ್ಯಕ್ರಮ ಮಾಡಿವೆ. ಸರ್ಕಾರದ ವತಿಯಿಂದ ಮೊದಲ ಹಂತದಲ್ಲಿ ಈ ಆದೇಶ ನೀಡಿದ್ದೇವೆ. ಎಲ್ಲರೂ ಸ್ವಯಂ ಪ್ರೇರಿತರಾಗಿ ಭಾಷೆ ಹಾಗೂ ಸಂಸ್ಕೃತಿ ಕಾಪಾಡಿಕೊಂಡು ಹೋಗಲು ಸೂಚಿಸಿದ್ದೆವು. ಖಾಸಗಿ ಸಂಸ್ಥೆಗಳ ವಿರುದ್ಧ ಕಾನೂನು ಕೈಗೆತ್ತಿಕೊಳ್ಳದಂತೆ ನಾವು ನಿರ್ದೇಶನ ನೀಡಿದ್ದೆವು” ಎಂದರು.

ಕನ್ನಡಕ್ಕೆ ಅಪಮಾನ ಮಾಡುವವರ ವಿರುದ್ಧ ನಾಡದ್ರೋಹದ ಕಾನೂನು ಕ್ರಮ ಕೈಗೊಳ್ಳುವ ಕಾಯ್ದೆ ತರಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದಲ್ಲಿ ಬೇರೆ ದೇಶ ಹಾಗೂ ರಾಜ್ಯಗಳ ಜನ ಬಂದು ಬದುಕು ನಡೆಸುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು, ಅದರಲ್ಲೂ ಕ್ರೈಸ್ತ ಶಿಕ್ಷಣ ಸಂಸ್ಥೆಗಳು ಬಹಳ ಶ್ರದ್ಧೆಯಿಂದ ರಾಜ್ಯೋತ್ಸವವನ್ನು ಆಚರಣೆ ಮಾಡಿವೆ” ಎಂದು ಹೇಳಿದರು.

BIG NEWS : ಭಾರತದ ಮೊದಲ ಅನಲಾಗ್ ಬಾಹ್ಯಾಕಾಶ ಮಿಷನ್ ಆರಂಭಿಸಿದ `ಇಸ್ರೋ’ | ISRO

ಕನ್ನಡ ಭಾಷೆ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಒಗ್ಗೂಡಬೇಕಿದೆ : ಸಚಿವ ಕೃಷ್ಣಬೈರೇಗೌಡ

Share. Facebook Twitter LinkedIn WhatsApp Email

Related Posts

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

20/06/2025 1:30 PM1 Min Read

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

20/06/2025 1:08 PM2 Mins Read

Alert : ರಾತ್ರಿ ಮೊಬೈಲ್ ಚಾರ್ಜ್‌ ಹಾಕಿ ಮಲಗುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

20/06/2025 12:55 PM2 Mins Read
Recent News

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

20/06/2025 1:30 PM

SHOCKING : ವಿಕಲಚೇತನ ತಂದೆಯ ಮೇಲೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ : ಬೆಚ್ಚಿ ಬೀಳಿಸುವ ವಿಡಿಯೋ ವೈರಲ್ | WATCH VIDEO

20/06/2025 1:26 PM

Operation Sindhu: ಇಸ್ರೇಲ್ನಿಂದ ಸಿಕ್ಕಿಬಿದ್ದ ನಾಗರಿಕರನ್ನು ಸ್ಥಳಾಂತರಿಸಲು ಅವಕಾಶ ನೀಡಿದ ಕೇಂದ್ರಕ್ಕೆ ಇಂಡಿಗೋ ಧನ್ಯವಾದ

20/06/2025 1:19 PM

BREAKING: ಎಲ್ಲಾ ಹೊಸ ದ್ವಿಚಕ್ರ ವಾಹನಗಳಿಗೆ ABS ಮತ್ತು ಎರಡು ಹೆಲ್ಮೆಟ್ ಕಡ್ಡಾಯ : ಸಾರಿಗೆ ಸಚಿವಾಲಯ ಅನುಮೋದನೆ

20/06/2025 1:14 PM
State News
KARNATAKA

JOB ALERT : ಆರೋಗ್ಯ ಇಲಾಖೆಯಲ್ಲಿ ನೇರ ಸಂದರ್ಶನದ ಮೂಲಕ ಖಾಲಿ ಹುದ್ದೆಗಳ ಭರ್ತಿ

By kannadanewsnow5720/06/2025 1:30 PM KARNATAKA 1 Min Read

ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಕಾರ್ಯಕ್ರಮವು ಗುತ್ತಿಗೆ ಆಧಾರದ ಮೇಲೆ ಖಾಲಿ ಹುದ್ದೆಗಳಾದ ನ್ಯೂರಾಲಜಿಸ್ಟ್, ಶುಶ್ರ‍್ರೂಷಕ ಅಧಿಕಾರಿ, ಫಿಸಿಯೊಥೆರಪಿಸ್ಟ್, ಕ್ಲಿನಿಕಲ್…

BIG NEWS : `ಆಧಾರ್ ಕಾರ್ಡ್’ ನಲ್ಲಿ ಹೆಸರು, ವಿಳಾಸ, ಜನ್ಮದಿನಾಂಕ `ಅಪ್ ಡೇಟ್’ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

20/06/2025 1:08 PM

Alert : ರಾತ್ರಿ ಮೊಬೈಲ್ ಚಾರ್ಜ್‌ ಹಾಕಿ ಮಲಗುವವರೇ ಎಚ್ಚರ : ನಿಮ್ಮ ಫೋನ್ ಬಾಂಬ್ ನಂತೆ ಬ್ಲ್ಯಾಸ್ಟ್ ಆಗಬಹುದು.!

20/06/2025 12:55 PM

BREAKING : ಕಲಬುರಗಿ ಡಿಸಿ ವಿರುದ್ಧ ಎನ್. ರವಿಕುಮಾರ್ ಆಕ್ಷೇಪಾರ್ಹ ಹೇಳಿಕೆ : ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಮಧ್ಯಂತರ ಆದೇಶ ವಿಸ್ತರಣೆ.!

20/06/2025 12:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.