Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM

ಪಹಲ್ಗಾಮ್ ಬಗ್ಗೆ ಹೇಳಿಕೆ: ಜಮ್ಮು ಮತ್ತು ಕಾಶ್ಮೀರ ಸೈನಿಕನ ವಿರುದ್ಧ FIR

15/05/2025 8:41 AM

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ಗ್ರಾಮ ಪಂಚಾಯಿತಿ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ
KARNATAKA

ಚಿತ್ರದುರ್ಗ: ಗ್ರಾಮ ಪಂಚಾಯಿತಿ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ

By kannadanewsnow0906/11/2024 6:38 PM

ಚಿತ್ರದುರ್ಗ : ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2024ರ ನ.06 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ನ.06ರ ಇಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ.

ನ.12ರಂದು ಮಂಗಳವಾರ ನಾಮ ಪತ್ರ ಸಲ್ಲಿಸಲು ಕೊನೆಯ ದಿನ. ನ.13ರಂದು ಬುಧವಾರ ನಾಮಪತ್ರಗಳ ಪರಿಶೀಲನೆ, ನ.15ರಂದು ಶುಕ್ರವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನ.23ರಂದು ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನ ಅವಶ್ಯವಿದ್ದರೆ ನ.25ರಂದು ಸೋಮವಾರ ನಡೆಸಲಾಗುವುದು. ನ.26ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ನ.26ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ ಹೀಗಿದೆ

ಮೊಳಕಾಲ್ಮುರು ತಾಲ್ಲೂಕು –  ಜಹಗೀರ್ ಬುಡ್ಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಹೊಸಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೋಬನಹಳ್ಳಿ-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡ್ಲಹಳ್ಳಿ-5 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ ಮಹಿಳೆ).

ಚಳ್ಳಕೆರೆ ತಾಲ್ಲೂಕು: ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯ ಅಬ್ಬೇನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ ಮಹಿಳೆ), ಚೌಳಕೆರೆ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ), ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಿಕೇನಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ಮೈಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ದೊಡ್ಡಚೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಚೆಲ್ಲೂರು-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಗಲಗಟ್ಟೆ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ).  ಕ್ಯಾತಗೊಂಡನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ).

ಚಿತ್ರದುರ್ಗ ತಾಲ್ಲೂಕು: ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಭರಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಮಸಾಗರ-4 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಪಣ್ಣನಾಯಕನಕೋಟೆ-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ).

ಹಿರಿಯೂರು ತಾಲ್ಲೂಕು: ಮದಕರಿನಾಯಕನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಕರಿನಾಯಕನ ಕೋಟೆ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಾಪುರ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಬ”), ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಹಳ್ಳದ ವಡ್ಡರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ಯಲ್ಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂದಿಗನಡು ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಹಳ್ಳಿ-2 ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ).

ಹೊಸದುರ್ಗ ತಾಲ್ಲೂಕು: ಜಾನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಾಭೋವಿಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಬೆಲಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಯನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಶ್ರೀರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಂಪುರ-2 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಅ”).

ಹೊಳಲ್ಕೆರೆ ತಾಲ್ಲೂಕು: ತೇಕಲವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇಕಲವಟ್ಟಿಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಅ”-ಮಹಿಳೆ) ಹಾಗೂ 1 ಸದಸ್ಯ ಸ್ಥಾನ (ಸಾಮಾನ್ಯ) ವರ್ಗಕ್ಕೆ ಮೀಸಲಾಗಿದೆ. ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಯಾಗಳಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ)ಕ್ಕೆ ಉಪ ಚುನಾವಣೆ ನಿಗಧಿಯಾಗಿದ್ದು, ಚುನಾವಣೆ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: ಶಾಲಾ ಶಿಕ್ಷಣ ಇಲಾಖೆಯಿಂದ SSLC ಮುಖ್ಯ ಪರೀಕ್ಷೆಯ ‘NSQF ಪರೀಕ್ಷಾ’ ಪ್ರಕ್ರಿಯೆ ಬಗ್ಗೆ ಮಾರ್ಗಸೂಚಿ ಪ್ರಕಟ

ರೈತರ ಗಮನಕ್ಕೆ: ‘ಬೆಳೆ ಹಾನಿ’ ರೈತರ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

15/05/2025 8:26 AM1 Min Read

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM2 Mins Read

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM1 Min Read
Recent News

ವಾರಕ್ಕೆ 52 ಗಂಟೆಗಳಷ್ಟು ಹೆಚ್ಚು ಕೆಲಸ ಮಾಡುವುದು ಮೆದುಳಿನ ರೂಪ ಸ್ಪಷ್ಟತೆ ಬದಲಾಯಿಸಬಹುದು: ಅಧ್ಯಯನ

15/05/2025 8:49 AM

ಪಹಲ್ಗಾಮ್ ಬಗ್ಗೆ ಹೇಳಿಕೆ: ಜಮ್ಮು ಮತ್ತು ಕಾಶ್ಮೀರ ಸೈನಿಕನ ವಿರುದ್ಧ FIR

15/05/2025 8:41 AM

ಕ್ಯಾನ್ಸರ್ ಲಕ್ಷಣಗಳು ಕಾಣಿಸಿಕೊಳ್ಳುವ ಮೊದಲೇ ನಾಯಿಗಳು ಕ್ಯಾನ್ಸರ್ ಅನ್ನು ಪತ್ತೆ ಹಚ್ಚುತ್ತವೆ: ವರದಿ

15/05/2025 8:33 AM

ಇಸ್ತಾಂಬುಲ್ ನಲ್ಲಿ ಉಕ್ರೇನ್ ಶಾಂತಿ ಮಾತುಕತೆಯಿಂದ ಹೊರಗುಳಿದ ಪುಟಿನ್ | Russia-Ukraine war

15/05/2025 8:29 AM
State News
KARNATAKA

ಬೆಂಗಳೂರಲ್ಲಿ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ

By kannadanewsnow0915/05/2025 8:26 AM KARNATAKA 1 Min Read

ಬೆಂಗಳೂರು: ಮೇ.18ರವರೆಗೆ ನಡೆಯಲಿರುವ ಸೌಗಂಧಿಕಾ ಬಿಂದುಮತಿ ಅವರ ಏಕವ್ಯಕ್ತಿ ಕಲಾಪ್ರದರ್ಶನಕ್ಕೆ ಹಿರಿಯ ಕಲಾವಿದ ಎ.ಎಂ ಪ್ರಕಾಶ್ ಚಾಲನೆ ನೀಡಿದರು. ಬೆಂಗಳೂರಿನ…

ಕುವೆಂಪು ವಿವಿಯಿಂದ ಪದವಿ ಪ್ರದಾನಕ್ಕೆ ಅರ್ಜಿ ಆಹ್ವಾನ

15/05/2025 8:16 AM

ಪಿಎಸ್‌ಐ ನೇಮಕಾತಿಗೆ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಆಹ್ವಾನ

15/05/2025 8:14 AM

Lokayukta Raid | ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಗ್ ಶಾಕ್ : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

15/05/2025 8:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.